AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್​ ಮಾಜಿ ಶಾಸಕ ಕೆ ವೆಂಕಟಸ್ವಾಮಿ ತಪ್ಪಿತಸ್ಥ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

Check Bounce: ಚೆಕ್ ಬೌನ್ಸ್ ಪ್ರಕರಣದಲ್ಲಿ ದೇವನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕೆ. ವೆಂಕಟಸ್ವಾಮಿ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಾರಿದೆ. ಸಾಲಕ್ಕೆ ಪ್ರತಿಯಾಗಿ ನೀಡಿದ್ದ ಚೆಕ್ ಬೌನ್ಸ್ ಆದ ಹಿನ್ನೆಲೆ ನಾಗಭೂಷಣ ಎಂಬುವರು ಖಾಸಗಿ ದೂರು ದಾಖಲಿಸಿದ್ದರು.

ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್​ ಮಾಜಿ ಶಾಸಕ ಕೆ ವೆಂಕಟಸ್ವಾಮಿ ತಪ್ಪಿತಸ್ಥ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ
ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್​ ಮಾಜಿ ಶಾಸಕ ಕೆ ವೆಂಕಟಸ್ವಾಮಿ ತಪ್ಪಿತಸ್ಥ
TV9 Web
| Edited By: |

Updated on:Jun 24, 2022 | 8:27 PM

Share

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ದೇವನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕೆ. ವೆಂಕಟಸ್ವಾಮಿ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ (People Representative Court) ಸಾರಿದೆ. ಜೊತೆಗೆ ಕಾಂಗ್ರೆಸ್​ ಶಾಸಕ ವೆಂಕಟಸ್ವಾಮಿಗೆ (Dervanahalli Congress MLA K Venkataswamy) 10.50 ಲಕ್ಷ ರೂ. ದಂಡ‌ ವಿಧಿಸಿದೆ. ದಂಡ‌ ಪಾವತಿಸದಿದ್ದರೆ 6 ತಿಂಗಳು ಸೆರೆವಾಸದ ಶಿಕ್ಷೆಯನ್ನು ವಿಧಿಸಬಹುದಾಗಿದೆ. ಸಾಲಕ್ಕೆ ಪ್ರತಿಯಾಗಿ ನೀಡಿದ್ದ ಚೆಕ್ ಬೌನ್ಸ್ ಆದ ಹಿನ್ನೆಲೆ ನಾಗಭೂಷಣ ಎಂಬುವರು ಖಾಸಗಿ ದೂರು ದಾಖಲಿಸಿದ್ದರು.

ಜುಲೈ 14 ರಂದು ಕೋರ್ಟ್​ಗೆ ಹಾಜರಾಗುವಂತೆ ಸಚಿವ ಮುನಿರತ್ನಗೆ ಸಮನ್ಸ್ ಜಾರಿ

ಚುನಾವಣೆ ನೀತಿಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಹಾಲಿ ಸಚಿವ ಮುನಿರತ್ನಗೆ ಸಮನ್ಸ್ ಜಾರಿಗೊಳಿಸಲು ಸೂಚಿಸಲಾಗಿದೆ. ಸಮನ್ಸ್ ಜಾರಿಗೊಳಿಸಲು ವಿಫಲರಾದ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಜನಪ್ರತಿನಿಧಿಗಳ ಕೋರ್ಟ್ ಮೆಮೋ ನೀಡಿದೆ. ಜುಲೈ 14 ರಂದು ಹಾಜರಾಗುವಂತೆ ಸಮನ್ಸ್ ಜಾರಿಗೆ ಕೋರ್ಟ್​ನಿಂದ ಸೂಚನೆ ನೀಡಲಾಗಿದೆ. 2018 ರಲ್ಲಿ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪೊಲೀಸರು ಮುನಿರತ್ನ ಮತ್ತಿತರರ ವಿರುದ್ಧ ಆರೋಪಪಟ್ಟಿ ದಾಖಲಿಸಿದ್ದರು.

ಮಾಜಿ ಶಾಸಕ ವೈಎಸ್ ವಿ ದತ್ತಾ ವಿರುದ್ಧ ವಾರೆಂಟ್ ಜಾರಿ

ಜೆಡಿಎಸ್ ಮಾಜಿ ಶಾಸಕ ವೈಎಸ್ ವಿ ದತ್ತಾ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಎಸ್ ಸೋಮೇಗೌಡ ಎಂಬುವರು ವೈ ಎಸ್ ವಿ ದತ್ತಾ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ಸಂಬಂಧ ಖಾಸಗಿ ದೂರು ಸಲ್ಲಿಸಿದ್ದರು. ಕೋರ್ಟ್ ಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ವೈಎಸ್ ವಿ ದತ್ತಾಗೆ ವಾರೆಂಟ್ ಜಾರಿಗೊಳಿಸಲಾಗಿದೆ. 42 ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಜೆ. ಪ್ರೀತ್ ಈ ಆದೇಶ ಹೊರಡಿಸಿದ್ದಾರೆ. ಜೂನ್ 30 ಕ್ಕೆ ವೈಎಸ್ ವಿ ದತ್ತಾ ರನ್ನು ಹಾಜರುಪಡಿಸಲು ಸೂಚನೆ ನೀಡಲಾಗಿದೆ.

Also Read:

ಮೆಟ್ರೋ ಪ್ರಯಾಣಿಕರಿಗೆ ವಿಶೇಷ ಸೂಚನೆ; ಶನಿವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

Also Read:

Gold- Silver Price: ದೇಶದ ಪ್ರಮುಖ ನಗರಗಳಲ್ಲಿ ಜೂನ್ 24ರ ಶುಕ್ರವಾರದ ಚಿನ್ನ- ಬೆಳ್ಳಿ ದರ ಇಲ್ಲಿದೆ

Published On - 8:18 pm, Fri, 24 June 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ