AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡವೆ ಅಂಗಡಿ ಮಾಲಿಕರು, ಪೊಲೀಸರ ನಡುವೆ ಕಿರಿಕ್​; ಮಫ್ತಿಯಲ್ಲಿ ಬಂದು ವರ್ತಕರ ಮೇಲೆ ದರ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ ನವಜ್ಯೋತಿ ಜ್ಯುವೆಲರ್ಸ್ ಅಂಗಡಿ ಮಾಲಿಕ ಮತ್ತು ಪೊಲೀಸರ ನಡುವೆ ಗಲಾಟೆಯಾಗಿದೆ.

ಒಡವೆ ಅಂಗಡಿ ಮಾಲಿಕರು, ಪೊಲೀಸರ ನಡುವೆ ಕಿರಿಕ್​; ಮಫ್ತಿಯಲ್ಲಿ ಬಂದು ವರ್ತಕರ ಮೇಲೆ ದರ್ಪ
ಚಿನ್ನದ ಅಂಗಡಿ ಮಾಲಿಕನ ಮೇಲೆ ಪೊಲೀಸ್​ ದರ್ಪ
TV9 Web
| Edited By: |

Updated on: Nov 14, 2022 | 10:24 PM

Share

ಅಲ್ಲಿ ಪೊಲೀಸರು ಹಾಗೂ ಚಿನ್ನದಂಗಡಿ ಮಾಲೀಕರ ನಡುವೆ ಟಗಾಫರ್ ಶುರುವಾಗಿತ್ತು. ಮಫ್ತಿಯಲ್ಲಿ ಬಂದಿದ್ದ ಪೊಲೀಸರ ಮೇಲೆ ಚಿನ್ನದಂಗಡಿ ಮಾಲೀಕರು ರೊಚ್ಚಿಗೆದ್ದಿದ್ದರು. ಅಷ್ಟಕ್ಕೂ ಅಲ್ಲಿ ನಡೆದಿದ್ದಾದರೂ ಏನೂ ಅಂತೀರಾ.? ಈ ಸ್ಟೋರಿ ಓದಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ ನವಜ್ಯೋತಿ ಜ್ಯುವೆಲರ್ಸ್ ಅಂಗಡಿ ಇದೆ. ಈ ಅಂಗಡಿಗೆ ಅವಲಹಳ್ಳಿ ಪೊಲೀಸರು ಪ್ರಕರಣವೊಂದರಲ್ಲಿ ಮಹಿಳೆ ಮಾರಾಟ ಮಾಡಿದ್ದ ಚಿನ್ನವನ್ನು ರಿಕವರಿ ಮಾಡಿಕೊಳ್ಳಲು ಬಂದಿದ್ದರು. ಈ ವೇಳೆ ಪೊಲೀಸರ ನಡತೆಗೆ ಒಡವೆ ಅಂಗಡಿ ಮಾಲೀಕರು ಗರಂ ಆಗಿದ್ದು, ಪೊಲೀಸರು ಹಾಗೂ ವರ್ತಕರ ಸಂಘದವರ ನಡುವೆ ಮಾತಿಗೆ ಮಾತು ಬೆಳೆದು ಕಿರಿಕ್ ಶುರುವಾಗಿತ್ತು.

ಈ ಪ್ರಕರಣ ಒಂದಡೆಯಾದರೆ ಕಳೆದ ಮೂರು ದಿನಗಳ‌ ಹಿಂದೆಯೂ ಸಹ ನಂದಗುಡಿ ಪೊಲೀಸರು ಮಫ್ತಿಯಲ್ಲಿ ಬಂದು ನೆಲಮಂಗಲ ನಗರದ ಧನಲಕ್ಷ್ಮಿ ಜ್ಯುವೆಲ್ಲರ್ಸ್‌ ಅಂಗಡಿಗೆ ನುಗ್ಗಿ ಒಂದು ಲಕ್ಷ ನಗದು ವಸೂಲಿ ಮಾಡಿದ್ದರು ಎಂದು ಆರೋಪಿಸಲಾಗಿದೆ. ಪದೇ ಪದೇ ಪೊಲೀಸರು ಮಫ್ತಿಯಲ್ಲಿ ಬರುವುದಲ್ಲದೇ ಯಾವುದೇ ಕೋರ್ಟ್ ನೋಟೀಸ್ ನೀಡುವುದಿಲ್ಲ. ಅಂಗಡಿ ಬಳಿಗೆ ಬಂದು ಇವರು ಚಿನ್ನವನ್ನು ನಿಮ್ಮಲ್ಲಿ ಮಾರಾಟ ಮಾಡಿದ್ದಾರೆ ಎಂದು ಬೆದರಿಕೆ ಹಾಕುತ್ತಾರೆ. ಅಂಗಡಿಯವರು ಕೊಂಡುಕೊಂಡಿಲ್ಲ ಎಂದರೂ ಮಾತು ಕೇಳದೇ, ಪದೆ ಪದೇ ಹಿಂಸೆ ನೀಡುತ್ತಿದ್ದಾರೆ ಎನ್ನುತ್ತಾರೆ ಚಿನ್ನ ಬೆಳ್ಳಿ ವರ್ತಕರ ಸಂಘದ ಅಧ್ಯಕ್ಷ.

ನಂತರ ವರ್ತಕರ ಸಂಘದವರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಬಳಿಕ ಅವಲಹಳ್ಳಿ ಠಾಣಾ ಎಸ್​ಐ ನಂದೀಶ ಹಾಗೂ ಮಫ್ತಿಯಲ್ಲಿದ್ದ ಸಿಬ್ಬಂದಿಗಳನ್ನು ಕರೆಯಿಸಿ ಮಾತುಕತೆ ನಡೆಸಿದ್ದು, ಇನ್ನು ಮುಂದೆ ಎನಾದರೂ ಇದ್ದಲ್ಲಿ ಕೋರ್ಟ್ ಆದೇಶದ ಪ್ರತಿಯೊಂದಿಗೆ ಬಂದು ದಸ್ತಗಿರಿ ಮಾಡುವಂತೆ ಆಗ್ರಹಿಸಿದ್ದಾರೆ.

ವರದಿ- ವಿನಾಯಕ್ ಗುರವ್ ಟಿವಿ9 ನೆಲಮಂಗಲ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್