AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಶೀಲನೆಗೆ ಹೋದಾಗಲೇ ಹೊಸಕೋಟೆಯಲ್ಲಿ ಭ್ರೂಣ ಹತ್ಯೆ ಪತ್ತೆ: ಎಸ್​​ಪಿಜಿ ಆಸ್ಪತ್ರೆ ಸೀಜ್, ರೋಗಿಗಳು ಶಿಫ್ಟ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯಲ್ಲಿ ಮೈಸೂರು ಮಾದರಿಯಲ್ಲಿ ಮತ್ತೊಂದು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ದಾಖಲಾತಿ ಪರಿಶೀಲನೆಗೆ ಬಂದಿದ್ದ ‌ವೇಳೆ ಲೈವ್​ನಲ್ಲಿ ಭ್ರೂಣ ಹತ್ಯೆ ಪತ್ತೆ ಆಗಿದೆ. ಆಸ್ಪತ್ರೆಯಲ್ಲಿ 5 ತಿಂಗಳ ಗರ್ಭಿಣಿಗೆ ಗರ್ಭಪಾತ ಮಾಡಿ ಭ್ರೂಣ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

ಪರಿಶೀಲನೆಗೆ ಹೋದಾಗಲೇ ಹೊಸಕೋಟೆಯಲ್ಲಿ ಭ್ರೂಣ ಹತ್ಯೆ ಪತ್ತೆ: ಎಸ್​​ಪಿಜಿ ಆಸ್ಪತ್ರೆ ಸೀಜ್, ರೋಗಿಗಳು ಶಿಫ್ಟ್
ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ
ನವೀನ್ ಕುಮಾರ್ ಟಿ
| Edited By: |

Updated on:Dec 13, 2023 | 9:39 PM

Share

ದೇವನಹಳ್ಳಿ, ಡಿಸೆಂಬರ್​​ 13: ಮೈಸೂರು ಮಾದರಿಯಲ್ಲಿ ಮತ್ತೊಂದು ಭ್ರೂಣ ಹತ್ಯೆ ಪ್ರಕರಣ (Foeticide) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಕ್ರಾಸ್ ಬಳಿ ಬೆಳಕಿಗೆ ಬಂದಿದೆ.  ವೈದ್ಯ ಶ್ರೀನಿವಾಸ್​ಗೆ ಸೇರಿದ SPG ಆಸ್ಪತ್ರೆ, ಡಯಾಗ್ನೋಸ್ಟಿಕ್ ಸೆಂಟರ್​ನಲ್ಲಿ ದಾಖಲಾತಿ ಪರಿಶೀಲನೆಗೆ ಬಂದಿದ್ದ ‌ವೇಳೆ ಲೈವ್​ನಲ್ಲಿ ಭ್ರೂಣ ಹತ್ಯೆ ಪತ್ತೆ ಆಗಿದೆ. ಆಸ್ಪತ್ರೆಯಲ್ಲಿ 5 ತಿಂಗಳ ಗರ್ಭಿಣಿಗೆ ಗರ್ಭಪಾತ ಮಾಡಿ ಭ್ರೂಣ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

ಕಳೆದ 1 ವಾರದಿಂದ ಆಸ್ಪತ್ರೆ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಈ ವೇಳೆ ಹಲವು ದಾಖಲೆಗಳ ಬಗ್ಗೆ ಆರೋಗ್ಯ ಅಧಿಕಾರಿಗಳಿಗೆ ಅನುಮಾನ ಬಂದಿದ್ದರಿಂದ ಹೀಗಾಗಿ ಇಂದು ಮತ್ತೊಮ್ಮೆ ಪರಿಶೀಲನೆಗೆ ಅಧಿಕಾರಿಗಳ ತಂಡ ಆಗಮಿಸಿದೆ. ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆ ಒಳಪ್ರವೇಶಿಸುತ್ತಿದ್ದಂತೆ ಈ ವೇಳೆ ಗರ್ಭಪಾತ ಮಾಡಿಸಿಕೊಂಡು ಮಹಿಳೆ ಹೊರಬಂದಿದ್ದಾಳೆ.

ಇದನ್ನೂ ಓದಿ: ಮಂಡ್ಯದಲ್ಲಿ ಭ್ರೂಣಲಿಂಗ ಹತ್ಯೆ ಕೇಸ್​: ಸ್ಯ್ಕಾನಿಂಗ್ ಸೆಂಟರ್​ಗೆ ಬೀಗ ಜಡಿದ ಅಧಿಕಾರಿಗಳು

ಕೂಡಲೇ ಅಲರ್ಟ್ ಆದ ಅಧಿಕಾರಿಗಳಿಂದ ಮತ್ತಷ್ಟು ತೀವ್ರ ತನಿಖೆ ಮಾಡಲಾಗಿದ್ದು, ಸ್ಥಳಕ್ಕೆ ರಾಜ್ಯ ಆರೋಗ್ಯ ಇಲಾಖೆಯ ನೋಡಲ್ ಅಧಿಕಾರಿ ವಿವೇಕ್ ದೊರೆ ಹಾಗೂ ಶ್ರೀನಿವಾಸ್ ಭೇಟಿ ನೀಡಿದ್ದು, ಆಸ್ಪತ್ರೆಯಲ್ಲಿನ ಸಂಪೂರ್ಣ ದಾಖಲೆ ಪರಿಶೀಲಿಸಿದ್ದಾರೆ.

ಅಕ್ರಮ ಸ್ಕ್ಯಾನಿಂಗ್ ಮಿಷ‌ನ್ ಪತ್ತೆ

2 ದಿನದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ್ ‌ನೇತೃತ್ವದಲ್ಲಿ ದಾಳಿ ಮಾಡಿದ್ದು, ಖಾಸಗಿ ಕ್ಲಿನಿಕ್​ನಲ್ಲಿ ಅಕ್ರಮ ಸ್ಕ್ಯಾನಿಂಗ್ ಮಿಷ‌ನ್ ಪತ್ತೆ ಆಗಿದೆ. ಕೆಪಿಎಂಇ ಆಕ್ಟ್ ಪಾಲನೆ ಬಗ್ಗೆ ಪರಿಶೀಲನೆಗೆ ಬಂದಿದ್ದ ವೇಳೆ ಮಿಷನ್ ಪತ್ತೆಯಾಗಿದೆ. ಸ್ಕ್ಯಾನಿಂಗ್ ಮಿಷನ್ ಹಿನ್ನೆಲೆ ಹುಡುಕಿ ಹೊರಟಾಗ ಭ್ರೂಣ ಹತ್ಯೆ ಬಯಲಾಗಿದೆ.

ಇದನ್ನೂ ಓದಿ: ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್ ಬೆಂಗಳೂರಿನಲ್ಲಿ ನೇಣುಬಿಗಿದು ಆತ್ಮಹತ್ಯೆ

ರಿಜಿಸ್ಟರ್ ಮಾಡಿಸದೆ‌ ಅಕ್ರಮವಾಗಿ ಸ್ಕ್ಯಾನಿಂಗ್ ಮಿಷನ್ ಇಟ್ಟುಕೊಂಡಿದ್ದರು. ಹೀಗಾಗಿ ಸ್ಕ್ಯಾನ್ ಬಗ್ಗೆ ಇಂದು ಅಧಿಕಾರಿಗಳು ಪರಿಶೀಲನೆಗೆ ಬಂದಿದ್ದರು. ಈ ವೇಳೆ ಆಪರೇಷನ್ ಥಿಯೇಟರ್​ನಲ್ಲಿ 16 ವಾರದ ಹೆಣ್ಣು ಭ್ರೂಣ ಪತ್ತೆಯಾಗಿದೆ. ಬೆಳಗ್ಗೆಯಷ್ಟೇ ಭ್ರೂಣಹತ್ಯೆ ಮಾಡಿ ಕವರನಲ್ಲಿ ಸುತ್ತಿಟ್ಟಿದ್ದಾರೆ. ಹೀಗಾಗಿ ಭ್ರೂಣವನ್ನ ವಶಪಡಿಸಿಕೊಂಡು ಅಧಿಕಾರಿಗಳಿಂದ ತನಿಖೆ ಮಾಡಲಾಗುತ್ತಿದೆ. ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಗೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಿಂದ ದೂರು ನೀಡಲಾಗಿದೆ.

ಸೀಜ್ ಮಾಡಲು ಸಿದ್ಧತೆ

ಭ್ರೂಣ ಹತ್ಯೆ ಹಿನ್ನೆಲೆ ಎಸ್​ಪಿಜಿ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲಿಸಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಆಸ್ಪತ್ರೆ ಸೀಜ್ ಮಾಡಲು ತಯಾರಿ ಮಾಡಲಾಗುತ್ತಿದೆ. ಸದ್ಯ ಎಸ್​ಪಿಜಿ ಆಸ್ಪತ್ರೆಯಲ್ಲಿನ ರೋಗಿಗಳನ್ನು ಅವರಿಗೆ ಬೇಕಾದ ಆಸ್ಪತ್ರೆಗಳಿಗೆ ಸಿಬ್ಬಂದಿ ಕಳಿಹಿಸಿದ್ದಾರೆ. ಮಕ್ಕಳ ಜೊತೆ ಆಟೋ, ಬೈಕ್​ನಲ್ಲಿ ರೋಗಿಗಳು ಬೇರೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಭ್ರೂಣ ಹತ್ಯೆ ಪ್ರಕರಣ ಬಯಲಾಗುತ್ತಿದ್ದಂತೆ ವೈದ್ಯ ಶ್ರೀನಿವಾಸ್ ಪರಾರಿ ಆಗಿದ್ದಾರೆ.

DHO ಸುನೀಲ್ ಕುಮಾರ್ ಹೇಳಿದ್ದಿಷ್ಟು

ಟಿವಿ9ಗೆ ಬೆಂಗಳೂರು ಗ್ರಾಮಾಂತರ DHO ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಎಸ್​ಪಿಜಿ ಆಸ್ಪತ್ರೆಯಲ್ಲಿ ಅನಧಿಕೃತ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರವಿತ್ತು. ಬೆಂಗಳೂರು ಗ್ರಾಮಾಂತರ ಆರೋಗ್ಯ ಇಲಾಖೆ ಸಿಬ್ಬಂದಿ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಆಪರೇಷನ್ ಥಿಯೇಟರ್​ನಲ್ಲಿ ಗಾರ್ಬೇಜ್​ ಜೊತೆ ಭ್ರೂಣವಿತ್ತು. ಒಟಿಯಲ್ಲಿ ಸಿಕ್ಕ ಭ್ರೂಣವನ್ನು ಆರೋಗ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅದು 16ರಿಂದ 20 ವಾರಗಳ ಭ್ರೂಣ ಎಂಬ ಪ್ರಾಥಮಿಕ ಮಾಹಿತಿಯಿದೆ. ಎಸ್​ಪಿಜಿ ಆಸ್ಪತ್ರೆ ಮುಖ್ಯಸ್ಥ, ವೈದ್ಯ ಡಾ.ಶ್ರೀನಿವಾಸ್ ನಾಪತ್ತೆಯಾಗಿದ್ದಾರೆ. ಪತ್ತೆಗಾಗಿ ಬೆಂಗಳೂರು ಗ್ರಾಮಾಂತರ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿಗೆ ಮನವಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:35 pm, Wed, 13 December 23

Follow Us
ನವೀನ್ ಕುಮಾರ್ ಟಿ
ನವೀನ್ ಕುಮಾರ್ ಟಿ

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್