AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ವಂಚನೆ: ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ

ತೆರಿಗೆ ವಂಚನೆ ಆರೋಪಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಬಿರಿಯಾನಿ ಸೆಂಟರ್​ಗಳ 30 ಯುಪಿಐ ವಿವಿಧ ಖಾತೆಗಳು ಪತ್ತೆಯಾಗಿವೆ. ಮಾಲೀಕರ ಮನೆಯಿಂದ 1.47 ಕೋಟಿ ನಗದು ವಶಕ್ಕೆ ಪಡೆಯಲಾಗಿದೆ.

ತೆರಿಗೆ ವಂಚನೆ: ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ
ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ
TV9 Web
| Updated By: Rakesh Nayak Manchi|

Updated on: Oct 10, 2023 | 5:10 PM

Share

ದೇವನಹಳ್ಳಿ, ಅ.10: ತೆರಿಗೆ ವಂಚನೆ ಆರೋಪಡಿ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಬಿರಿಯಾನಿ ಸೆಂಟರ್​ಗಳ 30 ಯುಪಿಐ ವಿವಿಧ ಖಾತೆಗಳು ಪತ್ತೆಯಾಗಿವೆ. ಮಾಲೀಕರ ಮನೆಯಿಂದ 1.47 ಕೋಟಿ ನಗದು ವಶಕ್ಕೆ ಪಡೆಯಲಾಗಿದೆ.

ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಶಿಖಾ ನೇತೃತ್ವದಲ್ಲಿ 50 ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 30 ಯುಪಿಐ ವಿವಿಧ ಖಾತೆಗಳು ಪತ್ತೆಯಾಗಿದ್ದು, 1.47 ಕೋಟಿ ನಗದು ಜಪ್ತಿ ಮಾಡಲಾಗಿದೆ. ಆ ಮೂಲಕ ಬಿರಿಯಾನಿ ಸೆಂಟರ್​ಗಳಲ್ಲಿ ನಡೆಯುತ್ತಿದ್ದ ದೊಡ್ಡಮಟ್ಟದ ತೆರಿಗೆ ವಂಚನೆ ಬಯಲಾದಂತಾಗಿದೆ.

ಬಿರಿಯಾನಿ ಸೆಂಟರ್​ಗಳಲ್ಲಿ ಭರ್ಜರಿ ವ್ಯಾಪಾರ

ವಾರಾಂತ್ಯದಲ್ಲಿ ಬೆಂಗಳೂರು ಹೊರವಲಯ ಬಿರಿಯಾನಿ ಸೆಂಟರ್​ಗಳಲ್ಲಿ ಭರ್ಜರಿ ವ್ಯಾಪಾರವಾಗುತ್ತದೆ. ಹೊಸಕೋಟೆ ನಗರದಲ್ಲಿ ಬಿರಿಯಾನಿ ಸೆಂಟರ್​ಗಳಿಗೆ ಟೆಕ್ಕಿಗಳು ಹೆಚ್ಚಾಗಿ ಹೋಗುತ್ತಿದ್ದು, ಕೋಟ್ಯಂತರ ರೂಪಾಯಿ ವಹಿವಾಟು ನಡೆಯುತ್ತದೆ.

ಇದನ್ನೂ ಓದಿ: ಬೆಂಗಳೂರಿನ 100 ಕಡೆಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ

ಇಂತಹ ಬಿರಿಯಾನಿ ಸೆಂಟರ್​ಗಳು ತೆರಿಗೆ ವಂಚನೆ ಮಾಡುತ್ತಿರುವ ಮಾಹಿತಿ ತಿಳಿದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಲೀಕರು ವಾಣಿಜ್ಯ ತೆರಿಗೆ ಇಲಾಖೆಯ ಗಮನಕ್ಕೆ ಬಾರದಂತೆ ಯುಪಿಐ ವಿವಿಧ ಅಕೌಂಟ್​ಗಳನ್ನು ಬಳಕೆ ಮಾಡುತ್ತಿದ್ದರು. ದಾಳಿ ವೇಳೆ ಕೆಲ ಬಿರಿಯಾನಿ ಸೆಂಟರ್ ಮಾಲೀಕರ ಮನೆಗಳಲ್ಲಿ ಒಟ್ಟು 1 ಕೋಟಿ 47 ಲಕ್ಷ ರೂ. ಪತ್ತೆಯಾಗಿದೆ. ಸದ್ಯ ವಾಣಿಜ್ಯ ತೆರಿಗೆ ಇಲಾಖೆಯಿಂದ ತನಿಖೆ ಮುಂದುವರಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ