AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಶಾದಿ ಡಾಟ್ ಕಾಮ್​ನಲ್ಲಿ ನಕಲಿ ಫೋಟೋ ಹಾಕಿ ವ್ಯಕ್ತಿಗೆ 6 ಲಕ್ಷ ರೂ. ವಂಚನೆ

ನೆಲಮಂಗಲದಲ್ಲಿ ಶಾದಿ ಡಾಟ್ ಕಾಮ್​ನಲ್ಲಿ ಯುವತಿಯ ನಕಲಿ ಫೋಟೋ ಹಾಕಿ ವ್ಯಕ್ತಿಗೆ 6 ಲಕ್ಷ ರೂ. ವಂಚಿಸಲಾಗಿದೆ.

ನೆಲಮಂಗಲ: ಶಾದಿ ಡಾಟ್ ಕಾಮ್​ನಲ್ಲಿ ನಕಲಿ ಫೋಟೋ ಹಾಕಿ ವ್ಯಕ್ತಿಗೆ 6 ಲಕ್ಷ ರೂ. ವಂಚನೆ
ಪೀಣ್ಯ ಪೊಲೀಸ್​ ಠಾಣೆ
ಬಿ ಮೂರ್ತಿ, ನೆಲಮಂಗಲ
| Updated By: ವಿವೇಕ ಬಿರಾದಾರ|

Updated on:Aug 05, 2023 | 10:45 AM

Share

ನೆಲಮಂಗಲ: ಶಾದಿ ಡಾಟ್ ಕಾಮ್​ನಲ್ಲಿ (Shadi.com) ಯುವತಿಯ ನಕಲಿ ಫೋಟೋ ಹಾಕಿ ವ್ಯಕ್ತಿಗೆ 6 ಲಕ್ಷ ರೂ. ವಂಚಿಸಲಾಗಿದೆ. ಪೀಣ್ಯಾದ (Peenya) ಶಿವಪುರದ ರಾಬರ್ಟ್ ವರ್ಗಿಸ್ ವಂಚನೆಗೊಳಗಾದ ವ್ಯಕ್ತಿ. ಯುವತಿ ಅಲೋಶಿಯ, ಶಿವಮಧು, ಮುಜೀಬ್ ಎಂಬುವವರು ವಂಚಿಸಿದ್ದಾರೆ. ಬೆಂಗಳೂರಿನ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೀಣ್ಯ ಪೊಲೀಸರು ಯುವತಿ ಸೇರಿ ಮೂವರಿಗಾಗಿ ಬಲೆ ಬೀಸಿದ್ದಾರೆ. ಇನ್ನು ರಾಬರ್ಟ್ ವರ್ಗಿಸ್ ಅವರಿಗೆ ಸುಳ್ಳಿನ ಕಥೆ ಹೇಳಿ ಯುವತಿ ಹಣ ಪಡೆದಿದ್ದಾಳೆ.

ನಾನು ಕಾರು ಚಾಲನೆ ಮಾಡಿಕೊಂಡು ಬರುವಾಗ ಅಪಘಾತಕ್ಕೆ ಕಾರಣಳಾದೆ. ಅದ್ದರಿಂದ ಪೊಲೀಸರು ನನ್ನನ್ನ ಕಸ್ಟಡಿ ತೆಗೆದುಕೊಂಡಿದ್ದಾರೆ. ಪೊಲೀಸರಿಂದ ಕೇಸ್ ಮುಕ್ತಗೊಳಿಸಲು ಹಣದ ಅವಶ್ಯಕತೆ ಇದೆ. ಹೀಗಾಗಿ ನಾನು ತಿಳಿಸಿದ ವ್ಯಕ್ತಿಗಳ ಖಾತೆಗೆ ಹಣ ಹಾಕು ಎಂದು ರಾಬರ್ಟ್ ವರ್ಗಿಸ್ ಅವರಿಗೆ ಹೇಳಿದ್ದಾಳೆ.

ಇದನ್ನೂ ಓದಿ: ಪ್ರಿಯತಮನಿಂದ ಯುವತಿ ಮೇಲೆ ರಾಡ್​ನಿಂದ ಹಲ್ಲೆ; ಆರೋಪಿ ಬಂಧನ 

ಅದರಂತೆ ರಾಬರ್ಟ್ ವರ್ಗಿಸ್ ಆರೋಪಿ ಮುಜೀಬ್​​ನ ಎಸ್ ಬ್ಯಾಂಕ್, ಐಡಿಬಿಐ ಬ್ಯಾಂಕ್ ಅಕೌಂಟ್​ ಗೆ 6 ಲಕ್ಷ ರೂ. ಹಾಕಿದ್ದರು. ಮತ್ತೊಬ್ಬ ಆರೋಪಿಯ ಯುನಿಯನ್ ಬ್ಯಾಂಕ್ ಅಕೌಂಟ್​​ಗೆ 25 ಸಾವಿರ ರೂ. ಹಣ ಹಾಕಿದ್ದಾರೆ. ಗುರುತನ್ನು ಮರೆಮಾಚಿ ಆರೋಪಿಗಳು ಹಣವನ್ನು ಆನ್ಲೈನ್ ಮೂಲಕ ಟ್ರಾನ್ಸ್‌ಫರ್ ಮಾಡಿಸಿಕೊಂಡಿದ್ದಾರೆ. ಪೀಣ್ಯಾ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯಿದೆ 2008 (U/s-66(D),66(C))ಪ್ರಕರಣ ದಾಖಲಾಗಿದೆ.

ಮನೆ ಮುಂದೆ ನಿಲ್ಲಿಸಿದ್ದ ಕ್ವಾಲಿಸ್ ವಾಹನ ಕಳವು

ಇನ್ನು ಮನೆ ಮುಂದೆ ನಿಲ್ಲಿಸಿದ್ದ ಕ್ವಾಲಿಸ್ ವಾಹನವನ್ನು ಕಳ್ಳತನ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಪರಿಮಳನಗರಲ್ಲಿದಲ್ಲಿ ನಡೆದಿದೆ. ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು ಕಾರು ಕದ್ದು ಪರಾರಿಯಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:24 am, Sat, 5 August 23

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ