ಹೊಸಕೋಟೆಯಲ್ಲಿ ನಾಡಬಾಂಬ್ ಸ್ಫೋಟ: ಮಗ ಸಾವು, ತಂದೆ ಸ್ಥಿತಿ ಗಂಭೀರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಡಬಾಂಬ್​ ಸ್ಫೋಟಗೊಂಡಿದೆ. ಕಾಡು ಪ್ರಾಣಿಗಳ ಬೇಟೆಗೆ ತಯಾರಿಸುತ್ತಿದ್ದ ನಾಡಬಾಂಬ್​ಗೆ ಮಗ ಬಲಿಯಾಗಿದ್ದರೆ, ತಂದೆ ಸ್ಥಿತಿ ಗಂಭೀರವಾಗಿದೆ. ಇನ್ನು ಸ್ಫೋಟದ ರಭಸಕ್ಕೆ ಮನೆಯ ಮೇಲ್ಚಾವಣಿ ಛಿದ್ರಛಿದ್ರವಾಗಿದೆ.

ಹೊಸಕೋಟೆಯಲ್ಲಿ ನಾಡಬಾಂಬ್ ಸ್ಫೋಟ: ಮಗ ಸಾವು, ತಂದೆ ಸ್ಥಿತಿ ಗಂಭೀರ
ನಾಡಬಾಂಬ್ ಸ್ಫೋಟ
Edited By:

Updated on: Aug 30, 2024 | 5:45 PM

ಬೆಂಗಳೂರು, (ಆಗಸ್ಟ್ 30): ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟವಾಗಿದೆ. ನಾಡಬಾಂಬ್ ಸ್ಫೋಟಕ್ಕೆ ಮಗ ಮೃತಪಟ್ಟಿದ್ದರೆ, ತಂದೆ ಸ್ಥಿತಿ ಗಂಭೀರವಾಗಿದೆ. ಗ್ರಾಮದ ಪವನ್ ( 19 ) ಮೃತ ಯುವಕ. ಇನ್ನು ಸ್ಫೋಟದ ರಭಸಕ್ಕೆ ಮನೆಯ ಮೇಲ್ವಾವಣಿ ಛಿದ್ರ ಛಿದ್ರವಾಗಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Loading...
Unable to load recommendations.
Follow Us