AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ಸಿಂಗ್ ವಿದ್ಯಾರ್ಥಿಗಳ ಮೇಲೆ ಕೊರೊನಾ ಕಣ್ಣು; ಬೆಂಗಳೂರಿನ ಎರಡು ವಿದ್ಯಾ ಸಂಸ್ಥೆಗಳಲ್ಲಿ ಹೆಚ್ಚಾದ ಸೋಂಕಿತರು, ಅಧಿಕಾರಿಗಳಿಂದ ಖಡಕ್ ಸೂಚನೆ

ಆನೇಕಲ್ ಬಳಿಯ ಮರಸೂರಿನ ಸ್ಫೂರ್ತಿ ನರ್ಸಿಂಗ್ ಕಾಲೇಜಿನಲ್ಲಿ 17 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ದೊಮ್ಮಸಂದ್ರದ ಟಿಐಎಸ್‌ಬಿಯಲ್ಲಿ 34 ಪ್ರಕರಣ ಪತ್ತೆಯಾಗಿದೆ. ನೂರಾರು ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಬಾಕಿ ಇದೆ.

ನರ್ಸಿಂಗ್ ವಿದ್ಯಾರ್ಥಿಗಳ ಮೇಲೆ ಕೊರೊನಾ ಕಣ್ಣು; ಬೆಂಗಳೂರಿನ ಎರಡು ವಿದ್ಯಾ ಸಂಸ್ಥೆಗಳಲ್ಲಿ ಹೆಚ್ಚಾದ ಸೋಂಕಿತರು, ಅಧಿಕಾರಿಗಳಿಂದ ಖಡಕ್ ಸೂಚನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 28, 2021 | 7:15 AM

Share

ಬೆಂಗಳೂರು: ಅಬ್ಬರಿಸಿ ಕೊಂಚ ಸುಮ್ಮನಾಗಿದ್ದ ಮಾಹಾಮಾರಿ ಕೊರೊನಾ ಈಗ ಮತ್ತೆ ಕಾಣಿಸಿಕೊಳ್ಳುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಅದರಲ್ಲೂ ಆನೇಕಲ್ ಸುತ್ತಮುತ್ತ ಕೊರೊನಾ ಹೆಚ್ಚಾಗುತ್ತಿದ್ದು ಅಧಿಕಾರಿಗಳಿಗೆ ಆತಂಕ ಹೆಚ್ಚಾಗಿದೆ. ಆನೇಕಲ್ ಬಳಿಯ ಮರಸೂರಿನ ನರ್ಸಿಂಗ್ ಕಾಲೇಜು ಮತ್ತು ದೊಮ್ಮಸಂದ್ರದ ಟಿಐಎಸ್‌ಬಿಯಲ್ಲಿ ಪತ್ತೆಯಾದ ಕೇಸ್ಗಳು ಅಧಿಕಾರಿಗಳಿಗೆ ತಲೆನೋವು ತಂದಿದೆ.

ಆನೇಕಲ್ ಬಳಿಯ ಮರಸೂರಿನ ಸ್ಫೂರ್ತಿ ನರ್ಸಿಂಗ್ ಕಾಲೇಜಿನಲ್ಲಿ 17 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ದೊಮ್ಮಸಂದ್ರದ ಟಿಐಎಸ್‌ಬಿಯಲ್ಲಿ 34 ಪ್ರಕರಣ ಪತ್ತೆಯಾಗಿದೆ. ನೂರಾರು ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಬಾಕಿ ಇದೆ. ಆನೇಕಲ್ ತಾಲೂಕು ಸೂಕ್ಷ್ಮವಲಯ ಎಂದು ಪರಿಗಣಸಲಾಗಿದ್ದು ಕಟ್ಟುನಿಟ್ಟಾಗಿ ಕೊವಿಡ್ ನಿಯಮ ಪಾಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ನಿನ್ನೆ ರಜೆ ಇದ್ರೂ ಅಧಿಕಾರಿಗಳು ಶಾಲೆ ಕಾಲೇಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಈ ಎರಡು ವಿದ್ಯಾ ಸಂಸ್ಥೆಗಳಲ್ಲಿ ಕೊರೊನಾ ಹೆಚ್ಚಾದ ಕಾರಣ ಆರೋಗ್ಯ ಇಲಾಖೆ ಎರಡು ವಿದ್ಯಾ ಸಂಸ್ಥೆಗಳಿಗೆ ಖಡಕ್ ಸೂಚನೆ ಜಾರಿ‌ಮಾಡಿದೆ. ಕೋವಿಡ್ 19 ಮಾರ್ಗಸೂಚಿಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ. -ಶಾಲೆಯಲ್ಲಿ ಕಡ್ಡಾಯವಾಗಿ ನೋಡಲ್ ಅಧಿಕಾರಿ‌ ನೇಮಕಕ್ಕೆ ಸೂಚನೆ -ನೋಡಲ್ ಅಧಿಕಾರಿಯಿಂದ ಕಾಲಕಾಲಕ್ಕೆ ಪರಿಶೀಲನೆ -ದಿನದ 24 ಗಂಟೆ 7 ದಿನಗಳು ಮೆಡಿಕಲ್ ಆಫೀಸರ್ ಹಾಗೂ ಸ್ಟಾಫ್ ನರ್ಸ್ ನಿಯೋಜನೆ ಮಾಡಲು ಸೂಚನೆ -ಆಕ್ಸಿಮೀಟರ್, ಥರ್ಮಾಮೀಟರ್ ಕಾಲಕಾಲಕ್ಕೆ ಬಳಸಲು ಸಲಹೆ -ಸಮೀಪದ ಆರೋಗ್ಯ ಕೇಂದ್ರದ ನಿರಂತರ ಸಂಪರ್ಕದಲ್ಲಿರಲು ಸೂಚನೆ, ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲು ಸಲಹೆ -ಶಾಲೆಯಲ್ಲಿ ಪತ್ತೆಯಾದ ಸೋಂಕಿತರ ಸ್ಯಾಂಪಲ್ ಗಳು ಜಿನೋಮಿಕ್ ಸೀಕ್ವೆನ್ಸ್ ಗೆ ಕಳುಹಿಸಲು ಸೂಚನೆ

ಇದನ್ನೂ ಓದಿ: ಮತ್ತೊಂದು ಆಟ ಕಟ್ಟಿದ ಕೊರೊನಾ: ಆನೇಕಲ್​ ಶಾಲೆಯಲ್ಲೇ ವಿದ್ಯಾರ್ಥಿಗಳಿಗೆ ಕ್ವಾರಂಟೈನ್, ಧಾರವಾಡ ಕಾಲೇಜಿನಲ್ಲಿ ಉಲ್ಬಣ, ಮದುವೆಗೆ ಕಂಟಕ

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ