AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಾಂತರ ಮೌಲ್ಯದ 200ಕ್ಕೂ ಅಧಿಕ ದಾಳಿಂಬೆ ಗಿಡಗಳನ್ನ ಕತ್ತರಿಸಿದ ಕಿಡಿಗೇಡಿಗಳು; ಕಂಗಾಲಾದ ರೈತ ಕುಟುಂಬ

ಆ ರೈತನಿಗೆ ಇರುವುದು ಅಲ್ಪ ಸ್ವಲ್ಪ ಜಮೀನು. ಆದ್ರೆ, ಜೀವನದಲ್ಲಿ ಕೃಷಿಯನ್ನೇ ಕಾಯಕವಾಗಿ ಮಾಡಿಕೊಂಡಿದ್ದ ರೈತ, ದಾಳಿಂಬೆ ಬೆಳೆಯಲ್ಲಿ ಸಾಧನೆ ಮಾಡಬೇಕೆಂಬ ಹಂಬಲದಿಂದ ರೈತನ ಅಕ್ಕಪಕ್ಕದ ಜಮೀನನ್ನು ಲೀಸ್​ಗೆ ತೆಗೆದುಕೊಂಡು ದಾಳಿಂಬೆ ಗಿಡಗಳನ್ನು ಬೆಳೆದಿದ್ದ. ಆದ್ರೆ, ಯಾರೋ ಕಿಡಿಗೇಡಿಗಳು ರೈತನ ದಾಳಿಂಬೆ ಗಿಡಗಳನ್ನು ಕಟಾವು ಮಾಡಿ ವಿಕೃತಿ ಮೆರೆದಿದ್ದು, ದಾಳಿಂಬೆ ಬೆಳೆದ ರೈತ ಕಂಗಲಾಗಿದ್ದಾನೆ.

ಲಕ್ಷಾಂತರ ಮೌಲ್ಯದ 200ಕ್ಕೂ ಅಧಿಕ ದಾಳಿಂಬೆ ಗಿಡಗಳನ್ನ ಕತ್ತರಿಸಿದ ಕಿಡಿಗೇಡಿಗಳು; ಕಂಗಾಲಾದ ರೈತ ಕುಟುಂಬ
ದೇವನಹಳ್ಳಿಯಲ್ಲಿ ದಾಳಿಂಬೆ ಬೆಳೆ ನಾಶ; ರೈತ ಕುಟುಂಬ ಕಂಗಾಲು
ನವೀನ್ ಕುಮಾರ್ ಟಿ
| Edited By: |

Updated on: Nov 19, 2023 | 8:44 PM

Share

ಬೆಂಗಳೂರು ಗ್ರಾಮಾಂತರ, ನ.19: ಸಂಪಾಗಿ ಬೆಳೆದು ನಿಂತಿದ್ದ ದಾಳಿಂಬೆ(Pomegranate) ಗಿಡವನ್ನು ಕಿಡಿಗೇಡಿಗಳು ಕತ್ತರಿಸಿದ ಘಟನೆ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ(Devanahalli) ತಾಲೂಕಿನ ಹ್ಯಾಡಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವೆಂಕಟೇಗೌಡ ಎಂಬ ರೈತನಿಗೆ ಇರುವುದು 11 ಗುಂಟೆ ಜಮೀನು ಮಾತ್ರ. ಆದ್ರೆ, ಕೃಷಿಯಲ್ಲೆ ಮೇಲೆ ಬರಬೇಕು ಎಂಬ ಚಲದಿಂದ ತನ್ನ ಜಮೀನಿನ ಪಕ್ಕದ ಬೇರೆಯವರ ಜಮೀನನ್ನು ಲೀಸ್​ಗೆ ತೆಗೆದುಕೊಂಡು ಸುಮಾರು ಒಂದು ಎಕರೆ ಜಮೀನಿನಲ್ಲಿ ದಾಳಿಂಬೆ ಬೆಳೆಯನ್ನು ಬೆಳೆದಿದ್ದಾನೆ. ಇನ್ನು ಸಂಪಾಗಿ ಬಂದಿದ್ದ ದಾಳಿಂಬೆಗೆ ಯಾರೋ ಕಿಡಿಗೇಡಿಗಳ ಕಣ್ಣು ಬಿದ್ದಿದ್ದು, ರಾತ್ರೋರಾತ್ರಿ ರೈತನ ತೋಟಕ್ಕೆ ನುಗ್ಗಿದ ಕಿಡಿಗೇಡಿಗಳು ದಾಳಿಂಬೆ ಗಿಡ ಬುಡಗಳನ್ನು ಕಟಾವು ಮಾಡಿ ಎಸ್ಕೆಪ್ ಆಗಿದ್ದಾರೆ.

ಒಂದು ಎಕರೆ ಭೂಮಿಯಲ್ಲಿ ಸುಮಾರು 400 ದಾಳಿಂಬೆ ಗಿಡಗಳನ್ನು ರೈತ ವೆಂಕಟೇಗೌಡ ಬೆಳೆದಿದ್ದರು. ಸುಮಾರು ಒಂದು ವರ್ಷ 2 ತಿಂಗಳಿನ ದಾಳಿಂಬೆ ಗಿಡ ಇದಾಗಿದ್ದು, ಒಂಬತ್ತು ತಿಂಗಳು ಹೋಗಿದ್ದರೆ ಒಳ್ಳೆಯ ಫಸಲು ಸಿಕ್ಕುತ್ತಿತ್ತು. ಆದ್ರೆ, ಕಿಡಿಗೇಡಿಗಳು 200 ಗಿಡಗಳ ಕಟ್ ಮಾಡಿದ್ದಾರೆ. ಇದರಿಂದ ರೈತನಿಗೆ ಸುಮಾರು ಐದರಿಂದ 6 ಲಕ್ಷ ಲಾಸ್ ಆಗಿದೆ. ದಾಳಿಂಬೆ ಗಿಡಗಳನ್ನ ಪೋಷಿಸಲು ವರ್ಷಾನುಗಟ್ಟಲೇ ಔಷಧಿ, ಕಳೆ ತೆಗೆಯುವುದು ಸೇರಿದಂತೆ ಲಕ್ಷಾಂತರ ಬಂಡವಾಳ ಹಾಕಿದ್ದರು. ಆದರೆ, ರಾತ್ರೋರಾತ್ರಿ ಕಿಡಿಗೇಡಿಗಳು ದಾಳಿಂಬೆ ನಾಶದಿಂದ ರೈತನ ಕುಟುಂಬಕ್ಕೆ ದಿಕ್ಕು ತೋಚದಂತಾಗಿದೆ. ಕಟಾವು ಮಾಡಿರೋ ಗಿಡಗಳನ್ನ ಹಿಡಿದುಕೊಂಡು ರೈತನ ಕುಟುಂಬ ಕಣ್ಣಿರಾಕಿದೆ. ಇನ್ನು ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಬರಗಾಲದಲ್ಲೂ ಹನಿ ಹನಿ ನೀರು ಉಳಿಸಿ ದಾಳಿಂಬೆ ಬೆಳೆದಿದ್ದ ವಿಜಯಪುರ ರೈತ: ರಾತ್ರೋರಾತ್ರಿ ನಾಲ್ಕಾರು ಲಕ್ಷ ಮೌಲ್ಯದ ದಾಳಿಂಬೆ ಕದ್ದ ಖದೀಮರು!

ಒಟ್ಟಾರೆ ಸಾಲ ಸೋಲ ಮಾಡಿ ಒಳ್ಳೆಯ ದಾಳಿಂಬೆ ಬೆಳೆಯಬೇಕು ಎಂದು ಅಂದುಕೊಂಡಿದ್ದ ರೈತ ವೆಂಕಟೇಗೌಡ ಕುಟುಂಬ, ಕಿಡಿಗೇಡಿಗಳ ಕೃತ್ಯದಿಂದ ತತ್ತರಿಸಿದ್ದಾರೆ. ಈ ಸಂಬಂಧ ಚನ್ನರಾಯಪಟ್ಟಣ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ತನಿಖೆಯ ನಂತರ ದಾಳಿಂಬೆ ನಾಶ ಮಾಡಿದವರು ಯಾರು? ಕಾರಣವೇನು ಎಂದು ಗೊತ್ತಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ