ಮಂತ್ರಿಯಾಗೂ ಕನಸನ್ನು ಜೂನ್ ತಿಂಗಳಿಗೆ ಮುಂದೂಡಿದ MTB!

ಬೆಂಗಳೂರು ಗ್ರಾಮಾಂತರ: ಮಂತ್ರಿಯಾಗೂ ಕನಸು ಕಂಡಿದ್ದ ಎಂಟಿಬಿ ನಾಗರಾಜ್ ಮಂತ್ರಿ ಸ್ಥಾನ ಸಿಗದೆ ಹತಾಶರಾಗಿದ್ದು, ಪದೇ ಪದೇ ಸಿಎಂ ಯಡಿಯೂರಪ್ಪನವರ ಮನೆ ಬಾಗಿಲು ಬಡಿಯುತ್ತಿದ್ದಾರೆ. ಸದ್ಯ ತಮಗೆ ತಾವೇ ಸಮಾಧಾನವನ್ನೂ ಮಾಡಿಕೊಂಡಿದ್ದಾರೆ. ನಿನ್ನೆ ಸಿಎಂ ಯಡಿಯೂರಪ್ಪ ಜೊತೆ 35 ನಿಮಿಷ ಸುದೀರ್ಘ ಚರ್ಚೆ ಮಾಡಿರುವ ಎಂಟಿಬಿ ಸದ್ಯ ಕೊಂಚ ನಿರಾಳರಾಗಿದ್ದಾರೆ. ಮೇ ಅಥವಾ ಜೂನ್‌ನಲ್ಲಿ 7 ಎಂಎಲ್‌ಸಿ ಸ್ಥಾನ ತೆರವಾಗಲಿದೆ. ಆಗ ನನಗೂ ಮತ್ತು ವಿಶ್ವನಾಥ್‌ಗೆ ಮಂತ್ರಿ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು […]

ಮಂತ್ರಿಯಾಗೂ ಕನಸನ್ನು ಜೂನ್ ತಿಂಗಳಿಗೆ ಮುಂದೂಡಿದ MTB!
ಸಾಧು ಶ್ರೀನಾಥ್​

Updated on: Feb 03, 2020 | 12:45 PM

ಬೆಂಗಳೂರು ಗ್ರಾಮಾಂತರ: ಮಂತ್ರಿಯಾಗೂ ಕನಸು ಕಂಡಿದ್ದ ಎಂಟಿಬಿ ನಾಗರಾಜ್ ಮಂತ್ರಿ ಸ್ಥಾನ ಸಿಗದೆ ಹತಾಶರಾಗಿದ್ದು, ಪದೇ ಪದೇ ಸಿಎಂ ಯಡಿಯೂರಪ್ಪನವರ ಮನೆ ಬಾಗಿಲು ಬಡಿಯುತ್ತಿದ್ದಾರೆ. ಸದ್ಯ ತಮಗೆ ತಾವೇ ಸಮಾಧಾನವನ್ನೂ ಮಾಡಿಕೊಂಡಿದ್ದಾರೆ. ನಿನ್ನೆ ಸಿಎಂ ಯಡಿಯೂರಪ್ಪ ಜೊತೆ 35 ನಿಮಿಷ ಸುದೀರ್ಘ ಚರ್ಚೆ ಮಾಡಿರುವ ಎಂಟಿಬಿ ಸದ್ಯ ಕೊಂಚ ನಿರಾಳರಾಗಿದ್ದಾರೆ.

ಮೇ ಅಥವಾ ಜೂನ್‌ನಲ್ಲಿ 7 ಎಂಎಲ್‌ಸಿ ಸ್ಥಾನ ತೆರವಾಗಲಿದೆ. ಆಗ ನನಗೂ ಮತ್ತು ವಿಶ್ವನಾಥ್‌ಗೆ ಮಂತ್ರಿ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಹೊಸಕೋಟೆಯಲ್ಲಿ ಮಾಜಿ ಸಚಿವ MTB ನಾಗರಾಜ್ ಹೇಳಿದ್ದಾರೆ.

ಈಗ ಗೆದ್ದ 10 ನೂತನ ಶಾಸಕರು ಮತ್ತು ಮೂವರು ಮೂಲ ಬಿಜೆಪಿಗರಿಗೆ ಮಾತ್ರ ಮಂತ್ರಿ ಮಾಡಲಿದ್ದಾರೆ. ಶಂಕರ್ ಸೇರಿದಂತೆ ನಮ್ಮಿಬ್ಬರಿಗೆ ಮೇ ಅಥವಾ ಜೂನ್‌ನಲ್ಲಿ ಸ್ಥಾನಮಾನ ನೀಡ್ತಾರೆ ಎಂದು ಸಿಎಂ ತಿಳಿಸಿದ್ದಾರೆ. ಯಡಿಯೂರಪ್ಪ ನಮ್ಮ ನಾಯಕರು. ಅವರು ಹೇಳಿದ ಮಾತನ್ನ ಚಾಚೂ ತಪ್ಪದೆ ಪಾಲಿಸುತ್ತಾರೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಲ್ಲರಿಗೂ ಅಧಿಕಾರ ಸಿಗಲಿದೆ ಎಂದು ಮಾಜಿ ಸಚಿವ MTB ನಾಗರಾಜ್ ಸಿಎಂ ಯಡಿಯೂರಪ್ಪನನ್ನು ಹೊಗಳಿದ್ದಾರೆ.

Published On - 12:15 pm, Mon, 3 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us