ಹೊಸಕೋಟೆಯಲ್ಲಿ ನಾಡಬಾಂಬ್ ಸ್ಫೋಟ: ಮಗ ಸಾವು, ತಂದೆ ಸ್ಥಿತಿ ಗಂಭೀರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಡಬಾಂಬ್​ ಸ್ಫೋಟಗೊಂಡಿದೆ. ಕಾಡು ಪ್ರಾಣಿಗಳ ಬೇಟೆಗೆ ತಯಾರಿಸುತ್ತಿದ್ದ ನಾಡಬಾಂಬ್​ಗೆ ಮಗ ಬಲಿಯಾಗಿದ್ದರೆ, ತಂದೆ ಸ್ಥಿತಿ ಗಂಭೀರವಾಗಿದೆ. ಇನ್ನು ಸ್ಫೋಟದ ರಭಸಕ್ಕೆ ಮನೆಯ ಮೇಲ್ಚಾವಣಿ ಛಿದ್ರಛಿದ್ರವಾಗಿದೆ.

ಹೊಸಕೋಟೆಯಲ್ಲಿ ನಾಡಬಾಂಬ್ ಸ್ಫೋಟ: ಮಗ ಸಾವು, ತಂದೆ ಸ್ಥಿತಿ ಗಂಭೀರ
ನಾಡಬಾಂಬ್ ಸ್ಫೋಟ
Edited By:

Updated on: Aug 30, 2024 | 5:45 PM

ಬೆಂಗಳೂರು, (ಆಗಸ್ಟ್ 30): ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟವಾಗಿದೆ. ನಾಡಬಾಂಬ್ ಸ್ಫೋಟಕ್ಕೆ ಮಗ ಮೃತಪಟ್ಟಿದ್ದರೆ, ತಂದೆ ಸ್ಥಿತಿ ಗಂಭೀರವಾಗಿದೆ. ಗ್ರಾಮದ ಪವನ್ ( 19 ) ಮೃತ ಯುವಕ. ಇನ್ನು ಸ್ಫೋಟದ ರಭಸಕ್ಕೆ ಮನೆಯ ಮೇಲ್ವಾವಣಿ ಛಿದ್ರ ಛಿದ್ರವಾಗಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us