AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Birthday Party: ಯುವಕರ ತಂಡ ಬರ್ತಡೆ ಪಾರ್ಟಿ ಮುಗಿಸಿಕೊಂಡು ಮೂರು ಕಾರುಗಳಲ್ಲಿ ಬರುವಾಗ ಅಪಘಾತ: ಒಬ್ಬ ಸಾವು, ಮತ್ತಿಬ್ಬರು ಗಂಭೀರ

ಮೃತ ರೋಹಿತ್ ಸೇರಿದಂತೆ ಗಾಯಾಳುಗಳು ಸ್ನೇಹಿತರಾಗಿದ್ದು, ತಾವರೆಕೆರೆ ಬಳಿ ಬರ್ತಡೆ ಪಾರ್ಟಿಯೊಂದಕ್ಕೆ ತೆರಳಿದ್ದರು. ಮೂರು ಕಾರಿನಲ್ಲಿ ತೆರಳುತ್ತಿದ್ದ ಸ್ನೇಹಿತರ ತಂಡದ ಅತೀ ವೇಗದ ಚಾಲನೆಯಿಂದ ಮೃತ ರೋಹಿತ್ ಚಲಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ.

Birthday Party: ಯುವಕರ ತಂಡ ಬರ್ತಡೆ ಪಾರ್ಟಿ ಮುಗಿಸಿಕೊಂಡು ಮೂರು ಕಾರುಗಳಲ್ಲಿ ಬರುವಾಗ ಅಪಘಾತ: ಒಬ್ಬ ಸಾವು, ಮತ್ತಿಬ್ಬರು ಗಂಭೀರ
ಬರ್ತಡೆ ಪಾರ್ಟಿ ಮುಗಿಸಿಕೊಂಡು ಮೂರು ಕಾರುಗಳಲ್ಲಿ ಬರುವಾಗ ಅಪಘಾತ: ಒಬ್ಬ ಸಾವು
TV9 Web
| Edited By: |

Updated on: Feb 02, 2023 | 12:00 PM

Share

ಆ ಯುವಕರ ತಂಡದವರು ಬರ್ತಡೆ ಪಾರ್ಟಿಗೆ (Birthday Party) ಹೋಗಿದ್ದರು. ಪಾರ್ಟಿ ಮುಗಿಸಿಕೊಂಡು ಮನೆ ಕಡೆಗೆ ಬರುತ್ತಿದ್ದ ಆ ತಂಡದ ಓರ್ವ ಯುವಕ (Youth) ನೇರ ಸ್ಮಶಾನ ಸೇರಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮರಕ್ಕೆ ಗುದ್ದಿರುವ ಕಾರು, ಹಳ್ಳದಲ್ಲಿ ನಜ್ಜುಗುಜ್ಜಾಗಿ ಬಿದ್ದಿರುವ ಕಾರು, ಶವಾಗಾರದಲ್ಲಿ ಹದಿಹರೆಯದ ಯುವಕನ ಶವ, ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ಮಗನನ್ನ ಕಳೆದುಕೊಂಡು ಪೋಷಕರ ಗೋಳಾಟ… ಈ ದೃಶ್ಯಗಳಿಗೆ ಸಾಕ್ಷಿಯಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ (Nelamangala) ಹೊನ್ನಗಂಗಯ್ಯನ ಪಾಳ್ಯದಲ್ಲಿ ನಡೆದಿರುವ ಭೀಕರ ಅಪಘಾತ (Car Accident). ಅಪಘಾತದ ದೃಶ್ಯಗಳನ್ನ ನೋಡಿದ್ರೆ ಯಾರೂ ಬದುಕುಳಿದಿಲ್ಲ ಅನ್ಸುತ್ತೆ. ಅದರಂತೆ 26 ವರ್ಷದ ರೋಹಿತ್ ಅಪಘಾತದ ಸ್ಥಳದಲ್ಲೆ ಸಾವನ್ನಪ್ಪಿದ್ದರೆ ಕಾರು ಚಾಲಕ ಪ್ರದೀಪ್ ಮತ್ತೋರ್ವ ಅವಿನಾಶ್ ಗಂಭೀರ ಗಾಯಾಳುಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ರೋಹಿತ್ ಸೇರಿದಂತೆ ಗಾಯಾಳುಗಳು ಸ್ನೇಹಿತರಾಗಿದ್ದು, ತಾವರೆಕೆರೆ ಬಳಿ ಬರ್ತಡೆ ಪಾರ್ಟಿಯೊಂದಕ್ಕೆ ತೆರಳಿದ್ದರು. ಮೂರು ಕಾರಿನಲ್ಲಿ ತೆರಳುತ್ತಿದ್ದ ಸ್ನೇಹಿತರ ತಂಡದ ಅತೀ ವೇಗದ ಚಾಲನೆಯಿಂದ ಮೃತ ರೋಹಿತ್ ಚಲಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ.

ಇನ್ನು ಮೃತ ರೋಹಿತ್ ಮೂಲತಃ ಆಂಧ್ರ ಪ್ರದೇಶದವರಾಗಿದ್ದು, ಬೆಂಗಳೂರಿನ ಲಗ್ಗೆರೆಯಲ್ಲಿ ಸ್ನೇಹಿತರೊಂದಿಗೆ ವಾಸವಿದ್ದ. ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೋಹಿತ್ ತನ್ನ ಸ್ನೇಹಿತರೊಂದಿಗೆ ತೆರಳಿದ್ದ ವೇಳೆ ಅಪಘಾತ ಸಂಭವಿಸಿ ದಾರುಣ ಅಂತ್ಯ ಕಂಡಿದ್ದಾನೆ.

ಸದ್ಯ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇನ್ನೂ ಘಟನೆಗೆ ನಿಖರ ಕಾರಣ ಏನು ಅಂದು ತನಿಖೆಯ ನಂತರ ತಿಳಿಯಬೇಕಿದೆ. ಒಟ್ಟಿನಲ್ಲಿ ಅಪಘಾತದಲ್ಲಿ ಇಬ್ಬರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ರೆ ಇತ್ತ ಮನೆಗೆ ಆಧಾರ ಸ್ತಂಭವಾಗಿದ್ದ ಒಬ್ಬನೆ ಮಗನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವರದಿ: ವಿನಾಯಕ್ ಗುರವ್, ಟಿವಿ 9, ನೆಲಮಂಗಲ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?