AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧಕ್ಕೆ ಗುಡ್ ಬೈ ಹೇಳಿದ ಯುವಕನ ಮೇಲೆ ಮಹಿಳೆಯಿಂದಲೇ ಮಾರಣಾಂತಿಕ ಹಲ್ಲೆ!

ಅನೈತಿಕ ಸಂಬಂಧ ಕೊನೆಗೊಳಿಸಿದ್ದಕ್ಕೆ ಯುವಕನ ಮೇಲೆ ಮಹಿಳೆಯೊಬ್ಬಳು ಗ್ಯಾಂಗ್ ಕಟ್ಟಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸಾರ್ವಜನಿಕರ ಮಧ್ಯಪ್ರವೇಶದಿಂದ ಯುವಕ ಪಾರಾಗಿದ್ದು, ಪೊಲೀಸರು ಮಹಿಳೆ ಸೇರಿ ಇಬ್ಬರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಅನೈತಿಕ ಸಂಬಂಧಕ್ಕೆ ಗುಡ್ ಬೈ ಹೇಳಿದ ಯುವಕನ ಮೇಲೆ ಮಹಿಳೆಯಿಂದಲೇ ಮಾರಣಾಂತಿಕ ಹಲ್ಲೆ!
ಅನೈತಿಕ ಸಂಬಂಧಕ್ಕೆ ಗುಡ್ ಬೈ ಹೇಳಿದ ಯುವಕನ ಮೇಲೆ ಮಹಿಳೆಯಿಂದಲೇ ಮಾರಣಾಂತಿಕ ಹಲ್ಲೆ!
ನವೀನ್ ಕುಮಾರ್ ಟಿ
| Edited By: |

Updated on: Dec 22, 2025 | 12:14 PM

Share

ದೇವನಹಳ್ಳಿ, ಡಿಸೆಂಬರ್ 22: ಅನೈತಿಕ ಸಂಬಂಧ ಇಟ್ಟುಕೊಂಡು ಸಂಗಾತಿ ಕೈಲಿ ಸಿಕ್ಕಿಬಿದ್ದು ಒದೆ ತಿಂದಿರುವ ಸಾಕಷ್ಟು ಘಟನೆಗಳು ಬೆಳಕಿಗೆ ಬಂದಿವೆ. ಆದರೆ ಅನೈತಿಕ ಸಂಬಂಧ ಮುಂದುವರೆಸುವುದು ಬೇಡವೆಂದ ಯುವಕನ ಮೇಲೆ ಮಹಿಳೆಯೇ ಗ್ಯಾಂಗ್‌ ಕಟ್ಟಿಕೊಂಡು ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಗ್ಯಾಂಗ್ ಕಟ್ಟಿ ದಾಳಿ ಮಾಡಿಸಿದ ಮಹಿಳೆ

ಕಾರ್ತಿಕ್ ಎಂಬ ಯುವಕ ದೀಪಾ ಎಂಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಮನೆಯವರ ಬುದ್ದಿವಾದದ ಬಳಿಕ ಆಕೆಯ ಸಹವಾಸವನ್ನೇ ಮಾಡಬಾರದೆಂದು ನಿರ್ಧಾರ ಮಾಡಿ, ಆಕೆಯ ಸಹವಾಸವನ್ನು ಸಂಪೂರ್ಣವಾಗಿ ತೊರೆದಿದ್ದ. ಇದರಿಂದ ಆಕ್ರೋಶಗೊಂಡ ದೀಪಾ, ಆತನ ಮೇಲೆ ಅಟ್ಯಾಕ್ ಮಾಡಿಸಲು ಮುಂದಾಗಿದ್ದಳು. ಡಿಸೆಂಬರ್ 13ರ ಮುಸ್ಸಂಜೆ, ಕಾರ್ತಿಕ್ ಅಂಗಡಿಯೊಂದರಲ್ಲಿದ್ದಾಗ ಕಾರಿನಲ್ಲಿ ಗ್ಯಾಂಗ್ ಕಟ್ಟಿಕೊಂಡು ಬಂದ ದೀಪಾ, ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿಸಿದ್ದಾಳೆ.

ಮಹಿಳೆ ಸೇರಿ ಇಬ್ಬರನ್ನು ಬಂಧಿಸಿದ ಪೊಲೀಸರು

ಘಟನೆ ವೇಳೆ ದೀಪಾ ಕಾರಿನಲ್ಲೇ ಕುಳಿತಿದ್ದರೆ, ಆಕೆಯೊಂದಿಗೆ ಬಂದಿದ್ದ ಆರೋಪಿಗಳು ಅಂಗಡಿಯ ಬಳಿ ಇದ್ದ ಕಾರ್ತಿಕ್ ಮೇಲೆ ಲಾಂಗ್‌ ಹಾಗೂ ಮಚ್ಚುಗಳಿಂದ ದಾಳಿ ನಡೆಸಿದ್ದರು. ಯುವಕನ ಅದೃಷ್ಟವೆಂಬಂತೆ ದಾಳಿಯ ವೇಳೆ ಸಾರ್ವಜನಿಕರು ಗ್ಯಾಂಗ್ ವಿರುದ್ಧ ತಿರುಗಿ ಬಿದ್ದಿದ್ದರು. ಇದರಿಂದ ಭಯಗೊಂಡ ದೀಪಾ ಆ್ಯಂಡ್ ಗ್ಯಾಂಗ್, ಸ್ಥಳದಿಂದ ಪರಾರಿಯಾಗಿದ್ದರು. ಘಟನೆಯ ಕುರಿತು ದೂರು ದಾಖಲಾಗುತ್ತಿದ್ದಂತೆ ದೊಡ್ಡಬೆಳವಂಗಲ ಪೊಲೀಸರು ತನಿಖೆ ಆರಂಭಿಸಿದ್ದು, ಇದೀಗ ಹಲ್ಲೆಗೆ ಸಂಚು ರೂಪಿಸಿ ಎಸ್ಕೇಪ್ ಆಗಿದ್ದ ದೀಪಾ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳ ಪಾತ್ರವಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ