AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಶಾದಿ ಡಾಟ್ ಕಾಮ್​ನಲ್ಲಿ ನಕಲಿ ಫೋಟೋ ಹಾಕಿ ವ್ಯಕ್ತಿಗೆ 6 ಲಕ್ಷ ರೂ. ವಂಚನೆ

ನೆಲಮಂಗಲದಲ್ಲಿ ಶಾದಿ ಡಾಟ್ ಕಾಮ್​ನಲ್ಲಿ ಯುವತಿಯ ನಕಲಿ ಫೋಟೋ ಹಾಕಿ ವ್ಯಕ್ತಿಗೆ 6 ಲಕ್ಷ ರೂ. ವಂಚಿಸಲಾಗಿದೆ.

ನೆಲಮಂಗಲ: ಶಾದಿ ಡಾಟ್ ಕಾಮ್​ನಲ್ಲಿ ನಕಲಿ ಫೋಟೋ ಹಾಕಿ ವ್ಯಕ್ತಿಗೆ 6 ಲಕ್ಷ ರೂ. ವಂಚನೆ
ಪೀಣ್ಯ ಪೊಲೀಸ್​ ಠಾಣೆ
ಬಿ ಮೂರ್ತಿ, ನೆಲಮಂಗಲ
| Updated By: ವಿವೇಕ ಬಿರಾದಾರ|

Updated on:Aug 05, 2023 | 10:45 AM

Share

ನೆಲಮಂಗಲ: ಶಾದಿ ಡಾಟ್ ಕಾಮ್​ನಲ್ಲಿ (Shadi.com) ಯುವತಿಯ ನಕಲಿ ಫೋಟೋ ಹಾಕಿ ವ್ಯಕ್ತಿಗೆ 6 ಲಕ್ಷ ರೂ. ವಂಚಿಸಲಾಗಿದೆ. ಪೀಣ್ಯಾದ (Peenya) ಶಿವಪುರದ ರಾಬರ್ಟ್ ವರ್ಗಿಸ್ ವಂಚನೆಗೊಳಗಾದ ವ್ಯಕ್ತಿ. ಯುವತಿ ಅಲೋಶಿಯ, ಶಿವಮಧು, ಮುಜೀಬ್ ಎಂಬುವವರು ವಂಚಿಸಿದ್ದಾರೆ. ಬೆಂಗಳೂರಿನ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೀಣ್ಯ ಪೊಲೀಸರು ಯುವತಿ ಸೇರಿ ಮೂವರಿಗಾಗಿ ಬಲೆ ಬೀಸಿದ್ದಾರೆ. ಇನ್ನು ರಾಬರ್ಟ್ ವರ್ಗಿಸ್ ಅವರಿಗೆ ಸುಳ್ಳಿನ ಕಥೆ ಹೇಳಿ ಯುವತಿ ಹಣ ಪಡೆದಿದ್ದಾಳೆ.

ನಾನು ಕಾರು ಚಾಲನೆ ಮಾಡಿಕೊಂಡು ಬರುವಾಗ ಅಪಘಾತಕ್ಕೆ ಕಾರಣಳಾದೆ. ಅದ್ದರಿಂದ ಪೊಲೀಸರು ನನ್ನನ್ನ ಕಸ್ಟಡಿ ತೆಗೆದುಕೊಂಡಿದ್ದಾರೆ. ಪೊಲೀಸರಿಂದ ಕೇಸ್ ಮುಕ್ತಗೊಳಿಸಲು ಹಣದ ಅವಶ್ಯಕತೆ ಇದೆ. ಹೀಗಾಗಿ ನಾನು ತಿಳಿಸಿದ ವ್ಯಕ್ತಿಗಳ ಖಾತೆಗೆ ಹಣ ಹಾಕು ಎಂದು ರಾಬರ್ಟ್ ವರ್ಗಿಸ್ ಅವರಿಗೆ ಹೇಳಿದ್ದಾಳೆ.

ಇದನ್ನೂ ಓದಿ: ಪ್ರಿಯತಮನಿಂದ ಯುವತಿ ಮೇಲೆ ರಾಡ್​ನಿಂದ ಹಲ್ಲೆ; ಆರೋಪಿ ಬಂಧನ 

ಅದರಂತೆ ರಾಬರ್ಟ್ ವರ್ಗಿಸ್ ಆರೋಪಿ ಮುಜೀಬ್​​ನ ಎಸ್ ಬ್ಯಾಂಕ್, ಐಡಿಬಿಐ ಬ್ಯಾಂಕ್ ಅಕೌಂಟ್​ ಗೆ 6 ಲಕ್ಷ ರೂ. ಹಾಕಿದ್ದರು. ಮತ್ತೊಬ್ಬ ಆರೋಪಿಯ ಯುನಿಯನ್ ಬ್ಯಾಂಕ್ ಅಕೌಂಟ್​​ಗೆ 25 ಸಾವಿರ ರೂ. ಹಣ ಹಾಕಿದ್ದಾರೆ. ಗುರುತನ್ನು ಮರೆಮಾಚಿ ಆರೋಪಿಗಳು ಹಣವನ್ನು ಆನ್ಲೈನ್ ಮೂಲಕ ಟ್ರಾನ್ಸ್‌ಫರ್ ಮಾಡಿಸಿಕೊಂಡಿದ್ದಾರೆ. ಪೀಣ್ಯಾ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯಿದೆ 2008 (U/s-66(D),66(C))ಪ್ರಕರಣ ದಾಖಲಾಗಿದೆ.

ಮನೆ ಮುಂದೆ ನಿಲ್ಲಿಸಿದ್ದ ಕ್ವಾಲಿಸ್ ವಾಹನ ಕಳವು

ಇನ್ನು ಮನೆ ಮುಂದೆ ನಿಲ್ಲಿಸಿದ್ದ ಕ್ವಾಲಿಸ್ ವಾಹನವನ್ನು ಕಳ್ಳತನ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಪರಿಮಳನಗರಲ್ಲಿದಲ್ಲಿ ನಡೆದಿದೆ. ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು ಕಾರು ಕದ್ದು ಪರಾರಿಯಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:24 am, Sat, 5 August 23

ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ