AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್.ವ್ಯಾಸ ವಿಶ್ವವಿದ್ಯಾಲಯದ ನೂತನ ಆಯು ಆ್ಯಪ್ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಎಸ್​​ ವ್ಯಾಸ ವಿಶ್ವವಿದ್ಯಾಲಯದ 24ನೇ ಇನ್ಕೋಫೈರಾ ಕಾರ್ಯಕ್ರಮದಲ್ಲಿ ರೋಗ ಮುಕ್ತ ಭಾರತ ಪರಿಕಲ್ಪನೆಯ ಅಂಗವಾಗಿ ಇನ್ಕೋಫೈರಾ ಸಂಸ್ಥೆ ಸಿದ್ದಪಡಿಸಿದ ನೂತನ ಆಯು ಆ್ಯಪ್​ನ್ನು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು.

ಎಸ್.ವ್ಯಾಸ ವಿಶ್ವವಿದ್ಯಾಲಯದ ನೂತನ ಆಯು ಆ್ಯಪ್ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: May 29, 2022 | 2:16 PM

ಆನೇಕಲ್: ಕೋವಿಡ್​ನಿಂದಾಗಿ ಶಾಲಾ ಕಾಲೇಜುಗಳ ಮಕ್ಕಳ ಮೇಲೆ ಒತ್ತಡದಲ್ಲಿದ್ದಾರೆ. ವಿದ್ಯಾರ್ಥಿಗಳು ಒತ್ತಡರಹಿತರಾಗಿ ವಿದ್ಯಾಭ್ಯಾಸ ಮಾಡುವ ವಾತಾವರಣ ಇರಬೇಕು. ಈ ಹಿನ್ನೆಲೆಯಲ್ಲಿ ಹೈಸ್ಕೂಲು ಮತ್ತು ಕಾಲೇಜುಗಳಲ್ಲಿ ಯೋಗಾಭ್ಯಾಸ ಪರಿಚಯ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರು ಹೊರವಲಯದ ಜಿಗಣಿಯಲ್ಲಿನ ಎಸ್​ ವ್ಯಾಸ ವಿಶ್ವವಿದ್ಯಾಲಯದ 24ನೇ ಇನ್ಕೋಫೈರಾ ಕಾರ್ಯಕ್ರಮದಲ್ಲಿ ರೋಗ ಮುಕ್ತ ಭಾರತ ಪರಿಕಲ್ಪನೆಯ ಅಂಗವಾಗಿ ಇನ್ಕೋಫೈರಾ ಸಂಸ್ಥೆ ಸಿದ್ದಪಡಿಸಿದ ನೂತನ ಆಯು ಆ್ಯಪ್​ನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಇದನ್ನೂ ಓದಿ: ಆಮಿರ್​ ಖಾನ್​ರನ್ನು ‘ಟೈಟಾನಿಕ್’​ ನಿರ್ದೇಶಕನಿಗೆ ಹೋಲಿಸಿದ ಹಾಲಿವುಡ್​ ದಿಗ್ಗಜ; ಇಲ್ಲಿದೆ ಅಚ್ಚರಿ ವಿಚಾರ

ಮುಂದಿನ ವರ್ಷದಿಂದ ಹೈಸ್ಕೂಲು, ಕಾಲೇಜು ಹಂತದಲ್ಲಿ ಯೋಗಾಭ್ಯಾಸ ತರಗತಿಗಳು ಬರಲಿವೆ. ಈ ಸಂಬಂಧ ಪರಿಣಿತರ ಜತೆ ಚರ್ಚೆ ಮಾಡಿ, ಬಳಿಕ ಯೋಗ‌ ಪಠ್ಯಕ್ರಮ ಸಿದ್ಧಪಡಿಸುತ್ತೇವೆ ಎಂದು ಹೇಳಿದರು. ಎಸ್. ವ್ಯಾಸ ಯೋಗ ಯೂನಿವರ್ಸಿಟಿ ಕುಲಪತಿ ನಾಗೇಂದ್ರ ಗುರೂಜಿ ಭಾಗಿಯಾಗಿದ್ದರು. ಜರ್ನಲ್ ಆಪ್ ಅಪ್ಲೈಡ್ ಕಾಂನ್ಸಿಯಸ್ನೆಸ್ ಸ್ಟಡೀಸ್ ಹಾಗೂ ಎಸ್.ವ್ಯಾಸ ರಿಪೋರ್ಟ್ಸ್ ಎಂಬ ಎರಡು ಪುಸ್ತಕಗಳನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು.

ರಾಜ್ಯಕ್ಕೆ ಮೋದಿಯವರು ಬರೋದೇ ಒಂದು ವಿಶೇಷ

ಜೂನ್ 21ಕ್ಕೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಇದೆ. ಮೈಸೂರಿನಲ್ಲಿ ವಿಶೇಷವಾಗಿ ಯೋಗಾ ದಿನದ ಆಚರಣೆ ಇರಲಿದೆ. ಪ್ರಧಾನಿ ಮೋದಿಯವರು ಭಾಗವಹಿಸುತ್ತಿದ್ದಾರೆ. ರಾಜ್ಯಕ್ಕೆ ಮೋದಿಯವರು ಬರೋದೇ ಒಂದು ವಿಶೇಷ. ಮೋದಿಯವರು ಪಾಲ್ಗೊಳ್ಳುವುದರಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಂತಾಗುತ್ತದೆ ಎಂದು ಹೇಳಿದರು.

ಆಯುಷ್ ಸಚಿವಾಲಯವು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಗರದ ರೇಸ್ ಕೋರ್ಸ್ ಆವರಣದಲ್ಲಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿಜಯನಗರದಲ್ಲಿರುವ ಯೋಗಾ ನರಸಿಂಹಸ್ವಾಮಿ ದೇಗುಲದಲ್ಲಿ ಯೋಗ ದಿನಾಚರಣೆ ಕುರಿತು ಪೋಸ್ಟರ್​ನ್ನು ಈಗಾಗಲೇ​ ಬಿಡುಗಡೆ ಮಾಡಲಾಗಿದೆ. 2017ರಲ್ಲಿ ಗಿನ್ನೆಸ್ ದಾಖಲೆಗೆ ಸೇರ್ಪಡೆಯಾಗಿದ್ದ ಮೈಸೂರು, ಮತ್ತೆ ಗಿನ್ನೆಸ್​​​ ದಾಖಲೆ ಸೇರಲು ಸಾಂಸ್ಕೃತಿಕ ನಗರಿಯಲ್ಲಿ ಸಿದ್ಧತೆ ನಡೆದಿದ್ದು, ಈ ಬಾರಿ 2 ಲಕ್ಷ ಯೋಗಪಟುಗಳನ್ನು ಸೇರಿಸುವ ಆಶಯವಿದೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಮೋದಿ ಮೈಸೂರಿಗೆ ಬರುವ ಬಗ್ಗೆ ಗೊಂದಲ ಇತ್ತು. ಆದರೆ ಪ್ರಧಾನಿ ಕಾರ್ಯಾಲಯ ಇದೀಗ ಮೋದಿ ಬರುವ ಬಗ್ಗೆ ಸ್ಪಷ್ಟತೆ ನೀಡಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ