AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಕ್ಟರ್ ಉಳುಮೆ ಮಾಡುವಾಗ ತೋಟದಲ್ಲಿ ಪತ್ತೆಯಾಯ್ತು ಮೃತ ದೇಹ, ದಂಗಾದ ರೈತ, ಮುಂದೇನಾಯ್ತು?

ಮೃತ ದೇಹವನ್ನು ಪೊಲೀಸರು ಪರಿಶೀಲನೆ ನಡೆಸಿ ಬಳಿಕ ಶ್ವಾನದಳ ಹಾಗೂ ವಿಧಿವಿಜ್ಞಾನ ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ್ದಾರೆ, ಇದರಿಂದ ಇದೊಂದು ಸುಮಾರು 5೦ ವರ್ಷ ವಯಸ್ಸುಳ್ಳ ಪುರುಷನ ಮೃತದೇಹ ಎಂದು ತಿಳಿದು ಬಂದಿದೆ. ಅಲ್ಲದೆ ಮೃತ ದೇಹದ ಎದೆ ಭಾಗ ಹಾಗೂ ತೋಡೆ ಭಾಗದಲ್ಲಿ ಚಾಕುವಿನಿಂದ ಇರಿದ ಸ್ಥಿತಿಯಲ್ಲಿ ಗುರುತುಗಳು ಪತ್ತೆಯಾಗಿದೆ.

ಟ್ರಾಕ್ಟರ್ ಉಳುಮೆ ಮಾಡುವಾಗ ತೋಟದಲ್ಲಿ ಪತ್ತೆಯಾಯ್ತು ಮೃತ ದೇಹ, ದಂಗಾದ ರೈತ, ಮುಂದೇನಾಯ್ತು?
ಟ್ರಾಕ್ಟರ್ ಉಳುಮೆ ಮಾಡುವಾಗ ತೋಟದಲ್ಲಿ ಪತ್ತೆಯಾಯ್ತು ಮೃತ ದೇಹ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Oct 30, 2023 | 11:58 AM

Share

ನೆಲಮಂಗಲ (ಬೆಂಗಳೂರು ಗ್ರಾಮಾಂತರ) ಅಕ್ಟೋಬರ್​ 30: ಆತ ಎಂದಿನಂತೆ ಟ್ರಾಕ್ಟರ್ ಹತ್ತಿ ನಿನ್ನೆ ಭಾನುವಾರ ಉಳುಮೆ ಮಾಡ್ತಾ ಇದ್ದ, ಆದ್ರೆ ತನ್ನ ಉಳುಮೆಯಲ್ಲಿ ಅವನಿಗೆ ಒಂದು ಅಚ್ಚರಿ ಕಾದಿತ್ತು, ಏನಂದ್ರೆ ಉಳುಮೆ (ploughing) ಮಾಡುತ್ತಿದ್ದ ವೇಳೆ ಒಂದು ಮೃತ ದೇಹ (dead body) ನೋಡಿ ದಂಗಾಗಿದ್ದ. ವಿಶಾಲವಾದ ತೋಟದಲ್ಲಿ ಬಿದ್ದಿರುವ ಮೃತ ದೇಹ, ಮೃತ ದೇಹ ಗಬ್ಬೆದ್ದು ನಾರುತ್ತಿತ್ತು. ಪೊಲೀಸರು ಬಂದು ನೋಡುವಷ್ಟರಲ್ಲಿ ಗೊತ್ತಾಗಿದ್ದು ಅಲ್ಲಿ ಓರ್ವ ವ್ಯಕ್ತಿ ಕೊಲೆಯಾಗಿದ್ದಾನೆ ಎಂದು. ಅದೀಗ ಪೊಲೀಸರಿಗೆ ತಲೆನೋವಾಗಿದೆ‌. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಮಂಟನಕುರ್ಚಿ ಗ್ರಾಮದ ( village in Nelamangala) ಅನುಸೂಯಮ್ಮ ಎಂಬುವರ ತೋಟದಲ್ಲಿ ಶವ ಪತ್ತೆಯಾಗಿದ್ದು, ಚಾಲಕ ಹರೀಶ್ ಎಂಬುವರು ಟ್ರಾಕ್ಟರ್‌ನಿಂದ ಉಳುಮೆ ಮಾಡುತ್ತಿದ್ದಾಗ ಮೃತ ದೇಹ ಪತ್ತೆಯಾಗಿದೆ.

ಮೃತ ದೇಹವನ್ನು ಪೊಲೀಸರು ಪರಿಶೀಲನೆ ನಡೆಸಿ ಬಳಿಕ ಶ್ವಾನದಳ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯ ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ್ದಾರೆ, ಇದರಿಂದ ಇದೊಂದು ಸುಮಾರು 5೦ ವರ್ಷ ವಯಸ್ಸುಳ್ಳ ಪುರುಷನ ಮೃತದೇಹ ಎಂದು ತಿಳಿದು ಬಂದಿದೆ. ಅಲ್ಲದೆ ಮೃತ ದೇಹದ ಎದೆ ಭಾಗ ಹಾಗೂ ತೋಡೆ ಭಾಗದಲ್ಲಿ ಚಾಕುವಿನಿಂದ ಇರಿದ ಸ್ಥಿತಿಯಲ್ಲಿ ಗುರುತುಗಳು ಪತ್ತೆಯಾಗಿದ್ದು, ಮೃತ ದೇಹದ ಮೇಲೆ ಬಟ್ಟೆಗಳು ಇಲ್ಲದಿರುವುದು ಸಾಕ್ಷ್ಯ ನಾಶ ಪಡಿಸಲು ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಅಪರೂಪದ ಕೊಂಡುಕುರಿ ಸಂತತಿ ರಕ್ಷಣೆ ಮುಂದಾದ ಸರ್ಕಾರ, ಜಗಳೂರಿನ ಕೊಂಡುಕುರಿ ವನ್ಯಧಾಮಕ್ಕೆ ಕೇಂದ್ರ ಅರಣ್ಯ ಇಲಾಖೆ ತಂಡ ಭೇಟಿ

ಸದ್ಯ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪಾರ್ಟಿ ವೇಳೆ ಗಲಾಟೆ ಹಾಗೂ ಯಾವುದೇ ಅನೈತಿಕ ಸಂಬಂಧದ ಕೊಲೆ ಆಗಿರಬಹುದಾ ಎಂದು ಗ್ರಾಮಸ್ಥರಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸುತ್ತಮುತ್ತಲ‌ ಠಾಣೆಗಳಲ್ಲಿ ಮಿಸ್ಸಿಂಗ್ ಆದವರ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದು ಮೃತ ದೇಹದ ಗುರುತು ಪತ್ತೆಗೆ ಹರಸಾಹಸ ಪಡುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ