AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ; ಇಬ್ಬರಿಗೆ ಗಂಭೀರ ಗಾಯ

ನೆಲಮಂಗಲ(Nelamangala)ದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ(Cylinder explosion)ವಾಗಿ ಇಬ್ಬರಿಗೆ ಗಂಭೀರ ಗಾಯವಾಗಿದೆ.  ವಿಜಯಮ್ಮ ಅವರಿಗೆ ಸೇರಿದ ಮನೆ ಇದಾಗಿದ್ದು, ಎರಡನೇ ಮಹಡಿಯನ್ನು ಚಿಕ್ಕಬಾಣಾವರದಲ್ಲಿ ಲೈನ್​ಮನ್​ ಆಗಿ ಕೆಲಸ ಮಾಡುತ್ತಿದ್ದ ಸಂಜಯ್ ಎಂಬಾತನಿಗೆ ಕಳೆದ ಎಂಟು ವರ್ಷದಿಂದ ಬಾಡಿಗೆ ಕೊಡಲಾಗಿತ್ತು.

ನೆಲಮಂಗಲದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ; ಇಬ್ಬರಿಗೆ ಗಂಭೀರ ಗಾಯ
ಸಿಲಿಂಡರ್​ ಸ್ಪೋಟ
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 21, 2023 | 5:00 PM

Share

ಬೆಂಗಳೂರು ಗ್ರಾಮಾಂತರ, ಡಿ.21: ಜಿಲ್ಲೆಯ ನೆಲಮಂಗಲ(Nelamangala)ದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ(Cylinder explosion)ವಾಗಿ ಇಬ್ಬರಿಗೆ ಗಂಭೀರ ಗಾಯವಾಗಿದೆ.  ವಿಜಯಮ್ಮ ಅವರಿಗೆ ಸೇರಿದ ಮನೆ ಇದಾಗಿದ್ದು, ಎರಡನೇ ಮಹಡಿಯನ್ನು ಚಿಕ್ಕಬಾಣಾವರದಲ್ಲಿ ಲೈನ್​ಮನ್​ ಆಗಿ ಕೆಲಸ ಮಾಡುತ್ತಿದ್ದ ಸಂಜಯ್ ಎಂಬಾತನಿಗೆ ಕಳೆದ ಎಂಟು ವರ್ಷದಿಂದ ಬಾಡಿಗೆ ಕೊಡಲಾಗಿತ್ತು. ಇಂದು ಏಕಾಎಕಿ ಈ ಅನಾಹುತ ನಡೆದಿದ್ದು, ಸಂಜಯ್(40) ಹಾಗೂ ಲೇಖನಾ (05) ಅವರನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಅಗ್ನಿನಂದಿಸಿದ್ದಾರೆ. ಈ ಕುರಿತು ನೆಲಮಂಗಲ ಟೌನ್​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಪಾರ್ಟ್ಮೆಂಟ್​ನ ಎಲೆಕ್ಟ್ರಿಕ್ ರೂಮ್​ನಲ್ಲಿ ಹೊತ್ತಿಕೊಂಡ ಬೆಂಕಿ

ಆನೇಕಲ್: ಪಟ್ಟಣದ ಶುಭಾ ಅಪಾರ್ಟ್ಮೆಂಟ್​ನ ಮೋಟಾರ್ ಹಾಗೂ ಎಲೆಕ್ಟ್ರಿಕ್ ಜಂಕ್ಷನ್ ಬಾಕ್ಷ್​ಗಳನ್ನ ಅಳವಡಿಸಿದ್ದ ರೂಮ್​ನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದ್ದು, ಬೆಲೆ ಬಾಳುವ ಎಲೆಕ್ಟ್ರಿಕ್ ವಸ್ತುಗಳು ಸುಟ್ಟು ಭಸ್ಮವಾಗಿದೆ. ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಶಾರ್ಟ್ ಸರ್ಕ್ಯೂಟ್​ನಿಂದ ಈ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಿವಾಸಿಗಳು ಹೊರಗೆ ಓಡಿ ಬಂದಿದ್ದು, ಅಪಾರ್ಟ್ಮೆಂಟ್​ನಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ.

ಇದನ್ನೂ ಓದಿ:ಸರ್ಕಾರಿ ಶಾಲೆಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟ; ಶಿಕ್ಷಕರು ಸೇರಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕಾರಿಗೆ ಬೈಕ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಕಾರಿಗೆ ಬೈಕ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ಬೆಂಗಳೂರಿನ ಅಶೋಕ‌ ಪಿಲ್ಲರ್ ಬಳಿ ನಡೆದಿದೆ. ಶೇಕ್ ನಾಸಿರ್(32) ಮೃತ ರ್ದುದೈವಿ. ಹಿಂಬದಿ ಸವಾರ ಮುದಾಸಿರ್​ಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಕ್‌ ಸ್ಪೀಡ್ ತೋರಿಸಲು ಹೋಗಿದ್ದ ನಾಸಿರ್ ಹಾಗೂ  ಸೈಯದ್ ಮುದಾಸಿರ್, ಈ ವೇಳೆ ಯುಟರ್ನ್​ ತೆಗೆದುಕೊಳ್ಳುತ್ತಿದ್ದ ಕಾರಿಗೆ ಬೈಕ್​ ಡಿಕ್ಕಿ ಆಗಿದೆ. ತಕ್ಷಣ ನಾಸಿರ್, ಸೈಯದ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶೇಕ್ ನಾಸಿರ್ ಮೃತಪಟ್ಟಿದ್ದಾರೆ. ಈ ಕುರಿತು ವಿಲ್ಸನ್ ಗಾರ್ಡನ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು