AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರಪ್ಪನಾಣೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲ: ಸಿದ್ದರಾಮಯ್ಯ,ಡಿ.ಕೆ ಶಿವಕುಮಾರಗೆ ಟಾಂಗ್ ಕೊಟ್ಟ ಡಾ.ಕೆ.ಸುಧಾಕರ್

ಯಾರು ಸಿಎಂ ಆಗ್ಬಾರ್ದು ಅಂತಾ ಹೇಳಿಲ್ಲ. ಸಾಯೋತನಕ ನೀವೆ ಮುಖ್ಯಮಂತ್ರಿ ಆಗಿರೀ. ಜನ ನಿಮ್ಮನ್ನು ಆಯ್ಕೆ ಮಾಡಬೇಕಲ್ವಾ ಎಂದು ಡಿಕೆ ಶಿವಕುಮಾರ ಮತ್ತು ಸಿದ್ದರಾಮಯ್ಯಗೆ ಮಾಜಿ ಸಚಿವ ಈಶ್ವರಪ್ಪ ತಿರುಗೇಟು ನೀಡಿದರು.

ಅವರಪ್ಪನಾಣೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲ: ಸಿದ್ದರಾಮಯ್ಯ,ಡಿ.ಕೆ ಶಿವಕುಮಾರಗೆ ಟಾಂಗ್ ಕೊಟ್ಟ ಡಾ.ಕೆ.ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 20, 2022 | 12:53 PM

Share

ದೇವನಹಳ್ಳಿ: ಇನ್ನೂ ಮಗು ಹುಟ್ಟಿಲ್ಲ, ಈಗಲೇ ಅಧಿಕಾರಕ್ಕಾಗಿ ಕಿತ್ತಾಟ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ (Congress) ಪಕ್ಷದಲ್ಲಿ ಸಿಎಂ ಅಭ್ಯರ್ಥಿಗಾಗಿ ಕಿತ್ತಾಟ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವ್ಯಂಗ್ಯವಾಡಿದರು. ಕಾಂಗ್ರೆಸ್​​ನವರಿಗೆ ಯಾವ ಶಾಸ್ತ್ರದವರು ಹೇಳಿದ್ದಾರೋ ಗೊತ್ತಿಲ್ಲ. ಅವರಪ್ಪನಾಣೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರಗೆ ಸಚಿವ ಡಾ.ಕೆ.ಸುಧಾಕರ್​ಟಾಂಗ್ ಕೊಟ್ಟರು.

ಇದನ್ನೂ ಓದಿ: ದೇವೇಗೌಡರು, ಕುಮಾರಸ್ವಾಮಿಗೆ ಅವಕಾಶ ಮಾಡಿಕೊಟ್ಟಿದ್ದೀರಿ, ನನಗೂ ಅವಕಾಶ ಮಾಡಿಕೊಡಿ; ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್

ಸಾಯುವತನಕ ನೀವೇ ಸಿಎಂ ಆಗಿರಿ, ಆದರೆ ಜನ ನಿಮ್ಮನ್ನು ಆಯ್ಕೆ ಮಾಡಬೇಕು ಅಲ್ವಾ: ಈಶ್ವರಪ್ಪ

ಇದೇ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಯಾರು ಸಿಎಂ ಆಗ್ಬಾರ್ದು ಅಂತಾ ಹೇಳಿಲ್ಲ. ಸಾಯೋತನಕ ನೀವೆ ಮುಖ್ಯಮಂತ್ರಿ ಆಗಿರೀ. ಜನ ನಿಮ್ಮನ್ನು ಆಯ್ಕೆ ಮಾಡಬೇಕಲ್ವಾ ಎಂದು ಡಿಕೆ ಶಿವಕುಮಾರ ಮತ್ತು ಸಿದ್ದರಾಮಯ್ಯಗೆ ಮಾಜಿ ಸಚಿವ ಈಶ್ವರಪ್ಪ ತಿರುಗೇಟು ನೀಡಿದರು. ನಿಶ್ಚಿತಾರ್ಥ ಆಗಿಲ್ಲ. ಮದುವೆ ಆಗಿಲ್ಲ. ಮಗು ಆಗಿಲ್ಲ, ಆದರೆ, ಇಬ್ಬರೂ ನಾನೇ ಅಪ್ಪ, ನಾನೇ ಅಪ್ಪ ಎಂದು ಹೇಳುತ್ತಿದ್ದಾರೆ. ಫಸ್ಟ್ ಜನ ನಿಮ್ಮನ್ನು ಗುರುತಿಸಿ, ಆಯ್ಕೆ ಮಾಡಲಿ. ನಿಮ್ಮ ಪಾರ್ಟಿ ಅಧಿಕಾರಕ್ಕೆ ತಂದಾಗ ಯಾರು ಮುಖ್ಯಮಂತ್ರಿ ನಂತರ ನೋಡಿ. ಎಲ್ಲಾ ಚುನಾವಣೆ ಸೋತಿದ್ದೀರಿ, ಸರ್ಕಾರ ಕಳೆದುಕೊಂಡಿದ್ದೀರಿ. ಆದರೂ, ನೀವೀಬ್ಬರೂ ಕನಸು ಕಾಣುತ್ತಿದ್ದೀರಿ.

ಮೊದಲು ನೀವು ಸ್ಫರ್ಧಿಸುವ ಕ್ಷೇತ್ರ ಯಾವುದು, ಕ್ಷೇತ್ರ ತೀರ್ಮಾನ ಮಾಡಿದ್ರೂ, ಅಲ್ಲಿನ ಜನ ಒಪ್ಪುತ್ತಾರಾ ಗೇಲ್ತಿರಾ ಸೋಲ್ತಿರಾ ಅದನ್ನ ಯೋಚಿಸಿ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದೇ ನಾನೇ ಸಿಎಂ ಎನ್ನುತ್ತಿದ್ದೀರಿ ಎಂದು ಹೇಳಿದರು. ಒಕ್ಕಲಿಗರೆಲ್ಲಾ ನನ್ ಜೊತೆ ನಿಂತುಕೊಳ್ಳಿ ಎಂದು ಡಿಕೆ ಶಿವಕುಮಾರ ಹೇಳುತ್ತಾರೆ. ಜಾತಿವಾದಿ ಪಕ್ಷ, ಜಾತಿ ಮೇಲೆ ಸಿಎಂ ಆಗೋಕೆ ಕೇಳ್ತಾರಲ್ಲಾ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಬಿಡಿ ಅವರು ಜಾತಿವಾದಿನೇ. ಎಷ್ಟು ಬೈದ್ರೂ ಅಷ್ಟೇ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಕಾಂಗ್ರೆಸ್​​ನವರಿಗೆ ಸೋನಿಯಾ ಚಿಂತೆ, ಬಿಜೆಪಿಯವರಿಗೆ ಮೋದಿ ಚಿಂತೆ: ಇಬ್ರಾಹಿಂ 

ಕಾಂಗ್ರೆಸ್​​ನವರಿಗೆ ಸೋನಿಯಾ ಚಿಂತೆಯಾದರೇ, ಬಿಜೆಪಿಯವರಿಗೆ ಮೋದಿ ಚಿಂತೆ. ಆದರೆ ಜೆಡಿಎಸ್​​ಗೆ ರೈತರು ಮತ್ತು ಕನ್ನಡ ನಾಡಿನ ಚಿಂತೆ ಎಂದು ರಾಮನಗರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದರು. ಮುಂದಿನ ಉತ್ಸವಕ್ಕೆ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿ ಬರುತ್ತಾರೆ. ಸಾಬರು ಹೇಳುವ ಮಾತು ಎಂದೂ ಸುಳ್ಳು ಆಗುವುದಿಲ್ಲ. ಕಾಂಗ್ರೆಸ್​​ ಪಕ್ಷದವರು ವ್ಯಕ್ತಿಯ ಉತ್ಸವ ಮಾಡುತ್ತಿದ್ದಾರೆ. ಆದರೆ ಹೆಚ್​.ಡಿ.ಕುಮಾರಸ್ವಾಮಿಯವರು ಜಲೋತ್ಸವ ಮಾಡಿದರು ಎಂದು ಹೇಳಿದರು.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ