AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಆರ್​ ನಗರ ಶಾಸಕ ಮುನಿರತ್ನಗೆ ನೋಟಿಸ್ ಜಾರಿ ಮಾಡಿದ ಚಿಕ್ಕಜಾಲ ಠಾಣೆ ಪೊಲೀಸರು

ಜಮೀನಿನಲ್ಲಿ ಲೈಸೆನ್ಸ್ ಪಡೆಯದೆ ಸ್ಫೋಟಕಗಳನ್ನು ಬಳಸಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿರುವ ಆರೋಪ ಸಂಬಂಧ ಆರ್​ಆರ್​ ನಗರ ಕ್ಷೇತ್ರದ ಬಿಜೆಪಿ ಶಾಸಕ ಎನ್ ಮುನಿರತ್ನ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಈ ಸಂಬಂಧ ಚಿಕ್ಕಜಾಲ ಠಾಣಾ ಪೊಲೀಸರು, ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಆರ್​ಆರ್​ ನಗರ ಶಾಸಕ ಮುನಿರತ್ನಗೆ ನೋಟಿಸ್ ಜಾರಿ ಮಾಡಿದ ಚಿಕ್ಕಜಾಲ ಠಾಣೆ ಪೊಲೀಸರು
FIR ಸಂಬಂಧ ಶಾಸಕ ಎನ್ ಮುನಿರತ್ನ ಅವರಿಗೆ ನೋಟಿಸ್ ಜಾರಿ ಮಾಡಿದ ಚಿಕ್ಕಜಾಲ ಠಾಣಾ ಪೊಲೀಸರು
ನವೀನ್ ಕುಮಾರ್ ಟಿ
| Edited By: |

Updated on: Jul 14, 2023 | 7:35 PM

Share

ದೇವನಹಳ್ಳಿ, ಜುಲೈ 14: ಜಮೀನಿನಲ್ಲಿ ಲೈಸೆನ್ಸ್ ಪಡೆಯದೆ ಸ್ಫೋಟಕಗಳನ್ನು ಬಳಸಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿರುವ ಆರೋಪದಡಿ ದಾಖಲಾದ ಎಫ್​ಐಆರ್ ಸಂಬಂಧ ಚಿಕ್ಕಜಾಲ ಠಾಣಾ ಪೊಲೀಸರು ಆರ್​ಆರ್​ ನಗರದ ಬಿಜೆಪಿ ಶಾಸಕ ಎನ್ ಮುನಿರತ್ನ (N Munirathna) ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ಕೊಟ್ಟ ಮೂರು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ತಾಕೀತು ಮಾಡಲಾಗಿದೆ.

ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಪ್ಐಆರ್ ದಾಖಲಾಗಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಇನ್​ಸ್ಪೆಕ್ಟರ್​ ಅವರು ನೋಟಿಸ್ ಜಾರಿ ಮಾಡಿದ್ದು, ಇಂದು ಅಥವಾ ನಾಳೆ ಮುನಿರತ್ನ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ‌ ಇದೆ. ಪ್ರಕರಣ ಸಂಬಂಧ ಈಗಾಗಲೇ ಮೂವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಇದನ್ನೂ ಓದಿ: ಜಿಲೆಟಿನ್ ಸ್ಫೋಟಿಸಲು ಲೈಸೆನ್ಸ್ ಇದೆ, ಅದು ಗಣಿಗಾರಿಕೆ ಅಲ್ಲ: ಶಾಸಕ ಮುನಿರತ್ನ ಸ್ಪಷ್ಟನೆ

ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್​ ಸ್ಫೋಟಿಸಿದ ಆರೋಪದಡಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ಅವರು ನೀಡಿದ ದೂರಿನ ಅನ್ವಯ ಚಿಕ್ಕಜಾಲ ಠಾಣಾ ಪೊಲೀಸರು ಶಾಸಕ ಮುನಿರತ್ನ, ಆನಂದನ್, ಗಣೇಶ್, ರಾಧಮ್ಮ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ಸ್ಫೋಟಕ ಕಾಯ್ದೆ 1884 US 9B(1b) , ಕರ್ನಾಟಕ ಭೂ ಕಂದಾಯ ಕಾಯ್ದೆ 1964ರಡಿ ಕೇಸ್ ದಾಖಲಾಗಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಎಫ್​ಐಆರ್ ಸಂಬಂಧ ಪ್ರತಿಕ್ರಿಯೆ ನೀಡಿದ ಮುನಿರತ್ನ, ಗಣಿಗಾರಿಕೆ ಮಾಡುವ ವೃತ್ತಿ ನನ್ನದಲ್ಲ. ಗಣಿಗಾರಿಕೆ ಮಾಡಿದರೆ ಸರ್ಕಾರದಿಂದ ಲೈಸೆನ್ಸ್ ಪಡೆಯಬೇಕು. ಮನೆ ಕಟ್ಟುವುದಕ್ಕೆ ಹಿಟಾಚಿ ಮೂಲಕ ಪಾಯ ತೆಗೆಯುತ್ತಿದ್ದೇನೆ. ಜಿಲೆಟಿನ್ ಸ್ಫೋಟಿಸಲು ಲೈಸೆನ್ಸ್ ಇದೆ, ಅದು ಗಣಿಗಾರಿಕೆ ಅಲ್ಲ. ಅದು ಖರೀದಿಸಿದ ಭೂಮಿ, ಸ್ವಂತ ಭೂಮಿ ಅಲ್ಲ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು