AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ವಂಚನೆ: ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ

ತೆರಿಗೆ ವಂಚನೆ ಆರೋಪಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಬಿರಿಯಾನಿ ಸೆಂಟರ್​ಗಳ 30 ಯುಪಿಐ ವಿವಿಧ ಖಾತೆಗಳು ಪತ್ತೆಯಾಗಿವೆ. ಮಾಲೀಕರ ಮನೆಯಿಂದ 1.47 ಕೋಟಿ ನಗದು ವಶಕ್ಕೆ ಪಡೆಯಲಾಗಿದೆ.

ತೆರಿಗೆ ವಂಚನೆ: ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ
ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ
TV9 Web
| Edited By: Rakesh Nayak Manchi|

Updated on: Oct 10, 2023 | 5:10 PM

Share

ದೇವನಹಳ್ಳಿ, ಅ.10: ತೆರಿಗೆ ವಂಚನೆ ಆರೋಪಡಿ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಬಿರಿಯಾನಿ ಸೆಂಟರ್​ಗಳ 30 ಯುಪಿಐ ವಿವಿಧ ಖಾತೆಗಳು ಪತ್ತೆಯಾಗಿವೆ. ಮಾಲೀಕರ ಮನೆಯಿಂದ 1.47 ಕೋಟಿ ನಗದು ವಶಕ್ಕೆ ಪಡೆಯಲಾಗಿದೆ.

ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಶಿಖಾ ನೇತೃತ್ವದಲ್ಲಿ 50 ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 30 ಯುಪಿಐ ವಿವಿಧ ಖಾತೆಗಳು ಪತ್ತೆಯಾಗಿದ್ದು, 1.47 ಕೋಟಿ ನಗದು ಜಪ್ತಿ ಮಾಡಲಾಗಿದೆ. ಆ ಮೂಲಕ ಬಿರಿಯಾನಿ ಸೆಂಟರ್​ಗಳಲ್ಲಿ ನಡೆಯುತ್ತಿದ್ದ ದೊಡ್ಡಮಟ್ಟದ ತೆರಿಗೆ ವಂಚನೆ ಬಯಲಾದಂತಾಗಿದೆ.

ಬಿರಿಯಾನಿ ಸೆಂಟರ್​ಗಳಲ್ಲಿ ಭರ್ಜರಿ ವ್ಯಾಪಾರ

ವಾರಾಂತ್ಯದಲ್ಲಿ ಬೆಂಗಳೂರು ಹೊರವಲಯ ಬಿರಿಯಾನಿ ಸೆಂಟರ್​ಗಳಲ್ಲಿ ಭರ್ಜರಿ ವ್ಯಾಪಾರವಾಗುತ್ತದೆ. ಹೊಸಕೋಟೆ ನಗರದಲ್ಲಿ ಬಿರಿಯಾನಿ ಸೆಂಟರ್​ಗಳಿಗೆ ಟೆಕ್ಕಿಗಳು ಹೆಚ್ಚಾಗಿ ಹೋಗುತ್ತಿದ್ದು, ಕೋಟ್ಯಂತರ ರೂಪಾಯಿ ವಹಿವಾಟು ನಡೆಯುತ್ತದೆ.

ಇದನ್ನೂ ಓದಿ: ಬೆಂಗಳೂರಿನ 100 ಕಡೆಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ

ಇಂತಹ ಬಿರಿಯಾನಿ ಸೆಂಟರ್​ಗಳು ತೆರಿಗೆ ವಂಚನೆ ಮಾಡುತ್ತಿರುವ ಮಾಹಿತಿ ತಿಳಿದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಲೀಕರು ವಾಣಿಜ್ಯ ತೆರಿಗೆ ಇಲಾಖೆಯ ಗಮನಕ್ಕೆ ಬಾರದಂತೆ ಯುಪಿಐ ವಿವಿಧ ಅಕೌಂಟ್​ಗಳನ್ನು ಬಳಕೆ ಮಾಡುತ್ತಿದ್ದರು. ದಾಳಿ ವೇಳೆ ಕೆಲ ಬಿರಿಯಾನಿ ಸೆಂಟರ್ ಮಾಲೀಕರ ಮನೆಗಳಲ್ಲಿ ಒಟ್ಟು 1 ಕೋಟಿ 47 ಲಕ್ಷ ರೂ. ಪತ್ತೆಯಾಗಿದೆ. ಸದ್ಯ ವಾಣಿಜ್ಯ ತೆರಿಗೆ ಇಲಾಖೆಯಿಂದ ತನಿಖೆ ಮುಂದುವರಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ