AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆದ್ದಾರಿಯಲ್ಲಿ ವೀಲಿಂಗ್ ಪುಂಡರ ಹಾವಳಿ, ಕೀಟಲೆಯಿಂದ ಬೇಸತ್ತ ಕಾರು ಚಾಲಕನಿಂದ ಬೈಕ್​ಗೆ ಬೆಂಕಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ರಾಣಿಕ್ರಾಸ್ ನಿಂದ ಆವತಿ ಗ್ರಾಮದವರೆಗೂ ಪುಂಡರು ವೀಲಿಂಗ್ ಮಾಡುತ್ತ ಕಾರು ಚಾಲಕನಿಗೆ ಹಾವಳಿ ಇಟ್ಟಿದ್ದಾರೆ. ಇದರಿಂದ ಕಂಗೆಟ್ಟ ಚಾಲಕ ನಂತರ ಆವತಿ ಗ್ರಾಮದ ಬಳಿ ಹೆದ್ದಾರಿಯಲ್ಲೆ ಬೈಕ್ ಅಡ್ಡಗಟ್ಟಿ ಬುದ್ದಿವಾದ ಹೇಳಿದ್ದಾರೆ.

ಹೆದ್ದಾರಿಯಲ್ಲಿ ವೀಲಿಂಗ್ ಪುಂಡರ ಹಾವಳಿ, ಕೀಟಲೆಯಿಂದ ಬೇಸತ್ತ ಕಾರು ಚಾಲಕನಿಂದ ಬೈಕ್​ಗೆ ಬೆಂಕಿ
ಹೆದ್ದಾರಿಯಲ್ಲಿ ವೀಲಿಂಗ್ ಪುಂಡರ ಹಾವಳಿ, ಕೀಟಲೆಯಿಂದ ಬೇಸತ್ತ ಕಾರು ಚಾಲಕನಿಂದ ಬೈಕ್ಗೆ ಬೆಂಕಿ
TV9 Web
| Edited By: ಆಯೇಷಾ ಬಾನು|

Updated on: Aug 08, 2021 | 2:48 PM

Share

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 7ರ ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ತೆರಳುತ್ತಿದ್ದ ಕಾರು ಚಾಲಕನಿಗೆ‌ ಕೆಲ ಪುಂಡರ ಗುಂಪು ಬೈಕ್ನಲ್ಲಿ ವೀಲಿಂಗ್ ಮಾಡುತ್ತಾ 3 ಕಿಲೋ ಮೀಟರ್ಗೂ ಅಧಿಕ ದೂರ ಕೀಟಲೆ‌ ನೀಡಿದ್ದಾರೆ. ಹೀಗಾಗಿ ಕೋಪಗೊಂಡ ಕಾರು ಚಾಲಕ ನಡು ರಸ್ತೆಯಲ್ಲೇ ಪುಂಡರ ಬೈಕ್ಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ರಾಣಿಕ್ರಾಸ್ ನಿಂದ ಆವತಿ ಗ್ರಾಮದವರೆಗೂ ಪುಂಡರು ವೀಲಿಂಗ್ ಮಾಡುತ್ತ ಕಾರು ಚಾಲಕನಿಗೆ ಹಾವಳಿ ಇಟ್ಟಿದ್ದಾರೆ. ಇದರಿಂದ ಕಂಗೆಟ್ಟ ಚಾಲಕ ನಂತರ ಆವತಿ ಗ್ರಾಮದ ಬಳಿ ಹೆದ್ದಾರಿಯಲ್ಲೆ ಬೈಕ್ ಅಡ್ಡಗಟ್ಟಿ ಬುದ್ದಿವಾದ ಹೇಳಿದ್ದಾರೆ. ಈ ವೇಳೆ ಕಾರು‌ ಚಾಲಕರಿಗೆ ವೀಲಿಂಗ್ ಪುಂಡರು ಅವಾಜ್ ಹಾಕಿದ್ದಾರೆ ಎನ್ನಲಾಗಿದ್ದು, ಅವಾಜ್ ನಿಂದ ಕೋಪಗೊಂಡ ಕಾರು ಚಾಲಕ ವೀಲಿಂಗ್ ಮಾಡಿಕೊಂಡು‌ ಬಂದ ಬೈಕ್ಗೆ ಬೆಂಕಿ ಹಚ್ಚಿದ್ದಾರೆ. ಇನ್ನೂ ಕಾರು‌ ಚಾಲಕ ಬೈಕ್ಗೆ ಬೆಂಕಿ ಹಚ್ಚುತ್ತಿದ್ದಂತೆ ಸ್ಥಳೀಯರು ಸಹ ಜಮಾಯಿಸಿ ವೀಲಿಂಗ್ ಪುಂಡರ ವಿರುದ್ಧ ತಿರುಗಿ ಬಿದ್ದಿದ್ದು ಎಚ್ಚೆತ್ತ ಪುಂಡರು ಹುರಿಯುತ್ತಿದ್ದ ಬೈಕ್ ಅನ್ನ ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ.

ಇನ್ನೂ ಪುಂಡರು ಎಸ್ಕೇಪ್ ಆಗ್ತಿದ್ದಂತೆ ಕಾರು ಚಾಲಕ ಸಹ ಸ್ಥಳದಿಂದ ತೆರಳಿದ್ದು, ಮೇಲ್ನೂಟಕ್ಕೆ ಆಂಧ್ರ ರಿಜಿಸ್ಟ್ರೇಷನ್ ನಂಬರ್ ನ ಬೈಕ್ ಅನ್ನೂದು ಗೊತ್ತಾಗಿದೆ. ಇನ್ನೂ ಬೈಕ್ ಗೆ ಬೆಂಕಿ ಹಚ್ಚಿದ್ರು ಬೈಕ್ ಮಾಲೀಕ ಮತ್ತು ಕಾರು ಚಾಲಕ ಯಾರು ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಹೀಗಾಗಿ ಹೊತ್ತಿ ಉರಿದ ಬೈಕ್ ಹೆದ್ದಾರಿಯ ಬದಿಯಲ್ಲೆ ಬಿದ್ದಿದ್ದು ವೀಲಿಂಗ್ ಪುಂಡರ ಹಾವಳಿಯಿಂದ ಬೇಸತ್ತಿದ್ದ ಸ್ಥಳೀಯರು ಕಾರು ಚಾಲಕ ಕಾರ್ಯವನ್ನ ಶ್ಲಾಘಿಸಿದ್ದಾರೆ. ಇನ್ನೂ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಯಾರಾದ್ರು ಬಂದು ದೂರು ಕೊಡ್ತಾರ ಅಂತ ಪೊಲೀಸರು ಸಹ ಸುಮ್ಮನಾಗಿದ್ದಾರೆ.

ವೀಕೆಂಡ್ನಲ್ಲಿ ವೀಲಿಂಗ್ ಪುಂಡರ ಹಾವಳಿಗೆ ಬೆಸತ್ತ ಜನ ವೀಕೆಂಡ್ ಬಂತು ಅಂದ್ರೆ ಸಾಕು ನಂದಿಬೆಟ್ಟಕ್ಕೆ ಹೋಗೋಕೆ ಲಾಂಗ್ ಡ್ರೈವ್ ಅಂತೆಲ್ಲ ಪುಡಾರ ಗ್ಯಾಂಗ್ ಜನರ ಮಧ್ಯೆಯೆ ಡೆಡ್ಲಿ ವೀಲಿಂಗ್ ಮಾಡುತ್ತ ಕಾಟ ಕೊಡುತ್ತಿದ್ದರು. ಕೊಂಚವೂ ಭಯವಿಲ್ಲದೆ ದರ್ಪ ಮೆರೆಯುತ್ತಿದ್ದರು. ಜೊತೆಗೆ ಈ ಬಗ್ಗೆ ಸಾಕಷ್ಟು ಭಾರಿ ಪೊಲೀಸರಿಗೆ ದೂರು ನೀಡಿದ್ರು ಕ್ರಮ ಕೈಗೊಳ್ಳದ ಕಾರಣ ಜನರು ಸಹ ವೀಲಿಂಗ್ ಪುಂಡರ ವಿರುದ್ದ ರೋಸಿಹೋಗಿದ್ದರು. ಸದ್ಯ ವೀಲಿಂಗ್ ಪುಂಡರಿಗೆ ಸರಿಯಾಗೆ ಬಿಸಿ ಮುಟ್ಟಿಸಿದ್ದಾರೆ ಅಂತ ಕಾರು‌ ಚಾಲಕನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಬೈಕ್ಗೆ ಬೆಂಕಿ ಹಚ್ಚಿದರೂ ದೂರು ನೀಡದೆ ಸುಮ್ಮನಾಗಿದ್ದು ಬೈಕ್ ಆಂಧ್ರ ರಿಜಿಸ್ಟ್ರೇಷನ್ ಹೊಂದಿರೂ ಕಾರಣ ಕಳ್ಳತನ ಮಾಡಿರೂ ಬೈಕ್ ತಂದು ಶೋಕಿ ಮಾಡ್ತಿದ್ರ ಅನ್ನೂ ಶಂಕೆಯು ವ್ಯಕ್ತವಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮುಂಜಾನೆಯೇ ವೀಲಿಂಗ್ ಹಾವಳಿ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

Follow Us
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ