AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ; ಇಬ್ಬರಿಗೆ ಗಂಭೀರ ಗಾಯ

ನೆಲಮಂಗಲ(Nelamangala)ದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ(Cylinder explosion)ವಾಗಿ ಇಬ್ಬರಿಗೆ ಗಂಭೀರ ಗಾಯವಾಗಿದೆ.  ವಿಜಯಮ್ಮ ಅವರಿಗೆ ಸೇರಿದ ಮನೆ ಇದಾಗಿದ್ದು, ಎರಡನೇ ಮಹಡಿಯನ್ನು ಚಿಕ್ಕಬಾಣಾವರದಲ್ಲಿ ಲೈನ್​ಮನ್​ ಆಗಿ ಕೆಲಸ ಮಾಡುತ್ತಿದ್ದ ಸಂಜಯ್ ಎಂಬಾತನಿಗೆ ಕಳೆದ ಎಂಟು ವರ್ಷದಿಂದ ಬಾಡಿಗೆ ಕೊಡಲಾಗಿತ್ತು.

ನೆಲಮಂಗಲದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ; ಇಬ್ಬರಿಗೆ ಗಂಭೀರ ಗಾಯ
ಸಿಲಿಂಡರ್​ ಸ್ಪೋಟ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Dec 21, 2023 | 5:00 PM

Share

ಬೆಂಗಳೂರು ಗ್ರಾಮಾಂತರ, ಡಿ.21: ಜಿಲ್ಲೆಯ ನೆಲಮಂಗಲ(Nelamangala)ದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ(Cylinder explosion)ವಾಗಿ ಇಬ್ಬರಿಗೆ ಗಂಭೀರ ಗಾಯವಾಗಿದೆ.  ವಿಜಯಮ್ಮ ಅವರಿಗೆ ಸೇರಿದ ಮನೆ ಇದಾಗಿದ್ದು, ಎರಡನೇ ಮಹಡಿಯನ್ನು ಚಿಕ್ಕಬಾಣಾವರದಲ್ಲಿ ಲೈನ್​ಮನ್​ ಆಗಿ ಕೆಲಸ ಮಾಡುತ್ತಿದ್ದ ಸಂಜಯ್ ಎಂಬಾತನಿಗೆ ಕಳೆದ ಎಂಟು ವರ್ಷದಿಂದ ಬಾಡಿಗೆ ಕೊಡಲಾಗಿತ್ತು. ಇಂದು ಏಕಾಎಕಿ ಈ ಅನಾಹುತ ನಡೆದಿದ್ದು, ಸಂಜಯ್(40) ಹಾಗೂ ಲೇಖನಾ (05) ಅವರನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಅಗ್ನಿನಂದಿಸಿದ್ದಾರೆ. ಈ ಕುರಿತು ನೆಲಮಂಗಲ ಟೌನ್​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಪಾರ್ಟ್ಮೆಂಟ್​ನ ಎಲೆಕ್ಟ್ರಿಕ್ ರೂಮ್​ನಲ್ಲಿ ಹೊತ್ತಿಕೊಂಡ ಬೆಂಕಿ

ಆನೇಕಲ್: ಪಟ್ಟಣದ ಶುಭಾ ಅಪಾರ್ಟ್ಮೆಂಟ್​ನ ಮೋಟಾರ್ ಹಾಗೂ ಎಲೆಕ್ಟ್ರಿಕ್ ಜಂಕ್ಷನ್ ಬಾಕ್ಷ್​ಗಳನ್ನ ಅಳವಡಿಸಿದ್ದ ರೂಮ್​ನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದ್ದು, ಬೆಲೆ ಬಾಳುವ ಎಲೆಕ್ಟ್ರಿಕ್ ವಸ್ತುಗಳು ಸುಟ್ಟು ಭಸ್ಮವಾಗಿದೆ. ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಶಾರ್ಟ್ ಸರ್ಕ್ಯೂಟ್​ನಿಂದ ಈ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಿವಾಸಿಗಳು ಹೊರಗೆ ಓಡಿ ಬಂದಿದ್ದು, ಅಪಾರ್ಟ್ಮೆಂಟ್​ನಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ.

ಇದನ್ನೂ ಓದಿ:ಸರ್ಕಾರಿ ಶಾಲೆಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟ; ಶಿಕ್ಷಕರು ಸೇರಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕಾರಿಗೆ ಬೈಕ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಕಾರಿಗೆ ಬೈಕ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ಬೆಂಗಳೂರಿನ ಅಶೋಕ‌ ಪಿಲ್ಲರ್ ಬಳಿ ನಡೆದಿದೆ. ಶೇಕ್ ನಾಸಿರ್(32) ಮೃತ ರ್ದುದೈವಿ. ಹಿಂಬದಿ ಸವಾರ ಮುದಾಸಿರ್​ಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಕ್‌ ಸ್ಪೀಡ್ ತೋರಿಸಲು ಹೋಗಿದ್ದ ನಾಸಿರ್ ಹಾಗೂ  ಸೈಯದ್ ಮುದಾಸಿರ್, ಈ ವೇಳೆ ಯುಟರ್ನ್​ ತೆಗೆದುಕೊಳ್ಳುತ್ತಿದ್ದ ಕಾರಿಗೆ ಬೈಕ್​ ಡಿಕ್ಕಿ ಆಗಿದೆ. ತಕ್ಷಣ ನಾಸಿರ್, ಸೈಯದ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶೇಕ್ ನಾಸಿರ್ ಮೃತಪಟ್ಟಿದ್ದಾರೆ. ಈ ಕುರಿತು ವಿಲ್ಸನ್ ಗಾರ್ಡನ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ