AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂಬಾರ್ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ: ಪತ್ನಿ ಸಾವಿನಲ್ಲಿ ಅಂತ್ಯ, ಆಗಿದ್ದೇನು?

ದೇವನಹಳ್ಳಿ ತಾಲೂಕಿನ ಸಾವನಕನಹಳ್ಳಿಯಲ್ಲಿ 38 ವರ್ಷದ ನಾಗರತ್ನ ಎಂಬ ಗೃಹಿಣಿ ಸಾವನ್ನಪ್ಪಿದ್ದಾರೆ. ಸಾಂಬಾರ್ ವಿಚಾರವಾಗಿ ಉಂಟಾದ ಜಗಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತಿ ಹಾಗೂ ಮಕ್ಕಳು ಹೇಳಿದ್ದಾರೆ. ಆದರೆ, ಮೃತಳ ಕುಟುಂಬಸ್ಥರು ಪತಿಯಿಂದ ಕೊಲೆಯಾಗಿದೆ ಎಂದು ಆರೋಪಿಸಿದ್ದಾರೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂಬಾರ್ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ: ಪತ್ನಿ ಸಾವಿನಲ್ಲಿ ಅಂತ್ಯ, ಆಗಿದ್ದೇನು?
ಮೃತ ನಾಗರತ್ನ
ನವೀನ್ ಕುಮಾರ್ ಟಿ
| Edited By: |

Updated on: May 31, 2025 | 11:44 AM

Share

ದೇವನಹಳ್ಳಿ, ಮೇ 31: ಸಾಂಬಾರ್ ವಿಚಾರಕ್ಕೆ ದಂಪತಿ (couple) ನಡುವೆ ಉಂಟಾದ ಕಲಹ ಪತ್ನಿ ಸಾವಿನಲ್ಲಿ (death) ಅಂತ್ಯವಾಗಿರುವಂತಹ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರತ್ನ (38) ಸಾವನ್ನಪಿದ ಗೃಹಿಣಿ. ಮನೆಯಲ್ಲಿ ನೇಣಿ ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿದೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಮಗಳದ್ದು ಆತ್ಮಹತ್ಯೆಯಲ್ಲ‌, ಕೊಲೆ ಅಂತ ಮಹಿಳೆಯ ತವರು ಮನೆಯವರ ಆರೋಪ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಂಡ ಕೊಲೆ ಮಾಡಿದ್ದಾನೆ ಅಂತ ಮೃತಳ ಅಣ್ಣ ಮತ್ತು ತಾಯಿ ಆರೋಪಿಸಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಸಾಂಬಾರ್ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತ ಗಂಡ ಮತ್ತು ಮಕ್ಕಳು ಹೇಳುತ್ತಿದ್ದಾರೆ.

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗುಂಡು ಹಾರಿಸಿಕೊಂಡು ಮಾಜಿ ಯೋಧ ಆತ್ಮಹತ್ಯೆ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಾಜಿ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮಡಿಕೇರಿಯ ಮಹಿಳಾ ಸಮಾಜದ ಗೋದಾಮಿಯಲ್ಲಿ ನಡೆದಿದೆ. ದೇವಜನ ಜಗದೀಶ್(56) ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ.

ಇದನ್ನೂ ಓದಿ
Image
ಇನ್ಮುಂದೆ ಗುಟ್ಕಾ ಉಗುಳುವುದು, ಸಿಗರೇಟ್ ಸೇದಿದ್ರೆ 4 ಪಟ್ಟು ದಂಡ
Image
ಹಿಟ್ ಆ್ಯಂಡ್​ ರನ್​​ಗೆ ತಂದೆ-ಮಗಳು ಬಲಿ: ದೇವಸ್ಥಾನಕ್ಕೆ ಹೊರಟವರು ಮಸಣಕ್ಕೆ
Image
ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್:ಹಲವಡೆ ಲೋಕಾಯುಕ್ತ ದಾಳಿ
Image
ಗುಡ್ಡಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ, ಅಧಿಕಾರಿಗಳ ವಿರುದ್ಧ ದೂರು

ಇದನ್ನೂ ಓದಿ: ಬೆಂಗಳೂರು: ಪೊಲೀಸರಿಗೇ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಗ್ಯಾಂಗ್ ಸಿಕ್ಕಿಬಿತ್ತು, ಮಾಡಿದ್ದೇನು ಗೊತ್ತಾ?

ಆತ್ಮಹತ್ಯೆಗೂ ಮುನ್ನ ಡೆತ್​ನೋಟ್ ಬರೆದಿಟ್ಟಿರುವ ಜಗದೀಶ್, ಆರ್ಥಿಕ ಸಮಸ್ಯೆ, ಮೈಕ್ರೋ ಫೈನಾನ್ಸ್​ನಿಂದ ಕಿರಿಕಿರಿ ಎಂದು ಉಲ್ಲೇಖಿಸಿದ್ದಾರೆ. ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡು ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ. ವಿರೂಪಾಕ್ಷಯ್ಯ ಚಿಕ್ಕಮಠ (40) ಆತ್ಮಹತ್ಯೆ ಮಾಡಿಕೊಂಡ ರೈತ. ಕೆವಿಜಿ ಬ್ಯಾಂಕನಲ್ಲಿ 2 ಲಕ್ಷ 50 ಸಾವಿರ ರೂ, ಕೈಗಡವಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಮಕ್ಕಳ ಜಗಳ ಬಿಡಿಸಲು ಹೋದ ತಾಯಿ ದುರಂತ ಸಾವು, ಜನ್ಮ ಕೊಟ್ಟವಳಿಗೆ ಇರಿದು ಕೊಂದ ಮಗ

ಮೂರು ಎಕರೆ ಜಮೀನಲ್ಲಿ ಸರಿಯಾಗಿ ಬೆಳೆಬಾರದಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ದೊರೆತಿದೆ. ಗ್ರಾಮದ ಹೊರ ವಲಯದ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ದರ್ಶನ್ ಅರ್ಜಿ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?