AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರ್ಮಗಂಟು ರೋಗದ ಭೀತಿ, ಜಿಲ್ಲಾಡಳಿತ ನಿರ್ಬಂಧಕ್ಕೂ ಜಗ್ಗದ ರೈತರು: ಘಾಟಿ ಸುಬ್ರಹ್ಮಣ್ಯದಲ್ಲಿ ನಿಲ್ಲದ ದನದ ಜಾತ್ರೆ

ಸ್ಥಳದಿಂದ ರೈತರನ್ನು ಹೊರಗೆ ಕಳಿಸಲು ನೂರಾರು ಪೊಲೀಸರನ್ನು ನಿಯೋಜಿಸಲಾಯಿತು. ಪೊಲೀಸರ ಮಾತಿಗೂ ರೈತರು ಕಿವಿಗೊಡಲಿಲ್ಲ.

ಚರ್ಮಗಂಟು ರೋಗದ ಭೀತಿ, ಜಿಲ್ಲಾಡಳಿತ ನಿರ್ಬಂಧಕ್ಕೂ ಜಗ್ಗದ ರೈತರು: ಘಾಟಿ ಸುಬ್ರಹ್ಮಣ್ಯದಲ್ಲಿ ನಿಲ್ಲದ ದನದ ಜಾತ್ರೆ
ಘಾಟಿ ದನಗಳ ಜಾತ್ರೆಗೆ ಸೇರಿರುವ ಜಾನುವಾರುಗಳು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 20, 2023 | 1:23 PM

ಬೆಂಗಳೂರು: ರಾಸುಗಳನ್ನು ಕಾಡುತ್ತಿರುವ ಚರ್ಮಗಂಟು ಸಾಂಕ್ರಾಮಿಕ ರೋಗಭೀತಿಯ (Lumpy Skin Disease) ಹಿನ್ನೆಲೆಯಲ್ಲಿ ಈ ಬಾರಿ ದೊಡ್ಡಬಳ್ಳಾಪುರ ತಾಲ್ಲೂಕು ಘಾಟಿ ಸುಬ್ರಹ್ಮಣ್ಯದ (Ghati Subramanya) ದನಗಳ ಜಾತ್ರೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ನಿಷೇಧಿಸಿದ್ದರು. ಆದರೆ ಈ ನಿರ್ಬಂಧವನ್ನು ರೈತರು ತಿರಸ್ಕರಿಸಿದ್ದು, ರೋಗಭೀತಿಯ ನಡುವೆ ಸ್ವಯಂಪ್ರೇರಿತರಾಗಿ ಜಾತ್ರೆ ನಡೆಸಲು ಮುಂದಾಗಿದ್ದಾರೆ. ನಿರ್ಬಂಧ ಮಾಡಿರುವುದಾಗಿ ನೋಟಿಸ್ ನೀಡಿದರೂ ರೈತರು ಹಿಂದೆ ಸರಿಯಲಿಲ್ಲ. ಹೀಗಾಗಿ ಸ್ಥಳದಿಂದ ರೈತರನ್ನು ಹೊರಗೆ ಕಳಿಸಲು ನೂರಾರು ಪೊಲೀಸರನ್ನು ನಿಯೋಜಿಸಲಾಯಿತು. ಪೊಲೀಸರ ಮಾತಿಗೂ ರೈತರು ಕಿವಿಗೊಡಲಿಲ್ಲ.

‘ಎತ್ತುಗಳನ್ನು ಸಾಕಲು ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡಿದ್ದೇವೆ. ಒಂದು ತಿಂಗಳ ಹಿಂದೆ, ಡಿಸೆಂಬರ್​ನಲ್ಲಿಯೇ ಜಾತ್ರೆ ನಡೆಯಬೇಕಿತ್ತು. ಚರ್ಮಗಂಟು ರೋಗ ಹೆಚ್ಚಾಗಿದ್ದರಿಂದ ಜಿಲ್ಲಾಧಿಕಾರಿ ಅವಕಾಶ ಕೊಟ್ಟಿರಲಿಲ್ಲ. ಸಂಕ್ರಾಂತಿ ನಂತರ ಮಾಡುವಂತೆ ಜಿಲ್ಲಾ‌ ಉಸ್ತುವಾರಿ ಸಚಿವರು ಸೂಚಿಸಿದ್ದರು. ಅದರಂತೆ ನಾವು ಜಾತ್ರೆ ನಡೆಸಲು ಬಂದಿದ್ದೇವೆ’ ಎಂದು ರೈತರು ಅಲವತ್ತುಕೊಂಡರು.

ದಕ್ಷಿಣ ಭಾರತದ ಪ್ರಸಿದ್ಧ ದನಗಳ ಜಾತ್ರೆ

ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವಕ್ಕೂ ಮೊದಲು ದನಗಳ ಜಾತ್ರೆ ನಡೆಯುವುದು ವಾಡಿಕೆ. ದಕ್ಷಿಣ ಭಾರತದ ಪ್ರಸಿದ್ಧ ದನಗಳ ಜಾತ್ರೆಗಳಲ್ಲಿ ಇದೂ ಒಂದು. ಕರ್ನಾಟಕದ ವಿವಿಧ ಜಿಲ್ಲೆಗಳು ಮತ್ತು ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಂದಲೂ ರೈತರು ಜಾತ್ರೆಗೆ ಬರುತ್ತಾರೆ. ಕೃಷಿ ಕೆಲಸಕ್ಕಾಗಿ ಎತ್ತುಗಳನ್ನು ಖರೀದಿಸುವ, ಮಾರುವ ವಹಿವಾಟು ಭರಾಟೆಯಿಂದ ನಡೆಯುತ್ತದೆ.

ಕಳೆದ ಡಿ 20ರಿಂದ ದನಗಳ ಜಾತ್ರೆ ನಡೆಯಬೇಕಿತ್ತು. ಆದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದನಗಳಿಗೆ ಚರ್ಮಗಂಟು ರೋಗ ಜಾಸ್ತಿಯಿದ್ದ ಕಾರಣದಿಂದ ದನಗಳ ಜಾತ್ರೆ ಮತ್ತು ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ನವೆಂಬರ್ 30ರಿಂದ ಜನವರಿ 31ರವರೆಗೆ ನಿರ್ಬಂಧ ಆದೇಶ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದರು. ಜಾತ್ರೆಗೆಂದು ದನಗಳನ್ನು ಸಿದ್ಧಪಡಿಸಿದ್ದ ರೈತರು ಆರ್ಥಿಕವಾಗಿ ನಷ್ಟವಾಗುವ ಭೀತಿಯಿಂದ ಎತ್ತುಗಳನ್ನು ಜಾತ್ರೆಗೆ ಹೊಡೆದುಕೊಂಡು ಬಂದಿದ್ದಾರೆ. ಜನವರಿ 23ರ ವರೆಗೂ ದನಗಳ ಜಾತ್ರೆ ನಡೆಸಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.

‘ಜಿಲ್ಲಾಧಿಕಾರಿ ಅನುಮತಿಯಿಲ್ಲದೆ ಜಾತ್ರೆ ನಡೆಸುವುದು ತಪ್ಪಾಗುತ್ತದೆ. ಘಾಟಿ ದೇವಾಲಯದಿಂದ ಜಾತ್ರೆಗೆ ಆಗಮಿಸಿರುವ ರೈತರಿಗೆ ಯಾವುದೇ ರೀತಿಯ ಸೌಲಭ್ಯ ನೀಡಲು ಸಾಧ್ಯವಿಲ್ಲ. ಜಿಲ್ಲಾಡಳಿತದ ಕಾಳಜಿಯನ್ನು ರೈತರು ಅರ್ಥ ಮಾಡಿಕೊಳ್ಳಬೇಕು’ ಎಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಡಿ.ನಾಗರಾಜ್‌ ವಿನಂತಿಸಿದ್ದಾರೆ.

Published On - 1:23 pm, Fri, 20 January 23

ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್