Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರು ಮಾಡಿದ ದೇವನಹಳ್ಳಿ ಕೋರ್ಟ್

ಕನ್ನಡ ನಾಮಫಲಕ ಅಳವಡಿಕೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಹಾಗೂ ಅಂಗಡಿ ಮುಂಗಟ್ಟುಗಳಿಗೆ ದಾಳಿ ನಡೆಸಿ ಇತರೆ ಭಾಷಾ ನಾಮಫಲಕ ಕಿತ್ತುಹಾಕಿದ ಪ್ರಕರಣ ಸಂಬಂಧ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಬಂಧಿಸಲಾಗಿತ್ತು. ಇವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌, ಜಾಮೀನು ಮಂಜೂರು ಮಾಡಿದೆ.

ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ಮಂಜೂರು ಮಾಡಿದ ದೇವನಹಳ್ಳಿ ಕೋರ್ಟ್
ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತು 29 ಮಂದಿ ಕಾರ್ಯಕರ್ತರಿಗೆ ಜಾಮೀನು ಮಂಜೂರು
Follow us
ನವೀನ್ ಕುಮಾರ್ ಟಿ
| Updated By: Rakesh Nayak Manchi

Updated on:Jan 06, 2024 | 5:49 PM

ದೇವನಹಳ್ಳಿ, ಜ.6: ಕನ್ನಡ ನಾಮಫಲಕ ಅಳವಡಿಕೆ ಹೋರಾಟದಲ್ಲಿ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ (Narayana Gowda) ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ ನ್ಯಾಯಾಧೀಶ ಬಿರಾದಾರ್ ದೇವೇಂದ್ರಪ್ಪ ಅವರಿದ್ದ ಪೀಠ, ನಾರಾಯಣಗೌಡ ಮತ್ತು ಇತರೆ 29 ಕಾರ್ಯಕರ್ತರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ನಾಮಫಲಕ ಧ್ವಂಸ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಕರವೇ ಬೆಂಗಳೂರು ನಗರದ ಯುವ ಘಟಕದ ಅಧ್ಯಕ್ಷ ಕಾರ್ತಿಕ್ ಗೌಡ, ಕಾರ್ಯಕರ್ತರಾದ ಶರತ್, ಲೋಕೇಶ್ ಗೌಡ, ಹೇಮಂತ್ ಅವರಿಗೆ ಇತ್ತೀಚೆಗೆ ಜಾಮೀನು ಮಂಜೂರಾಗಿ ಜೈಲಿನಿಂದ ಬಿಡುಗಡೆಯಾಗಿದ್ದರು. ಇವರಿಗೆ ಹಾರ ಹಾಕಿ ಪಟಾಕಿ ಸಿಡಿಸಿ ಕರವೇ ಕಾರ್ಯಕರ್ತರು ಬರಮಾಡಿಕೊಂಡರು.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿಂದ ನಾಲ್ವರು ಕರವೇ ಕಾರ್ಯಕರ್ತರ ಬಿಡುಗಡೆ

ಇತ್ತೀಚೆಗೆ ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ನಾಮಫಲಕ ರ್ಯಾಲಿ ನಡೆಸಿತ್ತು. ಅಂಗಡಿ ಮುಂಗಟ್ಟುಗಳು ನಾಮಫಲಕಗಳು ಶೇ 60ರಷ್ಟು ಕನ್ನಡದಲ್ಲಿ ಇರಬೇಕೆಂದು ಆಗ್ರಹಿಸಿತ್ತು. ಅಲ್ಲದೇ ರ್ಯಾಲಿ ವೇಳೆ ಬೇರೆ ಬೇರೆ ಭಾಷೆಗಳಲ್ಲಿದ್ದ ಅಂಗಡಿಗಳ ಬೋರ್ಡ್​ಗಳನ್ನು ಕಿತ್ತೆಸೆಯಲಾಗಿತ್ತು. ಈ ಸಂಬಂಧ ಪೊಲೀಸರು ನಾರಾಯಣಗೌಡ ಸೇರಿದಂತೆ ಹಲವು ಕರವೇ ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:38 pm, Sat, 6 January 24

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್