AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಚೈತ್ರಾಗೆ ವಾಚ್ ಉಡುಗೊರೆ ನೀಡಿದ ಬೆಂಗಳೂರು ಗ್ರಾಮಾಂತರ ಎಸ್​ಪಿ

600 ಅಂಕಗಳನ್ನು ಪಡೆದು ಸಾಧನೆ ಮಾಡಿರುವ ಚೈತ್ರಾ ಎಸ್ ನೆಲಮಂಗಲ ವೃತ್ತ ತನಿಖಾಧಿಕಾರಿ ಅಧೀನದಲ್ಲಿ ಕರ್ತವ್ಯ ನಿರ್ವಹಣೆ ಮಾಡುವ ಹೆಡ್ ಕಾನ್ಸ್​ಟೇಬಲ್ ಶಿವಕುಮಾರ್ ಪುತ್ರಿ.

ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಚೈತ್ರಾಗೆ ವಾಚ್ ಉಡುಗೊರೆ ನೀಡಿದ ಬೆಂಗಳೂರು ಗ್ರಾಮಾಂತರ ಎಸ್​ಪಿ
ಹೆಚ್ಚು ಅಂಕ ಗಳಿಸಿದ ಚೈತ್ರಾಗೆ ವಾಚ್ ಉಡುಗೊರೆ ನೀಡಿದ ಬೆಂಗಳೂರು ಗ್ರಾಮಾಂತರ ಎಸ್​ಪಿ
TV9 Web
| Edited By: sandhya thejappa|

Updated on:May 22, 2022 | 11:15 AM

Share

ನೆಲಮಂಗಲ: 2021-22ನೇ ಸಾಲಿನ ಎಸ್ಎಸ್ಎಲ್​ಸಿ ಫಲಿತಾಂಶ (SSLC Result) ಮೇ 19ರಂದು ಪ್ರಕಟವಾಗಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 125 ವಿದ್ಯಾರ್ಥಿಗಳು 625 ಅಂಕಕ್ಕೆ 625 ಅಂಕ ಪಡೆದು ದಾಖಲೆಯ ಸಾಧನೆ ಮಾಡಿದ್ದಾರೆ. ಇನ್ನು ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಪೊಲೀಸರ ಮಕ್ಕಳಲ್ಲಿ ಅತಿ ಹೆಚ್ಚು ಅಂದರೆ 625ಕ್ಕೆ 600 ಅಂಕ ಪಡೆಯುವ ಮೂಲಕ ಹೆಡ್ ಕಾನ್ಸ್​ಟೇಬಲ್ ಪುತ್ರಿ ಚೈತ್ರಾ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹೆಚ್ಚು ಅಂಕ ಗಳಿಸಿರುವ ಚೈತ್ರಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್​ಪಿ ಆಗಿರುವ ವಂಶಿ ಕೃಷ್ಣಾ ಅವರು ಸನ್ಮಾನ ಮಾಡಿ ವಾಚ್ ಉಡುಗೊರೆ ನೀಡಿದ್ದಾರೆ.

600 ಅಂಕಗಳನ್ನು ಪಡೆದು ಸಾಧನೆ ಮಾಡಿರುವ ಚೈತ್ರಾ ಎಸ್ ನೆಲಮಂಗಲ ವೃತ್ತ ತನಿಖಾಧಿಕಾರಿ ಅಧೀನದಲ್ಲಿ ಕರ್ತವ್ಯ ನಿರ್ವಹಣೆ ಮಾಡುವ ಹೆಡ್ ಕಾನ್ಸ್​ಟೇಬಲ್ ಶಿವಕುಮಾರ್ ಪುತ್ರಿ. ಯಾವ ವರ್ಷವೂ ಈ ರೀತಿ ಅಂಕಗಳಿಸಿದ ಪೊಲೀಸ್ ಮಕ್ಕಳಿಗೆ ಸನ್ಮಾನ ನಡೆದಿರಲಿಲ್ಲ. ನಾನು ಹಾಗೂ ನಮ್ಮ ಕುಟುಂಬ ಎಸ್​ಪಿಗೆ ಧನ್ಯವಾದಗಳನ್ನ ತಿಳಿಸಿದ್ದೇನೆ ಎಂದು ಹೆಡ್ ಕಾನ್ಸ್​ಟೇಬಲ್ ಶಿವಕುಮಾರ್ ಹೇಳಿದರು.

Out of Out ಅಂಕ ಪಡೆದ ವಿದ್ಯಾರ್ಥಿಗಳು: * ಪ್ರಥಮ ಭಾಷೆ ಕನ್ನಡ- 125ಕ್ಕೆ 125 ಅಂಕ ಪಡೆದಿದ್ದ ವಿದ್ಯಾರ್ಥಿಗಳು 19,125 * ದ್ವಿತೀಯ ಭಾಷೆ 100ಕ್ಕೆ 100 ಮಾರ್ಕ್ಸ್ ಅನ್ನು- 13,425 ವಿದ್ಯಾರ್ಥಿಗಳು ಪಡೆದುಕೊಂಡಿದ್ದರು. * ತೃತೀಯ ಭಾಷೆ100ಕ್ಕೆ 100 ಅಂಕ ಪಡೆದಿದ್ದವರು 43,126 ವಿದ್ಯಾರ್ಥಿಗಳು * ಗಣಿತದಲ್ಲಿ 100ಕ್ಕೆ ನೂರು ಅಂಕವನ್ನು 13,683 ವಿದ್ಯಾರ್ಥಿಗಳು ಪಡೆದಿದ್ದರು * ವಿಜ್ಞಾನ- 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳ ಸಂಖ್ಯೆ 6,592 * ಸಮಾಜ ವಿಜ್ಞಾನ100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳ ಸಂಖ್ಯೆ 50,782.

ಇದನ್ನೂ ಓದಿ
Image
Monkeypox: ಟ್ರಾವೆಲ್ ಹಿಸ್ಟರಿಯೇ ಇಲ್ಲದಿದ್ರೂ ಆಫ್ರಿಕಾದ ಹೊರಗೂ ಹಬ್ಬುತ್ತಿದೆ ಮಂಕಿಪಾಕ್ಸ್
Image
Rishabh Pant: ಡಿಆರ್​ಎಸ್​ ಏಕೆ ತೆಗೆದುಕೊಳ್ಳಲಿಲ್ಲ ಪ್ರಶ್ನೆಗೆ ರಿಷಭ್ ಪಂತ್ ನೀಡಿದ ಉತ್ತರವೇನು ನೋಡಿ
Image
PPF ಖಾತೆ ಇಲ್ಲದಿದ್ದರೆ ಕೂಡಲೇ ತೆರೆಯಿರಿ: ಬಡ್ಡಿದರ, ಪ್ರಯೋಜನಗಳು ಇಲ್ಲಿವೆ ನೋಡಿ
Image
ಅಭಿವೃದ್ಧಿ ವಿಚಾರದಲ್ಲಿ ಕ್ಷೇತ್ರವಾರು ತಾರತಮ್ಯ ಆರೋಪ: ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಸಾಲು ಸಾಲು ಟ್ವೀಟ್

ವಿದ್ಯಾರ್ಥಿ ಚೈತ್ರಾಗೆ ಸನ್ಮಾನ ಮಾಡುತ್ತಿರುವ ಎಸ್​ಪಿ

ಇದನ್ನೂ ಓದಿ: Rishabh Pant: ಡಿಆರ್​ಎಸ್​ ಏಕೆ ತೆಗೆದುಕೊಳ್ಳಲಿಲ್ಲ ಪ್ರಶ್ನೆಗೆ ರಿಷಭ್ ಪಂತ್ ನೀಡಿದ ಉತ್ತರವೇನು ನೋಡಿ

ವಿದ್ಯಾರ್ಥಿನಿಯರೇ ಮೇಲುಗೈ: ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್‌ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ.625ಕ್ಕೆ 625 ಅಂಕಗಳನ್ನು 125 ಮಕ್ಕಳು ಗಳಿಸಿದ್ದಾರೆ. ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಫಲಿತಾಂಶ ವಿದ್ಯಾರ್ಥಿಗಳಿಗೆ ಸಿಕ್ಕಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:03 am, Sun, 22 May 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು