AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡವೆ ಅಂಗಡಿ ಮಾಲಿಕರು, ಪೊಲೀಸರ ನಡುವೆ ಕಿರಿಕ್​; ಮಫ್ತಿಯಲ್ಲಿ ಬಂದು ವರ್ತಕರ ಮೇಲೆ ದರ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ ನವಜ್ಯೋತಿ ಜ್ಯುವೆಲರ್ಸ್ ಅಂಗಡಿ ಮಾಲಿಕ ಮತ್ತು ಪೊಲೀಸರ ನಡುವೆ ಗಲಾಟೆಯಾಗಿದೆ.

ಒಡವೆ ಅಂಗಡಿ ಮಾಲಿಕರು, ಪೊಲೀಸರ ನಡುವೆ ಕಿರಿಕ್​; ಮಫ್ತಿಯಲ್ಲಿ ಬಂದು ವರ್ತಕರ ಮೇಲೆ ದರ್ಪ
ಚಿನ್ನದ ಅಂಗಡಿ ಮಾಲಿಕನ ಮೇಲೆ ಪೊಲೀಸ್​ ದರ್ಪ
TV9 Web
| Updated By: ವಿವೇಕ ಬಿರಾದಾರ|

Updated on: Nov 14, 2022 | 10:24 PM

Share

ಅಲ್ಲಿ ಪೊಲೀಸರು ಹಾಗೂ ಚಿನ್ನದಂಗಡಿ ಮಾಲೀಕರ ನಡುವೆ ಟಗಾಫರ್ ಶುರುವಾಗಿತ್ತು. ಮಫ್ತಿಯಲ್ಲಿ ಬಂದಿದ್ದ ಪೊಲೀಸರ ಮೇಲೆ ಚಿನ್ನದಂಗಡಿ ಮಾಲೀಕರು ರೊಚ್ಚಿಗೆದ್ದಿದ್ದರು. ಅಷ್ಟಕ್ಕೂ ಅಲ್ಲಿ ನಡೆದಿದ್ದಾದರೂ ಏನೂ ಅಂತೀರಾ.? ಈ ಸ್ಟೋರಿ ಓದಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ ನವಜ್ಯೋತಿ ಜ್ಯುವೆಲರ್ಸ್ ಅಂಗಡಿ ಇದೆ. ಈ ಅಂಗಡಿಗೆ ಅವಲಹಳ್ಳಿ ಪೊಲೀಸರು ಪ್ರಕರಣವೊಂದರಲ್ಲಿ ಮಹಿಳೆ ಮಾರಾಟ ಮಾಡಿದ್ದ ಚಿನ್ನವನ್ನು ರಿಕವರಿ ಮಾಡಿಕೊಳ್ಳಲು ಬಂದಿದ್ದರು. ಈ ವೇಳೆ ಪೊಲೀಸರ ನಡತೆಗೆ ಒಡವೆ ಅಂಗಡಿ ಮಾಲೀಕರು ಗರಂ ಆಗಿದ್ದು, ಪೊಲೀಸರು ಹಾಗೂ ವರ್ತಕರ ಸಂಘದವರ ನಡುವೆ ಮಾತಿಗೆ ಮಾತು ಬೆಳೆದು ಕಿರಿಕ್ ಶುರುವಾಗಿತ್ತು.

ಈ ಪ್ರಕರಣ ಒಂದಡೆಯಾದರೆ ಕಳೆದ ಮೂರು ದಿನಗಳ‌ ಹಿಂದೆಯೂ ಸಹ ನಂದಗುಡಿ ಪೊಲೀಸರು ಮಫ್ತಿಯಲ್ಲಿ ಬಂದು ನೆಲಮಂಗಲ ನಗರದ ಧನಲಕ್ಷ್ಮಿ ಜ್ಯುವೆಲ್ಲರ್ಸ್‌ ಅಂಗಡಿಗೆ ನುಗ್ಗಿ ಒಂದು ಲಕ್ಷ ನಗದು ವಸೂಲಿ ಮಾಡಿದ್ದರು ಎಂದು ಆರೋಪಿಸಲಾಗಿದೆ. ಪದೇ ಪದೇ ಪೊಲೀಸರು ಮಫ್ತಿಯಲ್ಲಿ ಬರುವುದಲ್ಲದೇ ಯಾವುದೇ ಕೋರ್ಟ್ ನೋಟೀಸ್ ನೀಡುವುದಿಲ್ಲ. ಅಂಗಡಿ ಬಳಿಗೆ ಬಂದು ಇವರು ಚಿನ್ನವನ್ನು ನಿಮ್ಮಲ್ಲಿ ಮಾರಾಟ ಮಾಡಿದ್ದಾರೆ ಎಂದು ಬೆದರಿಕೆ ಹಾಕುತ್ತಾರೆ. ಅಂಗಡಿಯವರು ಕೊಂಡುಕೊಂಡಿಲ್ಲ ಎಂದರೂ ಮಾತು ಕೇಳದೇ, ಪದೆ ಪದೇ ಹಿಂಸೆ ನೀಡುತ್ತಿದ್ದಾರೆ ಎನ್ನುತ್ತಾರೆ ಚಿನ್ನ ಬೆಳ್ಳಿ ವರ್ತಕರ ಸಂಘದ ಅಧ್ಯಕ್ಷ.

ನಂತರ ವರ್ತಕರ ಸಂಘದವರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಬಳಿಕ ಅವಲಹಳ್ಳಿ ಠಾಣಾ ಎಸ್​ಐ ನಂದೀಶ ಹಾಗೂ ಮಫ್ತಿಯಲ್ಲಿದ್ದ ಸಿಬ್ಬಂದಿಗಳನ್ನು ಕರೆಯಿಸಿ ಮಾತುಕತೆ ನಡೆಸಿದ್ದು, ಇನ್ನು ಮುಂದೆ ಎನಾದರೂ ಇದ್ದಲ್ಲಿ ಕೋರ್ಟ್ ಆದೇಶದ ಪ್ರತಿಯೊಂದಿಗೆ ಬಂದು ದಸ್ತಗಿರಿ ಮಾಡುವಂತೆ ಆಗ್ರಹಿಸಿದ್ದಾರೆ.

ವರದಿ- ವಿನಾಯಕ್ ಗುರವ್ ಟಿವಿ9 ನೆಲಮಂಗಲ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!