AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸರಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಅಧಿಕಾರಕ್ಕಾಗಿ ನನ್ನ ಕೊಲೆಗೆ ಸಂಚು, ರಿವಾಲ್ವಾರ್ ಕೇಳಿದ್ದರೂ ಅನುಮತಿ‌ ನೀಡಿಲ್ಲ – ವಿದ್ಯಾಧರನಾಥ ಶ್ರೀ

ಹೆಸರಘಟ್ಟದ ಶಾಖಾ ಮಠದ ಅಧಿಕಾರಕ್ಕಾಗಿ ನನ್ನ ಕೊಲೆಗೆ ಸಂಚು ನಡೆದಿದೆ ಎಂದಿದ್ದಾರೆ ವಿದ್ಯಾಧರನಾಥ ಶ್ರೀ. ಈ ವಿಚಾರ ಆದಿಚುಂಚನಗಿರಿಯ ನಿರ್ಮಲಾನಂದನಾಥ ಶ್ರೀ, ಹೆಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ಮುಖಂಡರಿಗೆ ತಿಳಿದಿದೆ. ಆದರೆ ಒತ್ತಡದಿಂದಾಗಿ ಶ್ರೀಗಳು ಕೂಡ ಸುಮ್ಮನಾಗಿದ್ದಾರಂತೆ.

ಹೆಸರಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಅಧಿಕಾರಕ್ಕಾಗಿ ನನ್ನ ಕೊಲೆಗೆ ಸಂಚು, ರಿವಾಲ್ವಾರ್ ಕೇಳಿದ್ದರೂ ಅನುಮತಿ‌ ನೀಡಿಲ್ಲ - ವಿದ್ಯಾಧರನಾಥ ಶ್ರೀ
ಹೆಸರಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಅಧಿಕಾರಕ್ಕಾಗಿ ನನ್ನ ಕೊಲೆಗೆ ಸಂಚು
ಬಿ ಮೂರ್ತಿ, ನೆಲಮಂಗಲ
| Edited By: |

Updated on: Jan 03, 2024 | 11:21 AM

Share

ಅದು ರಾಜ್ಯದ ಪ್ರತಿಷ್ಠಿತ ಮಠವೊಂದರ ಶಾಖಾ ಮಠ..‌ ಆ ಮಠದ ಅಧಿಕಾರಕ್ಕಾಗಿ ಎರಡು ದಶಕಗಳಿಂದ ಕಾಳಗ ನಡೆಯತ್ತಿದೆ.. ನಾ ಕೊಡೆ ನೀ ಬಿಡೆ ಎಂಬ ಹೋರಾಟದಲ್ಲಿ ಆರೋಪ ಪ್ರತ್ಯಾರೋಗಳ ಕಾಳಗ ಜೋರಾಗಿದೆ.. ಅಷ್ಟಕ್ಕೂ ಆ ಮಠ ಯಾವುದು ಅನ್ನೋದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ. ರಾಜ್ಯದ ಪ್ರತಿಷ್ಠಿತ ಮಠಗಳಲ್ಲಿ ಪ್ರಮುಖವಾದದ್ದು ಆದಿಚುಂಚನಗಿರಿ ಮಠ. ಈ ಮಠದ ಶಾಖಾ ಮಠಗಳಿಗೂ ಅಷ್ಟೇ ಗೌರವ ಪೂಜನೀಯ ಸ್ಥಾನವಿದೆ. ಆದರೆ ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದ ಆದಿಚುಂಚನಗಿರಿ ಶಾಖಾ ಮಠದ (Adichunchanagiri branch Math at Hesaraghatta) ಸ್ವಾಮೀಜಿ ವಿದ್ಯಾಧರ ನಾಥ ಶ್ರೀಗಳು ಇದೀಗ ಗಂಭೀರವಾದ ಆರೋಪ (Conspiracy) ಮಾಡ್ತಿದ್ದಾರೆ. ಮಠದ ಪಾರುಪತ್ಯಕ್ಕಾಗಿ ವಿದ್ಯಾಧರನಾಥ ಶ್ರೀಗಳ (Vidyadhara Nath Shri) ಕೊಲೆಗೆ ಸಂಚು ರೂಪಿಸಿದ್ದಾರಂತೆ. ಅದನ್ನು ಶ್ರೀಗಳೇ ಹೇಳುತ್ತಿದ್ದಾರೆ.

ಅಂದಹಾಗೆ ವಿದ್ಯಾಧರ ಶ್ರೀಗಳನ್ನು ಸಾಯಿಸಲು ಹೊಂಚು ಹಾಕಲಾಗುತ್ತಿದೆಯಂತೆ. ಕುಂಬಳಗೂಡು ಪ್ರಕಾಶನಾಥ ಸ್ವಾಮೀಜಿ ಹಾಗೂ ಶಿವಮೊಗ್ಗ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿ‌ ಮೇಲೆ ನೇರವಾಗಿ ಆರೋಪ ಮಾಡಲಾಗುತ್ತಿದೆ. ನಮ್ಮ ಅವರ ಮಧ್ಯೆ ಏನೂ ದ್ವೇಷವಿಲ್ಲ. ಆದರೆ ಅಧಿಕಾರಕ್ಕಾಗಿ ಹೀಗೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿಡಿಯೋ ಸಹ ರಿಲೀಸ್ ಮಾಡಿದ್ದಾರೆ.

ಇನ್ನು ಈ ವಿಚಾರ ನಿರ್ಮಲಾನಂದನಾಥ ಶ್ರೀಗಳಿಗೆ (nirmalanandanatha swamiji) ಹಾಗೂ ಹೆಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್, ಆರ್.ಅಶೋಕ್ ಸೇರಿದಂತೆ ಹಲವು ಮುಖಂಡರಿಗೆ ತಿಳಿದಿದೆ. ಆದರೆ ಒತ್ತಡದಿಂದಾಗಿ ಶ್ರೀಗಳು ಕೂಡ ಸುಮ್ಮನಾಗಿದ್ದಾರಂತೆ. ನನಗೆ ಜೀವಭಯವಿದ್ದು ಊಟದಲ್ಲಿ ಅಥವಾ ಕಾಫಿ ಟೀ ಯಲ್ಲಿ ಕೆಲವನ್ನು ಮಿಕ್ಸ್ ಮಾಡುವ ಎಕ್ಸ್ ಪರ್ಟ್ ಗಳಿದ್ದಾರೆ.

Also Read: ಉಪನ್ಯಾಸಕ ಕಿರುಕುಳ ಆರೋಪ: ವಿಡಿಯೋ ಮಾಡಿಟ್ಟು ವಿದ್ಯಾರ್ಥಿ ಆತ್ಮಹತ್ಯೆ, ಸಮಸ್ಯೆ ಆಲಿಸುವಂತೆ ಚುಂಚಶ್ರೀಗೆ ಮನವಿ

ಹೆಸರುಘಟ್ಟದ ಸಿಬ್ಬಂದಿಗೂ ಈ ವಿಚಾರ ತಿಳಿದಿದೆ ಆದರೆ ಯಾರು ಬಾಯ್ಬಿಡುವುದಿಲ್ಲ. ಈ ಹಿಂದೆ ಗೃಹ ಸಚಿವರಾಗಿದ್ದ ಆರಗ ಜ್ಞಾನೇಂದ್ರ ಮತ್ತು ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೂ ಈ ವಿಚಾರವನ್ನು ತರಲಾಗಿತ್ತು ಎನ್ನಲಾಗಿದೆ. ಇನ್ನು ರಿವಾಲ್ವಾರ್ ಕೇಳಿದ್ದರೂ ಅನುಮತಿ‌ ನೀಡದೇ ಅವಾಯ್ಡ್ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸಹ ಶ್ರೀಗಳು ಮಾಡುತ್ತಿದ್ದಾರೆ.

ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಹಲವಾರು ಪ್ರಕರಣಗಳು ದಾಖಲಾಗಿವೆ. ಅದೇನೇ ಆದರೂ ಶಾಖಾ ಮಠಗಳ ಸ್ವಾಮೀಜಿಗಳು ಹಾದಿರಂಪ ಬೀದಿರಂಪ ಮಾಡುತ್ತಿರೋದು ಮಠದ ಘನತೆಗೆ ಮಾರಕವಾಗುತ್ತಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!