AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಆರ್​ ನಗರ ಶಾಸಕ ಮುನಿರತ್ನಗೆ ನೋಟಿಸ್ ಜಾರಿ ಮಾಡಿದ ಚಿಕ್ಕಜಾಲ ಠಾಣೆ ಪೊಲೀಸರು

ಜಮೀನಿನಲ್ಲಿ ಲೈಸೆನ್ಸ್ ಪಡೆಯದೆ ಸ್ಫೋಟಕಗಳನ್ನು ಬಳಸಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿರುವ ಆರೋಪ ಸಂಬಂಧ ಆರ್​ಆರ್​ ನಗರ ಕ್ಷೇತ್ರದ ಬಿಜೆಪಿ ಶಾಸಕ ಎನ್ ಮುನಿರತ್ನ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಈ ಸಂಬಂಧ ಚಿಕ್ಕಜಾಲ ಠಾಣಾ ಪೊಲೀಸರು, ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಆರ್​ಆರ್​ ನಗರ ಶಾಸಕ ಮುನಿರತ್ನಗೆ ನೋಟಿಸ್ ಜಾರಿ ಮಾಡಿದ ಚಿಕ್ಕಜಾಲ ಠಾಣೆ ಪೊಲೀಸರು
FIR ಸಂಬಂಧ ಶಾಸಕ ಎನ್ ಮುನಿರತ್ನ ಅವರಿಗೆ ನೋಟಿಸ್ ಜಾರಿ ಮಾಡಿದ ಚಿಕ್ಕಜಾಲ ಠಾಣಾ ಪೊಲೀಸರು
ನವೀನ್ ಕುಮಾರ್ ಟಿ
| Updated By: Rakesh Nayak Manchi|

Updated on: Jul 14, 2023 | 7:35 PM

Share

ದೇವನಹಳ್ಳಿ, ಜುಲೈ 14: ಜಮೀನಿನಲ್ಲಿ ಲೈಸೆನ್ಸ್ ಪಡೆಯದೆ ಸ್ಫೋಟಕಗಳನ್ನು ಬಳಸಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿರುವ ಆರೋಪದಡಿ ದಾಖಲಾದ ಎಫ್​ಐಆರ್ ಸಂಬಂಧ ಚಿಕ್ಕಜಾಲ ಠಾಣಾ ಪೊಲೀಸರು ಆರ್​ಆರ್​ ನಗರದ ಬಿಜೆಪಿ ಶಾಸಕ ಎನ್ ಮುನಿರತ್ನ (N Munirathna) ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ಕೊಟ್ಟ ಮೂರು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ತಾಕೀತು ಮಾಡಲಾಗಿದೆ.

ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಪ್ಐಆರ್ ದಾಖಲಾಗಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಇನ್​ಸ್ಪೆಕ್ಟರ್​ ಅವರು ನೋಟಿಸ್ ಜಾರಿ ಮಾಡಿದ್ದು, ಇಂದು ಅಥವಾ ನಾಳೆ ಮುನಿರತ್ನ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ‌ ಇದೆ. ಪ್ರಕರಣ ಸಂಬಂಧ ಈಗಾಗಲೇ ಮೂವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಇದನ್ನೂ ಓದಿ: ಜಿಲೆಟಿನ್ ಸ್ಫೋಟಿಸಲು ಲೈಸೆನ್ಸ್ ಇದೆ, ಅದು ಗಣಿಗಾರಿಕೆ ಅಲ್ಲ: ಶಾಸಕ ಮುನಿರತ್ನ ಸ್ಪಷ್ಟನೆ

ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್​ ಸ್ಫೋಟಿಸಿದ ಆರೋಪದಡಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ಅವರು ನೀಡಿದ ದೂರಿನ ಅನ್ವಯ ಚಿಕ್ಕಜಾಲ ಠಾಣಾ ಪೊಲೀಸರು ಶಾಸಕ ಮುನಿರತ್ನ, ಆನಂದನ್, ಗಣೇಶ್, ರಾಧಮ್ಮ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ಸ್ಫೋಟಕ ಕಾಯ್ದೆ 1884 US 9B(1b) , ಕರ್ನಾಟಕ ಭೂ ಕಂದಾಯ ಕಾಯ್ದೆ 1964ರಡಿ ಕೇಸ್ ದಾಖಲಾಗಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಎಫ್​ಐಆರ್ ಸಂಬಂಧ ಪ್ರತಿಕ್ರಿಯೆ ನೀಡಿದ ಮುನಿರತ್ನ, ಗಣಿಗಾರಿಕೆ ಮಾಡುವ ವೃತ್ತಿ ನನ್ನದಲ್ಲ. ಗಣಿಗಾರಿಕೆ ಮಾಡಿದರೆ ಸರ್ಕಾರದಿಂದ ಲೈಸೆನ್ಸ್ ಪಡೆಯಬೇಕು. ಮನೆ ಕಟ್ಟುವುದಕ್ಕೆ ಹಿಟಾಚಿ ಮೂಲಕ ಪಾಯ ತೆಗೆಯುತ್ತಿದ್ದೇನೆ. ಜಿಲೆಟಿನ್ ಸ್ಫೋಟಿಸಲು ಲೈಸೆನ್ಸ್ ಇದೆ, ಅದು ಗಣಿಗಾರಿಕೆ ಅಲ್ಲ. ಅದು ಖರೀದಿಸಿದ ಭೂಮಿ, ಸ್ವಂತ ಭೂಮಿ ಅಲ್ಲ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್