AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ; ಇಬ್ಬರಿಗೆ ಗಂಭೀರ ಗಾಯ

ನೆಲಮಂಗಲ(Nelamangala)ದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ(Cylinder explosion)ವಾಗಿ ಇಬ್ಬರಿಗೆ ಗಂಭೀರ ಗಾಯವಾಗಿದೆ.  ವಿಜಯಮ್ಮ ಅವರಿಗೆ ಸೇರಿದ ಮನೆ ಇದಾಗಿದ್ದು, ಎರಡನೇ ಮಹಡಿಯನ್ನು ಚಿಕ್ಕಬಾಣಾವರದಲ್ಲಿ ಲೈನ್​ಮನ್​ ಆಗಿ ಕೆಲಸ ಮಾಡುತ್ತಿದ್ದ ಸಂಜಯ್ ಎಂಬಾತನಿಗೆ ಕಳೆದ ಎಂಟು ವರ್ಷದಿಂದ ಬಾಡಿಗೆ ಕೊಡಲಾಗಿತ್ತು.

ನೆಲಮಂಗಲದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ; ಇಬ್ಬರಿಗೆ ಗಂಭೀರ ಗಾಯ
ಸಿಲಿಂಡರ್​ ಸ್ಪೋಟ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Dec 21, 2023 | 5:00 PM

Share

ಬೆಂಗಳೂರು ಗ್ರಾಮಾಂತರ, ಡಿ.21: ಜಿಲ್ಲೆಯ ನೆಲಮಂಗಲ(Nelamangala)ದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ(Cylinder explosion)ವಾಗಿ ಇಬ್ಬರಿಗೆ ಗಂಭೀರ ಗಾಯವಾಗಿದೆ.  ವಿಜಯಮ್ಮ ಅವರಿಗೆ ಸೇರಿದ ಮನೆ ಇದಾಗಿದ್ದು, ಎರಡನೇ ಮಹಡಿಯನ್ನು ಚಿಕ್ಕಬಾಣಾವರದಲ್ಲಿ ಲೈನ್​ಮನ್​ ಆಗಿ ಕೆಲಸ ಮಾಡುತ್ತಿದ್ದ ಸಂಜಯ್ ಎಂಬಾತನಿಗೆ ಕಳೆದ ಎಂಟು ವರ್ಷದಿಂದ ಬಾಡಿಗೆ ಕೊಡಲಾಗಿತ್ತು. ಇಂದು ಏಕಾಎಕಿ ಈ ಅನಾಹುತ ನಡೆದಿದ್ದು, ಸಂಜಯ್(40) ಹಾಗೂ ಲೇಖನಾ (05) ಅವರನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಅಗ್ನಿನಂದಿಸಿದ್ದಾರೆ. ಈ ಕುರಿತು ನೆಲಮಂಗಲ ಟೌನ್​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಪಾರ್ಟ್ಮೆಂಟ್​ನ ಎಲೆಕ್ಟ್ರಿಕ್ ರೂಮ್​ನಲ್ಲಿ ಹೊತ್ತಿಕೊಂಡ ಬೆಂಕಿ

ಆನೇಕಲ್: ಪಟ್ಟಣದ ಶುಭಾ ಅಪಾರ್ಟ್ಮೆಂಟ್​ನ ಮೋಟಾರ್ ಹಾಗೂ ಎಲೆಕ್ಟ್ರಿಕ್ ಜಂಕ್ಷನ್ ಬಾಕ್ಷ್​ಗಳನ್ನ ಅಳವಡಿಸಿದ್ದ ರೂಮ್​ನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದ್ದು, ಬೆಲೆ ಬಾಳುವ ಎಲೆಕ್ಟ್ರಿಕ್ ವಸ್ತುಗಳು ಸುಟ್ಟು ಭಸ್ಮವಾಗಿದೆ. ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಶಾರ್ಟ್ ಸರ್ಕ್ಯೂಟ್​ನಿಂದ ಈ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಿವಾಸಿಗಳು ಹೊರಗೆ ಓಡಿ ಬಂದಿದ್ದು, ಅಪಾರ್ಟ್ಮೆಂಟ್​ನಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ.

ಇದನ್ನೂ ಓದಿ:ಸರ್ಕಾರಿ ಶಾಲೆಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟ; ಶಿಕ್ಷಕರು ಸೇರಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕಾರಿಗೆ ಬೈಕ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಕಾರಿಗೆ ಬೈಕ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ಬೆಂಗಳೂರಿನ ಅಶೋಕ‌ ಪಿಲ್ಲರ್ ಬಳಿ ನಡೆದಿದೆ. ಶೇಕ್ ನಾಸಿರ್(32) ಮೃತ ರ್ದುದೈವಿ. ಹಿಂಬದಿ ಸವಾರ ಮುದಾಸಿರ್​ಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಕ್‌ ಸ್ಪೀಡ್ ತೋರಿಸಲು ಹೋಗಿದ್ದ ನಾಸಿರ್ ಹಾಗೂ  ಸೈಯದ್ ಮುದಾಸಿರ್, ಈ ವೇಳೆ ಯುಟರ್ನ್​ ತೆಗೆದುಕೊಳ್ಳುತ್ತಿದ್ದ ಕಾರಿಗೆ ಬೈಕ್​ ಡಿಕ್ಕಿ ಆಗಿದೆ. ತಕ್ಷಣ ನಾಸಿರ್, ಸೈಯದ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶೇಕ್ ನಾಸಿರ್ ಮೃತಪಟ್ಟಿದ್ದಾರೆ. ಈ ಕುರಿತು ವಿಲ್ಸನ್ ಗಾರ್ಡನ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?