AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ನೇತ್ರಾಳಿಂದ ಹತ್ಯೆಗೊಳಗಾಗಿದ್ದ ಉದ್ಯಮಿ ಸ್ವಾಮಿರಾಜನ್ ಮನೆಯಲ್ಲಿ ಕಳವು; ಮಡದಿ ಜೈಲಿನಲ್ಲೇ ವಾಸ

ಸ್ವಾಮಿರಾಜನ್ ಕೊಲೆಯ ನಂತರ ಪತ್ನಿ ನೇತ್ರಾ ಜೈಲು ಸೇರಿದ್ದಾಳೆ. ಹೀಗಾಗಿ ಮನೆಯ ಬಾಗಿಲು, ಕಿಟಕಿ ಸರಳು ಮುರಿದು ಕಳ್ಳತನ ಮಾಡಲಾಗಿದ್ದು, ಕದ್ದ ವಸ್ತುಗಳ ನಿಗದಿತ ಮೌಲ್ಯದ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿ ನೇತ್ರಾಳಿಂದ ಹತ್ಯೆಗೊಳಗಾಗಿದ್ದ ಉದ್ಯಮಿ ಸ್ವಾಮಿರಾಜನ್ ಮನೆಯಲ್ಲಿ ಕಳವು; ಮಡದಿ ಜೈಲಿನಲ್ಲೇ ವಾಸ
ನೇತ್ರಾ ಮತ್ತು ಕಳ್ಳತನವಾದ ಮನೆ
TV9 Web
| Edited By: |

Updated on:Nov 30, 2021 | 12:08 PM

Share

ಬೆಂಗಳೂರು: ಪತ್ನಿಯಿಂದಲೇ ಹತ್ಯೆಗೊಳಗಾಗಿದ್ದ ಉದ್ಯಮಿ ಸ್ವಾಮಿರಾಜನ್ ಮನೆಯಲ್ಲಿ ಕಳ್ಳತನವಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಹಾರೋಕ್ಯಾತನಹಳ್ಳಿಯ ಸ್ವಾಮಿರಾಜನ್ ಮನೆಯಲ್ಲಿ ಯಾರು ಇರದೆ ಇರುವುದನ್ನು ಕಂಡು ಕಳ್ಳತನ ಮಾಡಲಾಗಿದೆ. ಸ್ವಾಮಿರಾಜನ್ ಕೊಲೆಯ ನಂತರ ಪತ್ನಿ (Wife) ನೇತ್ರಾ ಜೈಲು ಸೇರಿದ್ದಾಳೆ. ಹೀಗಾಗಿ ಮನೆಯ ಬಾಗಿಲು, ಕಿಟಕಿ ಸರಳು ಮುರಿದು ಕಳ್ಳತನ (Theft) ಮಾಡಲಾಗಿದ್ದು, ಕದ್ದ ವಸ್ತುಗಳ ನಿಗದಿತ ಮೌಲ್ಯದ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್​ 7ರಂದು ಹಾರೋಕ್ಯಾತನಹಳ್ಳಿಯಲ್ಲಿ ನೇತ್ರಾ ( 37) ತನ್ನ ಪತಿಯನ್ನು ಕೊಲೆ ಮಾಡಿದ್ದಳು. 2ನೇ ಪತ್ನಿಯಾಗಿದ್ದ ನೇತ್ರಾ ಎಂಬುವವರು ಮಧ್ಯರಾತ್ರಿ ತುಮಕೂರು ರಸ್ತೆಯ ಸಮೀಪದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ಆಗಮಿಸಿ, ತನ್ನ ಗಂಡ ಉದ್ಯಮಿ ಸ್ವಾಮಿರಾಜನ್ (50) ಅವರನ್ನು ಕೊಲೆ ಮಾಡಿ, ಬಳಿಕ ಪೊಲೀಸರ ಬಳಿ ಬಂದು ತಪ್ಪೊಪ್ಪಿಕೊಂಡಿದ್ದರು.

ರಿಯಲ್ ಎಸ್ಟೇಟ್ ಉದ್ಯಮಿ ಆಗಿರುವ ಸ್ವಾಮಿರಾಜನ್ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಸೆಕ್ಸ್ ವಿಚಾರವಾಗಿ ಅತಿರೇಕದ ವರ್ತನೆಯಿಂದ ಬೇಸತ್ತು ಕೊಲೆ ಮಾಡಿರೋದಾಗಿ ಪೊಲೀಸರ ಎದುರು ಪತ್ನಿ ನೇತ್ರಾ ಹೇಳಿಕೊಂಡಿದ್ದಳು. ಆದರೆ ಪೊಲೀಸರ ತನಿಖೆ ವೇಳೆ ಪ್ರಿಯಕರ ಮತ್ತು ಅಕ್ಕನ ಮಗನ ಜತೆ ಸೇರಿ ಗಂಡನನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪ್ರಿಯಕರ ಭರತ್​ ಹಾಗೂ ಅಕ್ಕನ ಮಗ ವಿಜಯ್​ನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:

ಅನ್ನಪೂರ್ಣೇಶ್ವರಿ ನಗರದಲ್ಲಿ ಪತ್ನಿ ಕೊಲೆ ಪ್ರಕರಣ; ಸಿನಿಮೀಯ ಶೈಲಿಯಲ್ಲಿ ನಡೆದಿತ್ತು ಮರ್ಡರ್ ಸ್ಕೆಚ್

ಬೆಂಗಳೂರು: ಜಾಗದ ವಿಚಾರಕ್ಕೆ ಅಕ್ಕನ ಕೊಲೆಗೆ ಸುಪಾರಿ ನೀಡಿದ್ದ ತಮ್ಮ! 7 ತಿಂಗಳ ಹಿಂದೆ ನಡೆದ ಕೊಲೆಯ ರಹಸ್ಯವನ್ನು ಖಾಕಿ ಭೇದಿಸಿದ್ದೇಗೆ?

Published On - 11:45 am, Tue, 30 November 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ