AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರರ ನಡುವೆ ಆಸ್ತಿ ವಿಚಾರಕ್ಕೆ ಕಲಹ; ಜೆಸಿಬಿ ತಂದು ಹಳೆ ಮನೆ ಕೆಡವಿದ ಆರೋಪ

ದೊಡ್ಡಬಳ್ಳಾಪುರ(Doddaballapura) ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಅಣ್ಣ-ತಮ್ಮನ ನಡುವೆ ಆಸ್ತಿ ವಿಚಾರಕ್ಕೆ ಕಲಹವಾಗಿ ಕೋಪಗೊಂಡ ಸಹೋದರ, ಜೆಸಿಬಿ ತಂದು ಹಳೆಯ ಮನೆಯನ್ನು ಕೆಡವಿದ ಆರೋಪ ಕೇಳಿಬಂದಿದೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಹೋದರರ ನಡುವೆ ಆಸ್ತಿ ವಿಚಾರಕ್ಕೆ ಕಲಹ; ಜೆಸಿಬಿ ತಂದು ಹಳೆ ಮನೆ ಕೆಡವಿದ ಆರೋಪ
ದೊಡ್ಡಬಳ್ಳಾಪುರ
ಬಿ ಮೂರ್ತಿ, ನೆಲಮಂಗಲ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 30, 2024 | 3:07 PM

Share

ಬೆಂಗಳೂರು, ಮಾ.30:ಅಣ್ಣ-ತಮ್ಮನ ನಡುವೆ ಆಸ್ತಿ ವಿಚಾರಕ್ಕೆ ಕಲಹವಾಗಿ ಕೋಪಗೊಂಡ ಸಹೋದರ, ಜೆಸಿಬಿ ತಂದು ಹಳೆಯ ಮನೆಯನ್ನು ಕೆಡವಿದ ಆರೋಪ ದೊಡ್ಡಬಳ್ಳಾಪುರ(Doddaballapura) ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಕೇಳಿಬಂದಿದೆ. ಸಂಪತ್ ಕುಮಾರ್ ಮತ್ತು ಶ್ರೀನಿವಾಸ್ ಎಂಬ ಸಹೋದರರ ನಡುವೆ ಆಸ್ತಿ‌ ಹಾಗೂ ಮನೆಯ ಕುರಿತು ಕಲಹ ನಡೆಯುತ್ತಿತ್ತು. ಇದೇ ವಿಚಾರವಾಗಿ ಇಬ್ಬರು ಸಹೋದರರು ನ್ಯಾಯಾಲಯದ ಮೊರೆ‌‌ ಸಹ ಹೋಗಿದ್ದರು.

ಪೊಲೀಸ್​​​​​​ ಠಾಣೆಗೆ ದೂರು ನೀಡಿದ ಸಹೋದರ ಶ್ರೀನಿವಾಸ್

ಈ ಕುರಿತು ಕೋರ್ಟ್​ನಲ್ಲಿ ವ್ಯಾಜ್ಯ ನಡೆಯುತ್ತಿದ್ದರೂ ಕೂಡ ಸಹೋದರ ಸಂಪತ್ ಕುಮಾರ್ ಎಂಬುವವರು ಜೆಸಿಬಿ ತಂದು ಹಳೆ‌ ಮನೆ ದ್ವಂಸ ಮಾಡಿದ್ದಾರೆ ಎಂದು ಸಹೋದರ ಶ್ರೀನಿವಾಸ್ ಆರೋಪಿಸಿದ್ದಾರೆ. ಮನೆ ದ್ವಂಸದ ವೇಳೆ ಮನೆಯಲ್ಲಿದ್ದ ಪೀರೋಪಕರಣಗಳು ಹಾನಿಗೊಳಗಾಗಿದೆ. ಇದರಿಂದ ಶ್ರೀನಿವಾಸ್, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:ಆನೇಕಲ್: ಕೌಟುಂಬಿಕ ಕಲಹ; ಪತ್ನಿ ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನ

ಜಮೀನು ಅಳತೆ ಸಂದರ್ಭದಲ್ಲಿ ಅಕ್ಕ-ಪಕ್ಕದ ಜಮೀನು ಮಾಲೀಕರಿಂದ ಗಲಾಟೆ

ಬೆಂಗಳೂರು ಗ್ರಾಮಾಂತರ: ಜಮೀನು ಅಳತೆ ಸಂದರ್ಭದಲ್ಲಿ ಅಕ್ಕ-ಪಕ್ಕದ ಜಮೀನು ಮಾಲೀಕರಿಂದ ಗಲಾಟೆ ಮಾಡಿ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಿಮ್ಮಸಂದ್ರ ಗ್ರಾಮದ ಸರ್ವೆ ನಂಬರ್‌ 23/8ರ ಜಮೀನು ಬಳಿ ನಡೆದಿದೆ. ರಘುನಾಥ್ ಎಂಬುವವರಿಗೆ ಪಕ್ಕದ ಜಮೀನು ಮಾಲೀಕರು,ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ನವೀನ್ ಕುಮಾರ್, ಆಶಾ ಸೇರಿದಂತೆ ಮೂವರು ಹಲ್ಲೆ ನಡೆಸಿರುವ ಅರೋಪ ಕೇಳಿಬಂದಿದೆ. ಗಾಯಾಳು ರಘುನಾಥ್ ಅವರಿಗೆ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?