AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕ್ವಾರಂಟೈನ್ ಕಾಟ.. ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಎದುರಾಯ್ತು ಸಿಬ್ಬಂದಿ ಕೊರತೆ!

ಕೋರೊನಾ ವೈರಸ್ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಲೆ ಇದೆ, ಇದೀಗ ಕೊರೋನಾ ವಾರಿಯರ್ಸ್‌ ಪೊಲೀಸರಿಗೂ ಸಹ ಕೊರೋನಾ ಸೋಂಕು ಹರಡುತ್ತಿರುವ ವಿಚಾರ ಬೆಳಕಿಗೆ ಬರುತ್ತಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ಈಗಾಗಲೇ ಸುಮಾರು 10 ಠಾಣೆಗಳು ಕ್ವಾರಂಟೈನ್ ಆಗಿವೆ. ಕೊರೋನ ಸಮಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಹೋಯ್ಸಳ ಚಾಲಕ ಕಾನ್‌ಸ್ಟಬಲ್ ಒಬ್ಬರಿಗೆ ಸೋಂಕು ತಗುಲಿದ್ದು ಸೋಲದೇವನಹಳ್ಳಿ ಪೋಲಿಸರಿಗೆ ತಲೆಬಿಸಿಯಾಗಿದೆ. ಬೆಂಗಳೂರು ಉತ್ತರ ವಿಭಾಗದ ಸೋಲದೇವನಹಳ್ಳಿ ಠಾಣೆಯಲ್ಲಿ 70 ಸಿಬ್ಬಂದಿಗಳಿದ್ದು ಸೋಂಕಿತನ ಸಂಪರ್ಕದಲ್ಲಿದ್ದು 14 […]

ಕೊರೊನಾ ಕ್ವಾರಂಟೈನ್ ಕಾಟ.. ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಎದುರಾಯ್ತು ಸಿಬ್ಬಂದಿ ಕೊರತೆ!
ಸಾಧು ಶ್ರೀನಾಥ್​
| Edited By: |

Updated on:Jun 11, 2020 | 4:14 PM

Share

ಕೋರೊನಾ ವೈರಸ್ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಲೆ ಇದೆ, ಇದೀಗ ಕೊರೋನಾ ವಾರಿಯರ್ಸ್‌ ಪೊಲೀಸರಿಗೂ ಸಹ ಕೊರೋನಾ ಸೋಂಕು ಹರಡುತ್ತಿರುವ ವಿಚಾರ ಬೆಳಕಿಗೆ ಬರುತ್ತಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ಈಗಾಗಲೇ ಸುಮಾರು 10 ಠಾಣೆಗಳು ಕ್ವಾರಂಟೈನ್ ಆಗಿವೆ. ಕೊರೋನ ಸಮಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಹೋಯ್ಸಳ ಚಾಲಕ ಕಾನ್‌ಸ್ಟಬಲ್ ಒಬ್ಬರಿಗೆ ಸೋಂಕು ತಗುಲಿದ್ದು ಸೋಲದೇವನಹಳ್ಳಿ ಪೋಲಿಸರಿಗೆ ತಲೆಬಿಸಿಯಾಗಿದೆ.

ಬೆಂಗಳೂರು ಉತ್ತರ ವಿಭಾಗದ ಸೋಲದೇವನಹಳ್ಳಿ ಠಾಣೆಯಲ್ಲಿ 70 ಸಿಬ್ಬಂದಿಗಳಿದ್ದು ಸೋಂಕಿತನ ಸಂಪರ್ಕದಲ್ಲಿದ್ದು 14 ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ‌. ಸುಮಾರು 20 ಜನ ಸಿಬ್ಬಂದಿ ವಿವಿದೆ ಉದ್ದೇಶದ ಮೇಲೆ ಬೇರೆ ಠಾಣೆಗಳಿಗೆ ಕರ್ತವ್ಯದ ಮೇಲೆ ನಿಯೋಜಿಸಲಾಗಿದ್ದು ಸದ್ಯ ಇನ್ಸ್‌ಪೆಕ್ಟರ್ ಸೇರಿ ಠಾಣೆಯಲ್ಲಿ ಸುಮಾರು 35 ಸಿಬ್ಬಂದಿಗಳು ಉಳಿದಿದ್ದಾರೆ.

ಕೇವಲ 35 ಸಿಬ್ಬಂದಿಗಳನ್ನ ಬಳಸಿಕೊಂಡು ದೊಡ್ಡ ವ್ಯಾಪ್ತಿಯ ಠಾಣೆಯಲ್ಲಿ 24 ಗಂಟೆಗಳ ಕಾಲ ಕೆಲಸ ನಿರ್ವಹಿಸುವುದು ಪೊಲೀಸರಿಗೆ ತಲೆಬಿಸಿಯಾಗಿದೆ. ಅಪರಾಧ ಪ್ರಕರಣಗಳ ತನಿಖೆ, ಬೀಟ್ ರೌಂಡ್ಸ್, ಕೊರೋನಾ ಡ್ಯೂಟಿ, ಸೀಲ್‌ಡೌನ್ ಏರಿಯಾ ಡ್ಯೂಟಿ ಠಾಣೆ ಸಿಬ್ಬಂದಿಗಳ ನಿಯೋಜನೆ ಸಹ ಕ್ಲಿಷ್ಟಕರವಾಗಿದ್ದು ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸೋಂಕು ಹರಡುತ್ತಿರುವುದು ಮತ್ತಷ್ಟು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

ಪ್ರತಿ ಠಾಣೆಯಲ್ಲಿ ಸ್ವಾಗತಗಾರರು, ಬರಹಗಾರರು, ಠಾಣಾ ಮುಖ್ಯಸ್ಥರು, ವಾಹನ ಚಾಲಕರು, ನ್ಯಾಯಾಲಯದ ಸಿಬ್ಬಂದಿ ಸೇರಿದಂತೆ ಇತರೆ ಸಿಬ್ಬಂದಿ ಠಾಣೆಯಲ್ಲಿಯೇ ಕೆಲಸ ನಿರ್ವಹಿಸಲೇಬೇಕು, ಇಂತಹ ಸಂದಿಗ್ನ ಪರಿಸ್ಥಿತಿಯಲ್ಲಿ ಪೊಲೀಸರ ಕೊರತೆಯಿಂದ ಕರ್ತವ್ಯ ನಿರ್ವಹಿಸುವುದು ಕಷ್ಟವಾಗಿದೆ. ಮನೆಗೂ ಹೋಗದೆ ಕೆಲವೊಮ್ಮೆ ದಿನದ 24 ಗಂಟೆ ಕೆಲಸ ಮಾಡುವ ಪರಿಸ್ಥಿತಿ ಬಂದೊದಗಿದೆ ಅಂತಾರೆ ಕೆಲವು ಹೆಸರೇಳಲು ಇಚ್ಚಿಸದ ಸಿಬ್ಬಂದಿ.

ಒಟ್ಟಾರೆ ಕೊರೋನಾ ಸಂದಿಗ್ನ ಪರಿಸ್ಥಿತಿಯಲ್ಲಿ ಪೊಲೀಸರಿಗೆ ವೈರಸ್ ತಗಲುತ್ತಿದ್ದು, ಪ್ರಾಥಮಿಕ ಸಂಪರ್ಕಿತರನ್ನ ಕ್ವಾರಂಟೈನ್ ಮಾಡಲಾಗುತ್ತಿದ್ದು, ಪರ್ಯಾಯವಾಗಿ ಸಿಬ್ಬಂದಿ ನಿಯೋಜಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಬೇಕಿದೆ.

Published On - 2:02 pm, Thu, 11 June 20

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!