Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಕ್ಟರ್ ಉಳುಮೆ ಮಾಡುವಾಗ ತೋಟದಲ್ಲಿ ಪತ್ತೆಯಾಯ್ತು ಮೃತ ದೇಹ, ದಂಗಾದ ರೈತ, ಮುಂದೇನಾಯ್ತು?

ಮೃತ ದೇಹವನ್ನು ಪೊಲೀಸರು ಪರಿಶೀಲನೆ ನಡೆಸಿ ಬಳಿಕ ಶ್ವಾನದಳ ಹಾಗೂ ವಿಧಿವಿಜ್ಞಾನ ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ್ದಾರೆ, ಇದರಿಂದ ಇದೊಂದು ಸುಮಾರು 5೦ ವರ್ಷ ವಯಸ್ಸುಳ್ಳ ಪುರುಷನ ಮೃತದೇಹ ಎಂದು ತಿಳಿದು ಬಂದಿದೆ. ಅಲ್ಲದೆ ಮೃತ ದೇಹದ ಎದೆ ಭಾಗ ಹಾಗೂ ತೋಡೆ ಭಾಗದಲ್ಲಿ ಚಾಕುವಿನಿಂದ ಇರಿದ ಸ್ಥಿತಿಯಲ್ಲಿ ಗುರುತುಗಳು ಪತ್ತೆಯಾಗಿದೆ.

ಟ್ರಾಕ್ಟರ್ ಉಳುಮೆ ಮಾಡುವಾಗ ತೋಟದಲ್ಲಿ ಪತ್ತೆಯಾಯ್ತು ಮೃತ ದೇಹ, ದಂಗಾದ ರೈತ, ಮುಂದೇನಾಯ್ತು?
ಟ್ರಾಕ್ಟರ್ ಉಳುಮೆ ಮಾಡುವಾಗ ತೋಟದಲ್ಲಿ ಪತ್ತೆಯಾಯ್ತು ಮೃತ ದೇಹ
Follow us
ಬಿ ಮೂರ್ತಿ, ನೆಲಮಂಗಲ
| Updated By: ಸಾಧು ಶ್ರೀನಾಥ್​

Updated on: Oct 30, 2023 | 11:58 AM

ನೆಲಮಂಗಲ (ಬೆಂಗಳೂರು ಗ್ರಾಮಾಂತರ) ಅಕ್ಟೋಬರ್​ 30: ಆತ ಎಂದಿನಂತೆ ಟ್ರಾಕ್ಟರ್ ಹತ್ತಿ ನಿನ್ನೆ ಭಾನುವಾರ ಉಳುಮೆ ಮಾಡ್ತಾ ಇದ್ದ, ಆದ್ರೆ ತನ್ನ ಉಳುಮೆಯಲ್ಲಿ ಅವನಿಗೆ ಒಂದು ಅಚ್ಚರಿ ಕಾದಿತ್ತು, ಏನಂದ್ರೆ ಉಳುಮೆ (ploughing) ಮಾಡುತ್ತಿದ್ದ ವೇಳೆ ಒಂದು ಮೃತ ದೇಹ (dead body) ನೋಡಿ ದಂಗಾಗಿದ್ದ. ವಿಶಾಲವಾದ ತೋಟದಲ್ಲಿ ಬಿದ್ದಿರುವ ಮೃತ ದೇಹ, ಮೃತ ದೇಹ ಗಬ್ಬೆದ್ದು ನಾರುತ್ತಿತ್ತು. ಪೊಲೀಸರು ಬಂದು ನೋಡುವಷ್ಟರಲ್ಲಿ ಗೊತ್ತಾಗಿದ್ದು ಅಲ್ಲಿ ಓರ್ವ ವ್ಯಕ್ತಿ ಕೊಲೆಯಾಗಿದ್ದಾನೆ ಎಂದು. ಅದೀಗ ಪೊಲೀಸರಿಗೆ ತಲೆನೋವಾಗಿದೆ‌. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಮಂಟನಕುರ್ಚಿ ಗ್ರಾಮದ ( village in Nelamangala) ಅನುಸೂಯಮ್ಮ ಎಂಬುವರ ತೋಟದಲ್ಲಿ ಶವ ಪತ್ತೆಯಾಗಿದ್ದು, ಚಾಲಕ ಹರೀಶ್ ಎಂಬುವರು ಟ್ರಾಕ್ಟರ್‌ನಿಂದ ಉಳುಮೆ ಮಾಡುತ್ತಿದ್ದಾಗ ಮೃತ ದೇಹ ಪತ್ತೆಯಾಗಿದೆ.

ಮೃತ ದೇಹವನ್ನು ಪೊಲೀಸರು ಪರಿಶೀಲನೆ ನಡೆಸಿ ಬಳಿಕ ಶ್ವಾನದಳ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯ ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ್ದಾರೆ, ಇದರಿಂದ ಇದೊಂದು ಸುಮಾರು 5೦ ವರ್ಷ ವಯಸ್ಸುಳ್ಳ ಪುರುಷನ ಮೃತದೇಹ ಎಂದು ತಿಳಿದು ಬಂದಿದೆ. ಅಲ್ಲದೆ ಮೃತ ದೇಹದ ಎದೆ ಭಾಗ ಹಾಗೂ ತೋಡೆ ಭಾಗದಲ್ಲಿ ಚಾಕುವಿನಿಂದ ಇರಿದ ಸ್ಥಿತಿಯಲ್ಲಿ ಗುರುತುಗಳು ಪತ್ತೆಯಾಗಿದ್ದು, ಮೃತ ದೇಹದ ಮೇಲೆ ಬಟ್ಟೆಗಳು ಇಲ್ಲದಿರುವುದು ಸಾಕ್ಷ್ಯ ನಾಶ ಪಡಿಸಲು ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಅಪರೂಪದ ಕೊಂಡುಕುರಿ ಸಂತತಿ ರಕ್ಷಣೆ ಮುಂದಾದ ಸರ್ಕಾರ, ಜಗಳೂರಿನ ಕೊಂಡುಕುರಿ ವನ್ಯಧಾಮಕ್ಕೆ ಕೇಂದ್ರ ಅರಣ್ಯ ಇಲಾಖೆ ತಂಡ ಭೇಟಿ

ಸದ್ಯ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪಾರ್ಟಿ ವೇಳೆ ಗಲಾಟೆ ಹಾಗೂ ಯಾವುದೇ ಅನೈತಿಕ ಸಂಬಂಧದ ಕೊಲೆ ಆಗಿರಬಹುದಾ ಎಂದು ಗ್ರಾಮಸ್ಥರಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸುತ್ತಮುತ್ತಲ‌ ಠಾಣೆಗಳಲ್ಲಿ ಮಿಸ್ಸಿಂಗ್ ಆದವರ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದು ಮೃತ ದೇಹದ ಗುರುತು ಪತ್ತೆಗೆ ಹರಸಾಹಸ ಪಡುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ