AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಆರ್​ ನಗರ ಶಾಸಕ ಮುನಿರತ್ನಗೆ ನೋಟಿಸ್ ಜಾರಿ ಮಾಡಿದ ಚಿಕ್ಕಜಾಲ ಠಾಣೆ ಪೊಲೀಸರು

ಜಮೀನಿನಲ್ಲಿ ಲೈಸೆನ್ಸ್ ಪಡೆಯದೆ ಸ್ಫೋಟಕಗಳನ್ನು ಬಳಸಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿರುವ ಆರೋಪ ಸಂಬಂಧ ಆರ್​ಆರ್​ ನಗರ ಕ್ಷೇತ್ರದ ಬಿಜೆಪಿ ಶಾಸಕ ಎನ್ ಮುನಿರತ್ನ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಈ ಸಂಬಂಧ ಚಿಕ್ಕಜಾಲ ಠಾಣಾ ಪೊಲೀಸರು, ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಆರ್​ಆರ್​ ನಗರ ಶಾಸಕ ಮುನಿರತ್ನಗೆ ನೋಟಿಸ್ ಜಾರಿ ಮಾಡಿದ ಚಿಕ್ಕಜಾಲ ಠಾಣೆ ಪೊಲೀಸರು
FIR ಸಂಬಂಧ ಶಾಸಕ ಎನ್ ಮುನಿರತ್ನ ಅವರಿಗೆ ನೋಟಿಸ್ ಜಾರಿ ಮಾಡಿದ ಚಿಕ್ಕಜಾಲ ಠಾಣಾ ಪೊಲೀಸರು
ನವೀನ್ ಕುಮಾರ್ ಟಿ
| Edited By: |

Updated on: Jul 14, 2023 | 7:35 PM

Share

ದೇವನಹಳ್ಳಿ, ಜುಲೈ 14: ಜಮೀನಿನಲ್ಲಿ ಲೈಸೆನ್ಸ್ ಪಡೆಯದೆ ಸ್ಫೋಟಕಗಳನ್ನು ಬಳಸಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿರುವ ಆರೋಪದಡಿ ದಾಖಲಾದ ಎಫ್​ಐಆರ್ ಸಂಬಂಧ ಚಿಕ್ಕಜಾಲ ಠಾಣಾ ಪೊಲೀಸರು ಆರ್​ಆರ್​ ನಗರದ ಬಿಜೆಪಿ ಶಾಸಕ ಎನ್ ಮುನಿರತ್ನ (N Munirathna) ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ಕೊಟ್ಟ ಮೂರು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ತಾಕೀತು ಮಾಡಲಾಗಿದೆ.

ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಪ್ಐಆರ್ ದಾಖಲಾಗಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಇನ್​ಸ್ಪೆಕ್ಟರ್​ ಅವರು ನೋಟಿಸ್ ಜಾರಿ ಮಾಡಿದ್ದು, ಇಂದು ಅಥವಾ ನಾಳೆ ಮುನಿರತ್ನ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ‌ ಇದೆ. ಪ್ರಕರಣ ಸಂಬಂಧ ಈಗಾಗಲೇ ಮೂವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಇದನ್ನೂ ಓದಿ: ಜಿಲೆಟಿನ್ ಸ್ಫೋಟಿಸಲು ಲೈಸೆನ್ಸ್ ಇದೆ, ಅದು ಗಣಿಗಾರಿಕೆ ಅಲ್ಲ: ಶಾಸಕ ಮುನಿರತ್ನ ಸ್ಪಷ್ಟನೆ

ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್​ ಸ್ಫೋಟಿಸಿದ ಆರೋಪದಡಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ಅವರು ನೀಡಿದ ದೂರಿನ ಅನ್ವಯ ಚಿಕ್ಕಜಾಲ ಠಾಣಾ ಪೊಲೀಸರು ಶಾಸಕ ಮುನಿರತ್ನ, ಆನಂದನ್, ಗಣೇಶ್, ರಾಧಮ್ಮ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ಸ್ಫೋಟಕ ಕಾಯ್ದೆ 1884 US 9B(1b) , ಕರ್ನಾಟಕ ಭೂ ಕಂದಾಯ ಕಾಯ್ದೆ 1964ರಡಿ ಕೇಸ್ ದಾಖಲಾಗಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಎಫ್​ಐಆರ್ ಸಂಬಂಧ ಪ್ರತಿಕ್ರಿಯೆ ನೀಡಿದ ಮುನಿರತ್ನ, ಗಣಿಗಾರಿಕೆ ಮಾಡುವ ವೃತ್ತಿ ನನ್ನದಲ್ಲ. ಗಣಿಗಾರಿಕೆ ಮಾಡಿದರೆ ಸರ್ಕಾರದಿಂದ ಲೈಸೆನ್ಸ್ ಪಡೆಯಬೇಕು. ಮನೆ ಕಟ್ಟುವುದಕ್ಕೆ ಹಿಟಾಚಿ ಮೂಲಕ ಪಾಯ ತೆಗೆಯುತ್ತಿದ್ದೇನೆ. ಜಿಲೆಟಿನ್ ಸ್ಫೋಟಿಸಲು ಲೈಸೆನ್ಸ್ ಇದೆ, ಅದು ಗಣಿಗಾರಿಕೆ ಅಲ್ಲ. ಅದು ಖರೀದಿಸಿದ ಭೂಮಿ, ಸ್ವಂತ ಭೂಮಿ ಅಲ್ಲ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ