AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್ಲೈನ್​ ಗೇಮ್​​: ಬೆಟ್ಟಿಂಗ್ ಹಣ ಹಂಚಿಕೆಯಲ್ಲಿ ಗಲಾಟೆ, ಡ್ರ್ಯಾಗರ್​ನಿಂದ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ

ಆ ಯುವಕರು ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಹೀಗೆ ಓದುವ ಜೊತೆಗೆ ಮೊಬೈಲ್ ಚಟಕ್ಕೆ ಬಿದ್ದು, ಆನ್ಲೈನ್ ಗೇಮ್​ಗಳನ್ನ ಕಲಿತುಕೊಂಡಿದ್ದಾರೆ. ಗೇಮ್ ಆಟವಾಡಿಕೊಂಡು ಆಂದ್ರದ ಹುಡುಗನ ಬಳಿ ಯುವಕ 500 ರೂ ಗೆದ್ದಿದ್ದಾನೆ. ಇದೇ ಗೆದ್ದ ಹಣದ ವಿಚಾರಕ್ಕೆ ಎರಡು ಯುವಕರ ಗುಂಪಿನ ನಡುವೆ ಮಾರಮಾರಿ ನಡೆದು, ಅದರಲ್ಲಿ ಓರ್ವ ಯುವಕನ ಕತ್ತನ್ನ ಡ್ರ್ಯಾಗರ್​ನಿಂದ ಸೀಳಿದ್ದಾರೆ.

ಆನ್ಲೈನ್​ ಗೇಮ್​​: ಬೆಟ್ಟಿಂಗ್ ಹಣ ಹಂಚಿಕೆಯಲ್ಲಿ ಗಲಾಟೆ,  ಡ್ರ್ಯಾಗರ್​ನಿಂದ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ
ಆರೋಪಿ ಮಹೇಶ್​
ಕಿರಣ್ ಹನುಮಂತ್​ ಮಾದಾರ್
|

Updated on: Jun 22, 2023 | 2:59 PM

Share

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura)ನಗರದ ನಿವಾಸಿಯಾದ ಕುಶಾಲ್ ದ್ವೀತಿಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದು, ತನ್ನ ಸ್ನೇಹಿತನಿಗೆ ಹಣ ಕೊಡುವ ಕುರಿತು ಆತನ ಜೊತೆಗೂಡಿ ಹಣ ಕೇಳಲು ಹೋಗಿದ್ದಾನೆ. ಈ ವೇಳೆ ಬೆಟ್ಟಿಂಗ್ ಹಣ ಕೊಡಲಿಲ್ಲವೆಂದು ಯುವಕನ ಮೇಲೆ ಡ್ರ್ಯಾಗರ್​ನಿಂದ ಹಲ್ಲೆ ಮಾಡಿದ ಘಟನೆ ನಡೆದಿದೆ. ಹೌದು ಆನ್ಲೈನ್ ಗೇಮ್​​ನಲ್ಲಿ ಆರೋಪಿ ಮಹೇಶ್ ಮತ್ತು ಆಂಧ್ರದ ಯುವಕ ಗಗನ್ ಎಂಬಾತ ಆನ್ಲೈನ್​ನಲ್ಲಿ ಬೆಟ್ಟಿಂಗ್ ಗೇಮ್ ಆಡಿದ್ದು, ಅದರಲ್ಲಿ ಹಣವನ್ನು ಗೆದ್ದಿದ್ದನಂತೆ. ಆದ್ರೆ, ಗೆದ್ದಿದ್ದ ಹಣವನ್ನ ನೀಡಲು ಹಿಂದೇಟು ಹಾಕಿದ್ದು, ಹಲವು ಭಾರಿ ಇಬ್ಬರು ವಾಗ್ವಾದವನ್ನ ಮಾಡಿಕೊಂಡಿದ್ದಾರೆ. ಆದ್ರೆ, ಎಷ್ಟೆ ಕೇಳಿದರೂ, ಗೆದ್ದ 500 ರೂಪಾಯಿ ನೀಡದ ಕಾರಣ, ಗಗನ್​ ತನ್ನ ಸ್ನೇಹಿತ ಕುಶಾಲ್​ನನ್ನ ಪಾರ್ಕ್​ಗೆ ಕರೆದುಕೊಂಡು ಹೋಗಿ ಮಹೇಶ್​ನ ಬಳಿ ಕೇಳಿದ್ದಾನೆ. ಆದ್ರೆ, ಈ ವೇಳೆ ಹಣ ಕೊಡಲ್ಲ ಎಂದು ಎರಡು ಗುಂಪುಗಳ ನಡುವೆ ಜಗಳವಾಗಿದ್ದು, ನೋಡ ನೋಡುತ್ತಿದ್ದಂತೆ ಆರೋಪಿ ಮಹೇಶ್ ಕುಶಾಲ್ ಮೇಲೆ ಹಲ್ಲೆ ನಡೆಸಿ ಡ್ರ್ಯಾಗರ್​ನಿಂದ ಇರಿದು ಎಸ್ಕೇಪ್ ಆಗಿದ್ದಾನೆ.

ಇನ್ನು ಗಗನ್ ಜೊತೆ ಬಂದಿದ್ದ ಕುಶಾಲ್ ಹಣ ಕೇಳಿದ್ರೆ ಯಾಕೆ ಹೀಗೆ ಹೊಡೆತಿದ್ದಿರಾ ಎಂದು ಮಹೇಶನಿಗೆ ಪ್ರಶ್ನೆ ಮಾಡಿದ್ದನಂತೆ. ಇದಕ್ಕೆ ಮಹೇಶ ಇದಕ್ಕೂ ನಿನಗೂ ಸಂಬಂಧವಿಲ್ಲವೆಂದು ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮಹೇಶ ತನ್ನ ಬಳಿ ಇದ್ದ ಡ್ರ್ಯಾಗರ್​ ತೆಗೆದು ಕುಶಾಲನ ಕುತ್ತಿಗೆಗೆ ಮನಬಂದಂತೆ ಚುಚ್ಚಿದ್ದಾನೆ. ಚಾಕುವಿನಿಂದ ಹಲ್ಲೆಗೊಳಗಾದ ಕುಶಾಲ್ ಸ್ಥಳದಲ್ಲೆ ಕುಸಿದು ಬಿದ್ದಿದ್ದು, ಪುಂಡ ಯುವಕರ ಗ್ಯಾಂಗ್ ಅಲ್ಲಿಂದ ಎಸ್ಕೆಪ್ ಆಗಿತ್ತು. ಮಾರಣಾಂತಿಕವಾಗಿ ಹಲ್ಲೆಗೊಳಗಾದ ಕುಶಾಲ್ ಇದೀಗ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದನ್ನೂ ಓದಿ:ಆನ್ ಲೈನ್ ಬೆಟ್ಟಿಂಗ್​ ಆ್ಯಪ್ ಹಾವಳಿ, ಶಿವಮೊಗ್ಗ ಪೊಲೀಸರಿಂದ ಕಾರ್ಯಾಚರಣೆ; 25 ಲಕ್ಷ ಹಣ ಸೀಜ್, ಕಿಂಗ್ ಪಿನ್ ಅಂದರ್

ಇನ್ನು ಗಲಾಟೆ ನಡೆದ ಪಾರ್ಕ್ ಬಳಿ ಪುಂಡರು ಸಾಯಂಕಾಲ ಆದ್ರೆ, ಸಾಕು ಮೊಬೈಲ್ ಹಿಡಿದುಕೊಂಡು ಗೇಮ್ ಆಡುತ್ತಾ, ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆಯಂತೆ. ಇನ್ನೂ ನಗರದಲ್ಲಿ ದಿನೇ ದಿನೇ ಪುಡಿರೌಡಿಗಳ ಅಟ್ಟಹಾಸ ಹೆಚ್ಚಾಗುತ್ತಿದ್ದರು, ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಮಹೇಶ್​ ಹಾಗೂ ಆತನ ಜೊತೆಯಲ್ಲಿದ್ದ ಮತ್ತೊಬ್ಬನನ್ನ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಅದೇನೆ ಇರಲಿ ಓದಿ ಬುದ್ದಿವಂತರಾಗಬೇಕಿದ್ದ ಯುವಕರು ಆನ್ಲೈನ್ ಗೇಮ್ ಚಟಕ್ಕೆ ಬಿದ್ದು, ಹಣಗಳಿಸಲು ದುಶ್ಚಟಗಳಿಗೆ ಬಲಿಯಾಗುತ್ತಾ ಹವಾ ತೋರಿಸಲು ಹೋಗಿ ಜೀವವನ್ನೆ ತೆಗೆಯುವ ಹಂತಕ್ಕೆ ಹೋಗುತ್ತಿರುವುದಂತು ನಿಜಕ್ಕೂ ವಿಪರ್ಯಾಸ.

ವರದಿ: ನವೀನ್ ಟಿವಿ9 ದೇವನಹಳ್ಳಿ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್