AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧಕ್ಕೆ ಗುಡ್ ಬೈ ಹೇಳಿದ ಯುವಕನ ಮೇಲೆ ಮಹಿಳೆಯಿಂದಲೇ ಮಾರಣಾಂತಿಕ ಹಲ್ಲೆ!

ಅನೈತಿಕ ಸಂಬಂಧ ಕೊನೆಗೊಳಿಸಿದ್ದಕ್ಕೆ ಯುವಕನ ಮೇಲೆ ಮಹಿಳೆಯೊಬ್ಬಳು ಗ್ಯಾಂಗ್ ಕಟ್ಟಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸಾರ್ವಜನಿಕರ ಮಧ್ಯಪ್ರವೇಶದಿಂದ ಯುವಕ ಪಾರಾಗಿದ್ದು, ಪೊಲೀಸರು ಮಹಿಳೆ ಸೇರಿ ಇಬ್ಬರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಅನೈತಿಕ ಸಂಬಂಧಕ್ಕೆ ಗುಡ್ ಬೈ ಹೇಳಿದ ಯುವಕನ ಮೇಲೆ ಮಹಿಳೆಯಿಂದಲೇ ಮಾರಣಾಂತಿಕ ಹಲ್ಲೆ!
ಅನೈತಿಕ ಸಂಬಂಧಕ್ಕೆ ಗುಡ್ ಬೈ ಹೇಳಿದ ಯುವಕನ ಮೇಲೆ ಮಹಿಳೆಯಿಂದಲೇ ಮಾರಣಾಂತಿಕ ಹಲ್ಲೆ!
ನವೀನ್ ಕುಮಾರ್ ಟಿ
| Edited By: |

Updated on: Dec 22, 2025 | 12:14 PM

Share

ದೇವನಹಳ್ಳಿ, ಡಿಸೆಂಬರ್ 22: ಅನೈತಿಕ ಸಂಬಂಧ ಇಟ್ಟುಕೊಂಡು ಸಂಗಾತಿ ಕೈಲಿ ಸಿಕ್ಕಿಬಿದ್ದು ಒದೆ ತಿಂದಿರುವ ಸಾಕಷ್ಟು ಘಟನೆಗಳು ಬೆಳಕಿಗೆ ಬಂದಿವೆ. ಆದರೆ ಅನೈತಿಕ ಸಂಬಂಧ ಮುಂದುವರೆಸುವುದು ಬೇಡವೆಂದ ಯುವಕನ ಮೇಲೆ ಮಹಿಳೆಯೇ ಗ್ಯಾಂಗ್‌ ಕಟ್ಟಿಕೊಂಡು ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಗ್ಯಾಂಗ್ ಕಟ್ಟಿ ದಾಳಿ ಮಾಡಿಸಿದ ಮಹಿಳೆ

ಕಾರ್ತಿಕ್ ಎಂಬ ಯುವಕ ದೀಪಾ ಎಂಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಮನೆಯವರ ಬುದ್ದಿವಾದದ ಬಳಿಕ ಆಕೆಯ ಸಹವಾಸವನ್ನೇ ಮಾಡಬಾರದೆಂದು ನಿರ್ಧಾರ ಮಾಡಿ, ಆಕೆಯ ಸಹವಾಸವನ್ನು ಸಂಪೂರ್ಣವಾಗಿ ತೊರೆದಿದ್ದ. ಇದರಿಂದ ಆಕ್ರೋಶಗೊಂಡ ದೀಪಾ, ಆತನ ಮೇಲೆ ಅಟ್ಯಾಕ್ ಮಾಡಿಸಲು ಮುಂದಾಗಿದ್ದಳು. ಡಿಸೆಂಬರ್ 13ರ ಮುಸ್ಸಂಜೆ, ಕಾರ್ತಿಕ್ ಅಂಗಡಿಯೊಂದರಲ್ಲಿದ್ದಾಗ ಕಾರಿನಲ್ಲಿ ಗ್ಯಾಂಗ್ ಕಟ್ಟಿಕೊಂಡು ಬಂದ ದೀಪಾ, ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿಸಿದ್ದಾಳೆ.

ಮಹಿಳೆ ಸೇರಿ ಇಬ್ಬರನ್ನು ಬಂಧಿಸಿದ ಪೊಲೀಸರು

ಘಟನೆ ವೇಳೆ ದೀಪಾ ಕಾರಿನಲ್ಲೇ ಕುಳಿತಿದ್ದರೆ, ಆಕೆಯೊಂದಿಗೆ ಬಂದಿದ್ದ ಆರೋಪಿಗಳು ಅಂಗಡಿಯ ಬಳಿ ಇದ್ದ ಕಾರ್ತಿಕ್ ಮೇಲೆ ಲಾಂಗ್‌ ಹಾಗೂ ಮಚ್ಚುಗಳಿಂದ ದಾಳಿ ನಡೆಸಿದ್ದರು. ಯುವಕನ ಅದೃಷ್ಟವೆಂಬಂತೆ ದಾಳಿಯ ವೇಳೆ ಸಾರ್ವಜನಿಕರು ಗ್ಯಾಂಗ್ ವಿರುದ್ಧ ತಿರುಗಿ ಬಿದ್ದಿದ್ದರು. ಇದರಿಂದ ಭಯಗೊಂಡ ದೀಪಾ ಆ್ಯಂಡ್ ಗ್ಯಾಂಗ್, ಸ್ಥಳದಿಂದ ಪರಾರಿಯಾಗಿದ್ದರು. ಘಟನೆಯ ಕುರಿತು ದೂರು ದಾಖಲಾಗುತ್ತಿದ್ದಂತೆ ದೊಡ್ಡಬೆಳವಂಗಲ ಪೊಲೀಸರು ತನಿಖೆ ಆರಂಭಿಸಿದ್ದು, ಇದೀಗ ಹಲ್ಲೆಗೆ ಸಂಚು ರೂಪಿಸಿ ಎಸ್ಕೇಪ್ ಆಗಿದ್ದ ದೀಪಾ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳ ಪಾತ್ರವಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More