AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್​ ಮಾಜಿ ಶಾಸಕ ಕೆ ವೆಂಕಟಸ್ವಾಮಿ ತಪ್ಪಿತಸ್ಥ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

Check Bounce: ಚೆಕ್ ಬೌನ್ಸ್ ಪ್ರಕರಣದಲ್ಲಿ ದೇವನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕೆ. ವೆಂಕಟಸ್ವಾಮಿ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಾರಿದೆ. ಸಾಲಕ್ಕೆ ಪ್ರತಿಯಾಗಿ ನೀಡಿದ್ದ ಚೆಕ್ ಬೌನ್ಸ್ ಆದ ಹಿನ್ನೆಲೆ ನಾಗಭೂಷಣ ಎಂಬುವರು ಖಾಸಗಿ ದೂರು ದಾಖಲಿಸಿದ್ದರು.

ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್​ ಮಾಜಿ ಶಾಸಕ ಕೆ ವೆಂಕಟಸ್ವಾಮಿ ತಪ್ಪಿತಸ್ಥ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ
ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್​ ಮಾಜಿ ಶಾಸಕ ಕೆ ವೆಂಕಟಸ್ವಾಮಿ ತಪ್ಪಿತಸ್ಥ
TV9 Web
| Edited By: ಸಾಧು ಶ್ರೀನಾಥ್​|

Updated on:Jun 24, 2022 | 8:27 PM

Share

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ದೇವನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕೆ. ವೆಂಕಟಸ್ವಾಮಿ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ (People Representative Court) ಸಾರಿದೆ. ಜೊತೆಗೆ ಕಾಂಗ್ರೆಸ್​ ಶಾಸಕ ವೆಂಕಟಸ್ವಾಮಿಗೆ (Dervanahalli Congress MLA K Venkataswamy) 10.50 ಲಕ್ಷ ರೂ. ದಂಡ‌ ವಿಧಿಸಿದೆ. ದಂಡ‌ ಪಾವತಿಸದಿದ್ದರೆ 6 ತಿಂಗಳು ಸೆರೆವಾಸದ ಶಿಕ್ಷೆಯನ್ನು ವಿಧಿಸಬಹುದಾಗಿದೆ. ಸಾಲಕ್ಕೆ ಪ್ರತಿಯಾಗಿ ನೀಡಿದ್ದ ಚೆಕ್ ಬೌನ್ಸ್ ಆದ ಹಿನ್ನೆಲೆ ನಾಗಭೂಷಣ ಎಂಬುವರು ಖಾಸಗಿ ದೂರು ದಾಖಲಿಸಿದ್ದರು.

ಜುಲೈ 14 ರಂದು ಕೋರ್ಟ್​ಗೆ ಹಾಜರಾಗುವಂತೆ ಸಚಿವ ಮುನಿರತ್ನಗೆ ಸಮನ್ಸ್ ಜಾರಿ

ಚುನಾವಣೆ ನೀತಿಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಹಾಲಿ ಸಚಿವ ಮುನಿರತ್ನಗೆ ಸಮನ್ಸ್ ಜಾರಿಗೊಳಿಸಲು ಸೂಚಿಸಲಾಗಿದೆ. ಸಮನ್ಸ್ ಜಾರಿಗೊಳಿಸಲು ವಿಫಲರಾದ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಜನಪ್ರತಿನಿಧಿಗಳ ಕೋರ್ಟ್ ಮೆಮೋ ನೀಡಿದೆ. ಜುಲೈ 14 ರಂದು ಹಾಜರಾಗುವಂತೆ ಸಮನ್ಸ್ ಜಾರಿಗೆ ಕೋರ್ಟ್​ನಿಂದ ಸೂಚನೆ ನೀಡಲಾಗಿದೆ. 2018 ರಲ್ಲಿ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪೊಲೀಸರು ಮುನಿರತ್ನ ಮತ್ತಿತರರ ವಿರುದ್ಧ ಆರೋಪಪಟ್ಟಿ ದಾಖಲಿಸಿದ್ದರು.

ಮಾಜಿ ಶಾಸಕ ವೈಎಸ್ ವಿ ದತ್ತಾ ವಿರುದ್ಧ ವಾರೆಂಟ್ ಜಾರಿ

ಜೆಡಿಎಸ್ ಮಾಜಿ ಶಾಸಕ ವೈಎಸ್ ವಿ ದತ್ತಾ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಎಸ್ ಸೋಮೇಗೌಡ ಎಂಬುವರು ವೈ ಎಸ್ ವಿ ದತ್ತಾ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ಸಂಬಂಧ ಖಾಸಗಿ ದೂರು ಸಲ್ಲಿಸಿದ್ದರು. ಕೋರ್ಟ್ ಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ವೈಎಸ್ ವಿ ದತ್ತಾಗೆ ವಾರೆಂಟ್ ಜಾರಿಗೊಳಿಸಲಾಗಿದೆ. 42 ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಜೆ. ಪ್ರೀತ್ ಈ ಆದೇಶ ಹೊರಡಿಸಿದ್ದಾರೆ. ಜೂನ್ 30 ಕ್ಕೆ ವೈಎಸ್ ವಿ ದತ್ತಾ ರನ್ನು ಹಾಜರುಪಡಿಸಲು ಸೂಚನೆ ನೀಡಲಾಗಿದೆ.

Also Read:

ಮೆಟ್ರೋ ಪ್ರಯಾಣಿಕರಿಗೆ ವಿಶೇಷ ಸೂಚನೆ; ಶನಿವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

Also Read:

Gold- Silver Price: ದೇಶದ ಪ್ರಮುಖ ನಗರಗಳಲ್ಲಿ ಜೂನ್ 24ರ ಶುಕ್ರವಾರದ ಚಿನ್ನ- ಬೆಳ್ಳಿ ದರ ಇಲ್ಲಿದೆ

Published On - 8:18 pm, Fri, 24 June 22

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!