AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devanahalli-Chikkaballapur Accidents: ದೇವನಹಳ್ಳಿ-ಚಿಕ್ಕಬಳ್ಳಾಪುರ ಮಾರ್ಗದಲ್ಲಿ ನಿರಂತರ ಅಪಘಾತಗಳು: ಸಮಸ್ಯೆ ಏನು? ಬ್ರೇಕ್​ ಹಾಕುವವರು ಯಾರು?

ಸಂಚಾರ ದಟ್ಟಣೆ ಜೊತೆಗೆ ಹೆದ್ದಾರಿ ಬದಿಯಲ್ಲೆ ಬೃಹತ್ ಲಾರಿಗಳನ್ನು ನಿಲ್ಲಿಸುತ್ತಿದ್ದಾರೆ. ಹಿಂದಿನಿಂದ ಬರುವ ವಾಹನ ಸವಾರರು ಹೀಗೆ ನಿಂತ ಲಾರಿಗಳಿಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗುತ್ತಿದ್ದಾರೆ. ಸಂಚಾರಿ ಪೊಲೀಸರಾಗಲಿ, ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಯಾಗಲಿ ಎಚ್ಚೆತ್ತುಕೊಂಡಿಲ್ಲ. ಒಟ್ಟಾರೆ ನೂರಾರು ರೂಪಾಯಿ ಟೋಲ್ ಶುಲ್ಕ ಕಟ್ಟಿ ವಾಹನ ಸವಾರರು ಹೆದ್ದಾರಿಗಿಳಿಯುತ್ತಿದ್ರು ಅವೈಜ್ಞಾನಿಕವಾಗಿ ರಸ್ತೆಯಲ್ಲೇ ನಿಲ್ಲುತ್ತಿರುವ ವಾಹನಗಳಿಂದ ಜನ ಜೀವ ಕಳೆದುಕೊಳ್ತಿದ್ದಾರೆ.

Devanahalli-Chikkaballapur Accidents: ದೇವನಹಳ್ಳಿ-ಚಿಕ್ಕಬಳ್ಳಾಪುರ ಮಾರ್ಗದಲ್ಲಿ ನಿರಂತರ ಅಪಘಾತಗಳು: ಸಮಸ್ಯೆ ಏನು? ಬ್ರೇಕ್​ ಹಾಕುವವರು ಯಾರು?
ದೇವನಹಳ್ಳಿ-ಚಿಕ್ಕಬಳ್ಳಾಪುರ ಮಾರ್ಗದಲ್ಲಿ ನಿರಂತರ ಅಪಘಾತಗಳು: ಸಮಸ್ಯೆ ಏನು?
ನವೀನ್ ಕುಮಾರ್ ಟಿ
| Edited By: ಸಾಧು ಶ್ರೀನಾಥ್​|

Updated on: Oct 30, 2023 | 9:15 AM

Share

ಆ ಹೆದ್ದಾರಿಯಲ್ಲಿ ಇತ್ತೀಚೆಗಷ್ಟೆ ನಿಂತಿದ್ದ ಲಾರಿಗೆ ಸುಮೋ ಡಿಕ್ಕಿ ಹೊಡೆದು 13 ಜನ ಜೀವ ಕಳೆದುಕೊಂಡಿದ್ರು. ಆದ್ರೆ ಇಷ್ಟಾದರೂ ಅಧಿಕಾರಿಗಳು, ಪೊಲೀಸರು ಮಾತ್ರ ಎಚ್ಚೆತ್ತುಕೊಳ್ಳದೆ ಹಾಗೆ ಗಾಢ ನಿದ್ದೆಯಲ್ಲಿದ್ದು ಇದೀಗ ಆ ಹೆದ್ದಾರಿಯಲ್ಲಿ (Highway) ಸಂಚಾರ ಮಾಡಬೇಕು ಅಂದ್ರೆ ಜೀವ ಕೈಯಲ್ಲಿಹಿಡಿದು ಸಂಚರಿಸುವಂತಹ ಸ್ಥಿತಿ ವಾಹನ ಸವಾರರಿಗೆ ನಿರ್ಮಾಣವಾಗಿದೆ. ಅದು ಯಾಕೆ ಅನ್ನೋದನ್ನ ನೀವೇ ನೋಡಿ. ಅಪಘಾತ, ಅಪಘಾತ, ಅಪಘಾತ… ವೀಕೆಂಡ್ ಬಂತು ಅಂದ್ರೆ ಸಾಕು ಈ ಹೆದ್ದಾರಿಯಲ್ಲಿ ಇತ್ತೀಚೆಗೆ ಕಾಣಿಸುವ ರಣಭೀಕರ ದೃಶ್ಯಗಳಿವು. ಅಂದಹಾಗೆ ಇಂತಹ ಡೆಡ್ಲಿ ಅಪಘಾತ ಹಾಗೂ ಅಮಾಯಕ ಜೀವಗಳ ಬಲಿಗೆ ಕಾರಣವಾಗಿರುವುದು ನಮ್ಮದೆ ಸಿಲಿಕಾನ್ ಸಿಟಿ ಹೊರವಲಯದ ಕೆಂಪೇಗೌಡ ಏರ್ಪೋಟ್ ಮೂಲಕ ಹಾದು ಹೋಗಿರುವ ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ (Devanahalli-Chikkaballapur Road Accidents).

ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮೂಲಕ ಚಿಕ್ಕಬಳ್ಳಾಪುರ ಮಾರ್ಗವಾಗಿ ಹೈದರಾಬಾದ್ ರಾಷ್ಟ್ರಿಯ ಹೆದ್ದಾರಿ ಹಾದು ಹೋಗಿದ್ದು ಪ್ರತಿನಿತ್ಯ ಸಾವಿರಾರು ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತವೆ. ಆದ್ರೆ ಸಾವಿರಾರು ವಾಹನಗಳು ಸಂಚಾರ ಮಾಡ್ತಿದ್ರು ಒಂದು ಬದಿಯ ರಸ್ತೆಯಲ್ಲಿ 2 ಪಥಗಳು ಮಾತ್ರ ಇರುವ ಕಾರಣ ವೀಕೆಂಡ್ ಬಂದ್ರೆ ಸಾಕು ಹೈವೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುತ್ತೆ.

ಈ ಸಂಚಾರ ದಟ್ಟಣೆ ಜೊತೆಗೆ ಹೆದ್ದಾರಿ ಬದಿಯಲ್ಲೆ ಬೃಹತ್ ಸಿಮೆಂಟ್ ಹಾಗೂ ಸರಕು ಸಾಗಾಣಿಕೆ ಲಾರಿಗಳನ್ನು ನಿಲ್ಲಿಸುತ್ತಿದ್ದಾರೆ. ಆದರೆ ಹಿಂದಿನಿಂದ ಬರುವ ವಾಹನ ಸವಾರರು ಹೀಗೆ ನಿಂತ ಲಾರಿಗಳಿಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗುತ್ತಿದ್ದಾರೆ. ಇದೇ ರೀತಿ ಮೊನ್ನೆಯಷ್ಟೆ ಚಿಕ್ಕಬಳ್ಳಾಪುರ ಬಳಿ 13 ಜನ ಹೆದ್ದಾರಿಯಲ್ಲಿ ಸಾವನ್ನಪಿದರೂ ಸಂಚಾರಿ ಪೊಲೀಸರಾಗಲಿ, ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಯಾಗಲಿ ಎಚ್ಚೆತ್ತುಕೊಂಡಿಲ್ಲ ಅಂತ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

ಚಿಕ್ಕಬಳ್ಳಾಪುರ ಬಳಿ 13 ಜನ ಸಾವನ್ನಪಿದ ನಂತರ ಇದೇ ರಸ್ತೆಯಲ್ಲಿ ಕಳೆದ ಶುಕ್ರವಾರ ನಿಂತಿದ್ದ ಲಾರಿಗೆ ಬೈಕ್ ಮತ್ತು ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ದುರ್ಮಾರಣಕ್ಕೀಡಾಗಿದ್ರು. ಜೊತೆಗೆ ಕೆಲವೊಮ್ಮೆ ಅತಿವೇಗದಲ್ಲಿ ಬರುವ ಖಾಸಗಿ ಬಸ್ಗಳು ಸಹ ಒವರ್ ಟೇಕ್ ಮಾಡುವ ಭರದಲ್ಲಿ ಹೆದ್ದಾರಿ ಬದಿಯಲ್ಲಿನ ಲಾರಿಗಳಿಗೆ ಟಚ್ ಆಗಿ ಪಲ್ಟಿಯಾಗಿವೆ. ಹೀಗಾಗಿ ಈಗಾಗಲೆ ಕಳೆದ ಕೆಲ ತಿಂಗಳುಗಳಲ್ಲೆ 20 ಕ್ಕೂ ಅಧಿಕ ಜನ ಅಪಘಾತಗಳಿಂದ ಪ್ರಾಣ ಕಳೆದುಕೊಂಡಿದ್ದು ಏರ್ಪೋಟ್ ಸಂಚಾರಿ ಪೊಲೀಸರು ಕ್ರಮ ಕೈಗೊಳ್ತಿಲ್ಲ ಅಂತ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read: ಬಸ್ ಲೇಟಾಗತ್ತೆ ಅಂತಾ ಸುಮೋ ಗಾಡಿ ಹತ್ತಿದ್ದೇ ಬಂತು, ಅದು ಯಮ ಧರ್ಮರಾಯನ ವಾಹನವಾಗಿತ್ತು! ಏನೆಲ್ಲಾ ನಡೆಯಿತು ಅಲ್ಲಿ? ಸಮಗ್ರ ಚಿತ್ರಣ ಇಲ್ಲಿದೆ

ಒಟ್ಟಾರೆ ನೂರಾರು ರೂಪಾಯಿ ಟೋಲ್ ಶುಲ್ಕ ಕಟ್ಟಿ ವಾಹನ ಸವಾರರು ಹೆದ್ದಾರಿಗಿಳಿಯುತ್ತಿದ್ರು ಹೆದ್ದಾರಿ ಬದಿಯಲ್ಲಿ ಅವೈಜ್ಞಾನಿಕವಾಗಿ ನಿಲ್ಲುತ್ತಿರುವ ವಾಹನಗಳಿಂದ ಅಮಾಯಕರು ಜೀವ ಕಳೆದುಕೊಳ್ತಿದ್ದಾರೆ. ಇನ್ನಾದ್ರು ಹೆದ್ದಾರಿ ಪ್ರಾಧಿಕಾರ ಹಾಗೂ ಸ್ಥಳೀಯ ಸಂಚಾರಿ ಪೊಲೀಸರು ಎಚ್ಚೆತ್ತು ಹೆದ್ದಾರಿ ಬದಿಯಲ್ಲಿನ ಲಾರಿಗಳನ್ನ ತೆರವುಗೊಳಿಸುವ ಮೂಲಕ ಅಪಘಾತಗಳಿಗೆ ಬ್ರೇಕ್ ಹಾಕುವ ಕೆಲಸ ಮಾಡಬೇಕಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್
ಬಿಜೆಪಿ ಹೈಕಮಾಂಡ್​ಗೆ ಬ್ಲಾಕ್​ಮೇಲ್ ತಂತ್ರ ಗೊತ್ತಾಗಿದೆ: ಯತ್ನಾಳ್