AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರರ ನಡುವೆ ಆಸ್ತಿ ವಿಚಾರಕ್ಕೆ ಕಲಹ; ಜೆಸಿಬಿ ತಂದು ಹಳೆ ಮನೆ ಕೆಡವಿದ ಆರೋಪ

ದೊಡ್ಡಬಳ್ಳಾಪುರ(Doddaballapura) ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಅಣ್ಣ-ತಮ್ಮನ ನಡುವೆ ಆಸ್ತಿ ವಿಚಾರಕ್ಕೆ ಕಲಹವಾಗಿ ಕೋಪಗೊಂಡ ಸಹೋದರ, ಜೆಸಿಬಿ ತಂದು ಹಳೆಯ ಮನೆಯನ್ನು ಕೆಡವಿದ ಆರೋಪ ಕೇಳಿಬಂದಿದೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಹೋದರರ ನಡುವೆ ಆಸ್ತಿ ವಿಚಾರಕ್ಕೆ ಕಲಹ; ಜೆಸಿಬಿ ತಂದು ಹಳೆ ಮನೆ ಕೆಡವಿದ ಆರೋಪ
ದೊಡ್ಡಬಳ್ಳಾಪುರ
ಬಿ ಮೂರ್ತಿ, ನೆಲಮಂಗಲ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 30, 2024 | 3:07 PM

Share

ಬೆಂಗಳೂರು, ಮಾ.30:ಅಣ್ಣ-ತಮ್ಮನ ನಡುವೆ ಆಸ್ತಿ ವಿಚಾರಕ್ಕೆ ಕಲಹವಾಗಿ ಕೋಪಗೊಂಡ ಸಹೋದರ, ಜೆಸಿಬಿ ತಂದು ಹಳೆಯ ಮನೆಯನ್ನು ಕೆಡವಿದ ಆರೋಪ ದೊಡ್ಡಬಳ್ಳಾಪುರ(Doddaballapura) ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಕೇಳಿಬಂದಿದೆ. ಸಂಪತ್ ಕುಮಾರ್ ಮತ್ತು ಶ್ರೀನಿವಾಸ್ ಎಂಬ ಸಹೋದರರ ನಡುವೆ ಆಸ್ತಿ‌ ಹಾಗೂ ಮನೆಯ ಕುರಿತು ಕಲಹ ನಡೆಯುತ್ತಿತ್ತು. ಇದೇ ವಿಚಾರವಾಗಿ ಇಬ್ಬರು ಸಹೋದರರು ನ್ಯಾಯಾಲಯದ ಮೊರೆ‌‌ ಸಹ ಹೋಗಿದ್ದರು.

ಪೊಲೀಸ್​​​​​​ ಠಾಣೆಗೆ ದೂರು ನೀಡಿದ ಸಹೋದರ ಶ್ರೀನಿವಾಸ್

ಈ ಕುರಿತು ಕೋರ್ಟ್​ನಲ್ಲಿ ವ್ಯಾಜ್ಯ ನಡೆಯುತ್ತಿದ್ದರೂ ಕೂಡ ಸಹೋದರ ಸಂಪತ್ ಕುಮಾರ್ ಎಂಬುವವರು ಜೆಸಿಬಿ ತಂದು ಹಳೆ‌ ಮನೆ ದ್ವಂಸ ಮಾಡಿದ್ದಾರೆ ಎಂದು ಸಹೋದರ ಶ್ರೀನಿವಾಸ್ ಆರೋಪಿಸಿದ್ದಾರೆ. ಮನೆ ದ್ವಂಸದ ವೇಳೆ ಮನೆಯಲ್ಲಿದ್ದ ಪೀರೋಪಕರಣಗಳು ಹಾನಿಗೊಳಗಾಗಿದೆ. ಇದರಿಂದ ಶ್ರೀನಿವಾಸ್, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:ಆನೇಕಲ್: ಕೌಟುಂಬಿಕ ಕಲಹ; ಪತ್ನಿ ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನ

ಜಮೀನು ಅಳತೆ ಸಂದರ್ಭದಲ್ಲಿ ಅಕ್ಕ-ಪಕ್ಕದ ಜಮೀನು ಮಾಲೀಕರಿಂದ ಗಲಾಟೆ

ಬೆಂಗಳೂರು ಗ್ರಾಮಾಂತರ: ಜಮೀನು ಅಳತೆ ಸಂದರ್ಭದಲ್ಲಿ ಅಕ್ಕ-ಪಕ್ಕದ ಜಮೀನು ಮಾಲೀಕರಿಂದ ಗಲಾಟೆ ಮಾಡಿ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಿಮ್ಮಸಂದ್ರ ಗ್ರಾಮದ ಸರ್ವೆ ನಂಬರ್‌ 23/8ರ ಜಮೀನು ಬಳಿ ನಡೆದಿದೆ. ರಘುನಾಥ್ ಎಂಬುವವರಿಗೆ ಪಕ್ಕದ ಜಮೀನು ಮಾಲೀಕರು,ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ನವೀನ್ ಕುಮಾರ್, ಆಶಾ ಸೇರಿದಂತೆ ಮೂವರು ಹಲ್ಲೆ ನಡೆಸಿರುವ ಅರೋಪ ಕೇಳಿಬಂದಿದೆ. ಗಾಯಾಳು ರಘುನಾಥ್ ಅವರಿಗೆ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More