AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡವೆ ಅಂಗಡಿ ಮಾಲಿಕರು, ಪೊಲೀಸರ ನಡುವೆ ಕಿರಿಕ್​; ಮಫ್ತಿಯಲ್ಲಿ ಬಂದು ವರ್ತಕರ ಮೇಲೆ ದರ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ ನವಜ್ಯೋತಿ ಜ್ಯುವೆಲರ್ಸ್ ಅಂಗಡಿ ಮಾಲಿಕ ಮತ್ತು ಪೊಲೀಸರ ನಡುವೆ ಗಲಾಟೆಯಾಗಿದೆ.

ಒಡವೆ ಅಂಗಡಿ ಮಾಲಿಕರು, ಪೊಲೀಸರ ನಡುವೆ ಕಿರಿಕ್​; ಮಫ್ತಿಯಲ್ಲಿ ಬಂದು ವರ್ತಕರ ಮೇಲೆ ದರ್ಪ
ಚಿನ್ನದ ಅಂಗಡಿ ಮಾಲಿಕನ ಮೇಲೆ ಪೊಲೀಸ್​ ದರ್ಪ
TV9 Web
| Edited By: |

Updated on: Nov 14, 2022 | 10:24 PM

Share

ಅಲ್ಲಿ ಪೊಲೀಸರು ಹಾಗೂ ಚಿನ್ನದಂಗಡಿ ಮಾಲೀಕರ ನಡುವೆ ಟಗಾಫರ್ ಶುರುವಾಗಿತ್ತು. ಮಫ್ತಿಯಲ್ಲಿ ಬಂದಿದ್ದ ಪೊಲೀಸರ ಮೇಲೆ ಚಿನ್ನದಂಗಡಿ ಮಾಲೀಕರು ರೊಚ್ಚಿಗೆದ್ದಿದ್ದರು. ಅಷ್ಟಕ್ಕೂ ಅಲ್ಲಿ ನಡೆದಿದ್ದಾದರೂ ಏನೂ ಅಂತೀರಾ.? ಈ ಸ್ಟೋರಿ ಓದಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ ನವಜ್ಯೋತಿ ಜ್ಯುವೆಲರ್ಸ್ ಅಂಗಡಿ ಇದೆ. ಈ ಅಂಗಡಿಗೆ ಅವಲಹಳ್ಳಿ ಪೊಲೀಸರು ಪ್ರಕರಣವೊಂದರಲ್ಲಿ ಮಹಿಳೆ ಮಾರಾಟ ಮಾಡಿದ್ದ ಚಿನ್ನವನ್ನು ರಿಕವರಿ ಮಾಡಿಕೊಳ್ಳಲು ಬಂದಿದ್ದರು. ಈ ವೇಳೆ ಪೊಲೀಸರ ನಡತೆಗೆ ಒಡವೆ ಅಂಗಡಿ ಮಾಲೀಕರು ಗರಂ ಆಗಿದ್ದು, ಪೊಲೀಸರು ಹಾಗೂ ವರ್ತಕರ ಸಂಘದವರ ನಡುವೆ ಮಾತಿಗೆ ಮಾತು ಬೆಳೆದು ಕಿರಿಕ್ ಶುರುವಾಗಿತ್ತು.

ಈ ಪ್ರಕರಣ ಒಂದಡೆಯಾದರೆ ಕಳೆದ ಮೂರು ದಿನಗಳ‌ ಹಿಂದೆಯೂ ಸಹ ನಂದಗುಡಿ ಪೊಲೀಸರು ಮಫ್ತಿಯಲ್ಲಿ ಬಂದು ನೆಲಮಂಗಲ ನಗರದ ಧನಲಕ್ಷ್ಮಿ ಜ್ಯುವೆಲ್ಲರ್ಸ್‌ ಅಂಗಡಿಗೆ ನುಗ್ಗಿ ಒಂದು ಲಕ್ಷ ನಗದು ವಸೂಲಿ ಮಾಡಿದ್ದರು ಎಂದು ಆರೋಪಿಸಲಾಗಿದೆ. ಪದೇ ಪದೇ ಪೊಲೀಸರು ಮಫ್ತಿಯಲ್ಲಿ ಬರುವುದಲ್ಲದೇ ಯಾವುದೇ ಕೋರ್ಟ್ ನೋಟೀಸ್ ನೀಡುವುದಿಲ್ಲ. ಅಂಗಡಿ ಬಳಿಗೆ ಬಂದು ಇವರು ಚಿನ್ನವನ್ನು ನಿಮ್ಮಲ್ಲಿ ಮಾರಾಟ ಮಾಡಿದ್ದಾರೆ ಎಂದು ಬೆದರಿಕೆ ಹಾಕುತ್ತಾರೆ. ಅಂಗಡಿಯವರು ಕೊಂಡುಕೊಂಡಿಲ್ಲ ಎಂದರೂ ಮಾತು ಕೇಳದೇ, ಪದೆ ಪದೇ ಹಿಂಸೆ ನೀಡುತ್ತಿದ್ದಾರೆ ಎನ್ನುತ್ತಾರೆ ಚಿನ್ನ ಬೆಳ್ಳಿ ವರ್ತಕರ ಸಂಘದ ಅಧ್ಯಕ್ಷ.

ನಂತರ ವರ್ತಕರ ಸಂಘದವರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಬಳಿಕ ಅವಲಹಳ್ಳಿ ಠಾಣಾ ಎಸ್​ಐ ನಂದೀಶ ಹಾಗೂ ಮಫ್ತಿಯಲ್ಲಿದ್ದ ಸಿಬ್ಬಂದಿಗಳನ್ನು ಕರೆಯಿಸಿ ಮಾತುಕತೆ ನಡೆಸಿದ್ದು, ಇನ್ನು ಮುಂದೆ ಎನಾದರೂ ಇದ್ದಲ್ಲಿ ಕೋರ್ಟ್ ಆದೇಶದ ಪ್ರತಿಯೊಂದಿಗೆ ಬಂದು ದಸ್ತಗಿರಿ ಮಾಡುವಂತೆ ಆಗ್ರಹಿಸಿದ್ದಾರೆ.

ವರದಿ- ವಿನಾಯಕ್ ಗುರವ್ ಟಿವಿ9 ನೆಲಮಂಗಲ

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ