AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಪರವಾನಗಿ ಪಡೆಯದೆ ಅಕ್ರಮ ಗ್ಯಾಸ್ ರೀಫಿಲಿಂಗ್ ಮಾಡುತ್ತಿದ್ದ ಮನೆ ಮೇಲೆ ಸಿಸಿಬಿ ದಾಳಿ; ಓರ್ವನ ಬಂಧನ

ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಸಿಲಿಂಡರ್​ಗಳ ಜತೆಗೆ ರೀಫಿಲಿಂಗ್ ಬಳಕೆ ಸಾಮಾಗ್ರಿಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ಸಿಲಿಂಡರ್ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆ ಮಾಡುತ್ತಿದ್ದ ಮಹದೇವಸ್ವಾಮಿಯನ್ನು (49) ಬಂಧಿಸಿದ್ದಾರೆ.

ನೆಲಮಂಗಲ: ಪರವಾನಗಿ ಪಡೆಯದೆ ಅಕ್ರಮ ಗ್ಯಾಸ್ ರೀಫಿಲಿಂಗ್ ಮಾಡುತ್ತಿದ್ದ ಮನೆ ಮೇಲೆ ಸಿಸಿಬಿ ದಾಳಿ; ಓರ್ವನ ಬಂಧನ
ಸಿಲಿಂಡರ್​ಗಳ ಜೊತೆ ರೀಫಿಲಿಂಗ್ ಬಳಕೆ ಸಾಮಾಗ್ರಿಗಳು ಜಪ್ತಿ
TV9 Web
| Edited By: |

Updated on:Nov 28, 2021 | 9:42 AM

Share

ಬೆಂಗಳೂರು: ಪರವಾನಗಿ ಪಡೆಯದೆ ಅಕ್ರಮ ಗ್ಯಾಸ್ ರೀಫಿಲಿಂಗ್ ಮಾಡುತ್ತಿದ್ದ ಮನೆ ಮೇಲೆ ಸಿಸಿಬಿ ಪೊಲೀಸರು (CCB police) ದಾಳಿ ನಡೆಸಿದ್ದಾರೆ. ನೆಲಮಂಗಲ ಸಮೀಪದ ಟಿ.ದಾಸರಹಳ್ಳಿಯ ಕಲ್ಯಾಣನಗರದಲ್ಲಿ ರೀಫಿಲಿಂಗ್ ಮಿಷಿನ್ ಇಟ್ಟುಕೊಂಡು ಕಾಪರ್ ರಾಂಡ್​ಗಳ ಮೂಲಕ ಸಣ್ಣ ಸಣ್ಣ ಸಿಲಿಂಡರ್​ಗಳಿಗೆ ರೀಫಿಲಿಂಗ್ ಮಾಡುತ್ತಿದ್ದರು. ಈ ವಿಷಯ ತಿಳಿದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಸಿಲಿಂಡರ್​ಗಳ (Cylinder) ಜತೆಗೆ ರೀಫಿಲಿಂಗ್ ಬಳಕೆ ಸಾಮಾಗ್ರಿಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ಸಿಲಿಂಡರ್ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆ ಮಾಡುತ್ತಿದ್ದ ಮಹದೇವಸ್ವಾಮಿಯನ್ನು (49) ಬಂಧಿಸಿದ್ದಾರೆ.

ಮಹದೇವಸ್ವಾಮಿ ಮೇಲೆ ಜನವಸತಿ ಪ್ರದೇಶದಲ್ಲಿ ಅಕ್ರಮ ದಂಧೆ, ಸರ್ಕಾರಕ್ಕೆ ಮೋಸದಡಿ ಕೇಸ್ ದಾಖಲು ಮಾಡಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಎಫ್​ಐಆರ್​ ವಿವರ ಪಿರ್ಯಾದುದಾರರಾದ ಎನ್.ಲಕ್ಷ್ಮೀನರಸಿಂಹಯ್ಯ, ಪಿ.ಎಸ್.ಐ, ಆರ್ಥಿಕ ಅಪರಾಧ ದಳ, ಸಿಸಿಬಿ ಬೆಂಗಳೂರು ಸಿಟಿ ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ, ಬೆಂಗಳೂರು ನಗರ, ಬಾಗಲಗುಂಟೆ ಪೊಲೀಸ್ ಠಾಣಾ ಸರಹದ್ದಿನ ನಂ.170, ಸರ್ಕಾರಿ ಪ್ರೌಢಶಾಲೆ ರಸ್ತೆ, ಮಾಡೆಲ್ ಕಾಲೋನಿ, ಟಿ.ದಾಸರಹಳ್ಳಿ, ಬೆಂಗಳೂರು ವಿಳಾಸದಲ್ಲಿ ಸರ್ಕಾರದ ಯಾವುದೇ ಪ್ರಾಧಿಕಾರದಿಂದ ಅಧಿಕೃತವಾಗಿ ಪರವಾನಿಗೆ ಪಡೆದುಕೊಳ್ಳದೇ ಹಾಗೂ ಜನ ವಾಸದ ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ, ಯಾವ ಸಂದರ್ಭದಲಾದರೂ ಅನಾಹುತ ಸಂಭವಿಸಿ ಸಾರ್ವಜನಿಕ ಜೀವ ಮತ್ತು ಆಸ್ತಿ-ಪಾಸ್ತಿಗೆ ಹಾನಿ ಉಂಟಾಗುವ ಸಂಭವವಿದೆಯೆಂದೂ ಗೊತ್ತಿದ್ದರೂ ಸಹ, ಸರ್ಕಾರಿ ಸ್ವಾಮ್ಯದ ಇಂಡೇನ್ ಗ್ಯಾಸ್ ಸಿಲಿಂಡರ್​ಗಳನ್ನು ಅನಧಿಕೃತವಾಗಿ ದಾಸ್ತಾನು ಮಾಡಿಕೊಂಡು ರಿಫೀಲಿಂಗ್ ಮಾಡುತ್ತಾ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುವುದಾಗಿ ನಮ್ಮ ಸಿಸಿಬಿ ದಳದ ಎ.ಸಿ.ಪಿ ಸಾಹೇಬರಿಗೆ ಮಾಹಿತಿ ಬಂದಿದೆ.

ಅದರಂತೆ ಸದರಿ ಮಾಹಿತಿಯನ್ನು ಪರಿಶೀಲಿಸಿ ನೈಜತೆಯಿಂದ ಕೂಡಿದ್ದಲ್ಲಿ ಕಾನೂನು ರೀತಾ ಕ್ರಮ ಜರಗುಸಿವಂತೆ ಸೂಚಿಸಿದ ಮೇರೆಗೆ, ಅದರಂತೆ ನಾನು ಸಿಬ್ಬಂದಿಯವರೊಂದಿಗೆ ಮೇಲ್ಕಂಡ ಸ್ಥಳದ ಬಳಿ ಬಂದು ಭಾತ್ಮಿದಾರರ ಮಾಹಿತಿಯಂತೆ ಖುದ್ದಾಗಿ ಪರಿಶೀಲಿಸಲಾಗಿ ಮಹದೇವಸ್ವಾಮಿ ಬಿನ್ ಕಾಳಯ್ಯ, 49 ವರ್ಷ, ನಂ. 160, 1ನೇ ಮುಖ್ಯರಸ್ತೆ, ಕಲ್ಯಾಣನಗರ, ಟಿ.ದಾಸರಹಳ್ಳಿ, ಬೆಂಗಳೂರು ಎಂಬಾತನು ನಂ.170, ಸರ್ಕಾರಿ ಪ್ರೌಢಶಾಲೆ ರಸ್ತೆ, ಮಾಡೆಲ್ ಕಾಲೋನಿ, ಟಿ.ದಾಸರಹಳ್ಳಿ, ಬೆಂಗಳೂರು ಇಲ್ಲಿ ಕಟ್ಟಡವನ್ನು ಬಾಡಿಗೆಗೆ ಪಡೆದು ಗ್ಯಾಸ್ ಸಿಲಿಂಡರ್​ಗಳನ್ನು ದಾಸ್ತಾನು ಮಾಡಿಕೊಂಡು ರೀಫಿಲಿಂಗ್ ಮಿಷಿನ್ ಇಟ್ಟುಕೊಂಡು ಕಾಪರ್ ರಾಂಡ್​ಗಳ ಮೂಲಕ ಸಣ್ಣ ಸಣ್ಣ ಸಿಲಿಂಡರ್​ಗಳಿಗೆ ರೀಫಿಲಿಂಗ್ ಮಾಡುತ್ತ, ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುವುದು ಹಾಗೂ ಸರ್ಕಾರಕ್ಕೆ ಮೋಸ ಮಾಡುತ್ತಿರುವುದು ಕಂಡುಬಂದ ಮೇರೆಗೆ ಮಹದೇವಸ್ವಾಮಿ ರವರ ವಿರುದ್ಧ ಕಲಂ,3 (1) (a) (b) (c), (2) (3) (4), 4(1) (a) (b) (c) & (d), 7 (1) (a) (b) (c) Liqufied Petroleaum Gas (Regulation of supply and Distributin) Order-2000 285 ಐ.ಪಿ.ಸಿ ರೀತ್ಯಾ ಪ್ರಕರಣ ದಾಖಲಿಸುವಂತೆ ಕೊಟ್ಟ ದೂರನ್ನು ಸ್ವೀಕರಿಸಿ ಮೇಲ್ಕಂಡ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿರುತ್ತದೆ.

ಇದನ್ನೂ ಓದಿ: Crime News: ಪಡಿತರ ಅಕ್ಕಿ ಅಕ್ರಮ ಸಾಗಣೆ, ಶಿಕ್ಷಕ ಆತ್ಮಹತ್ಯೆ, ಲಿಂಗಸುಗೂರು ಬಳಿ ಅಪಘಾತ, ಇಂಡಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಡ್ರಗ್ಸ್ ಪೆಡ್ಲರ್ ಮನೆ ಮೇಲೆ ಸಿಸಿಬಿ ದಾಳಿ! ನೈಜೀರಿಯಾ ಪ್ರಜೆ ಸೆರೆ, 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ

Published On - 9:37 am, Sun, 28 November 21

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!