Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿಯಲ್ಲಿಯೂ ಮಂಗಳೂರು ರೀತಿಯ ಕೃತ್ಯ: ರೇಷನ್ ಕಾರ್ಡ್​​ಗೆ ಥಂಬ್ ಕೊಟ್ಟವರ ಖಾತೆಯಿಂದ ಹಣ ಮಾಯ

ಥಂಬ್ ಕೊಟ್ಟು ಬಂದವರ ಬ್ಯಾಂಕ್​ ಖಾತೆಗಳಿಂದ ಎರಡು ದಿನಗಳ ಬಳಿಕ ಹಣ ಮಾಯವಾಗಿದೆ. ಒಬ್ಬೊಬ್ಬರ ಬ್ಯಾಂಕ್ ಖಾತೆಯಿಂದ 10 ಸಾವಿರ ರೂಪಾಯಿ ಹಣ ಎಗರಿಸಲಾಗಿದೆ. ಈ ಬಗ್ಗೆ ಸಂತ್ರಸ್ತರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೇವನಹಳ್ಳಿ ಮತ್ತು ವಿಶ್ವನಾಥಪುರ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ.

ದೇವನಹಳ್ಳಿಯಲ್ಲಿಯೂ ಮಂಗಳೂರು ರೀತಿಯ ಕೃತ್ಯ: ರೇಷನ್ ಕಾರ್ಡ್​​ಗೆ ಥಂಬ್ ಕೊಟ್ಟವರ ಖಾತೆಯಿಂದ ಹಣ ಮಾಯ
ದೇವನಹಳ್ಳಿ: ರೇಷನ್ ಕಾರ್ಡ್​​ಗೆ ಥಂಬ್ ಕೊಟ್ಟವರ ಖಾತೆಯಿಂದ ಹಣ ಮಾಯ
Follow us
ನವೀನ್ ಕುಮಾರ್ ಟಿ
| Updated By: Ganapathi Sharma

Updated on: Nov 03, 2023 | 4:50 PM

ದೇವನಹಳ್ಳಿ, ನವೆಂಬರ್ 3: ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ ನೋಂದಣಿ ಮಾಡಿಕೊಂಡವರ ಆಧಾರ್ ಬಯೋಮೆಟ್ರಿಕ್​ಗೆ ಕನ್ನ ಹಾಕಿ ನಂತರ ಬ್ಯಾಂಕ್ ಖಾತೆಗಳಿಂದ ಸೈಬರ್ ವಂಚಕರು (Cyber Fraudsters) ಹಣ ಎಗರಿಸಿದ ಪ್ರಕರಣ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ (Devanahalli) ಕೂಡ ಅಂಥದ್ದೇ ಘಟನೆ ವರದಿಯಾಗಿದೆ. ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ (Sub Registrar office) ಹಾಗೂ ರೇಷನ್ ಕಾರ್ಡ್​​ಗೆ ಥಂಬ್ ಕೊಟ್ಟು ಬಂದವರ ಬ್ಯಾಂಕ್ ಖಾತೆಗಳಿಂದ ಹಣಕ್ಕೆ ಕನ್ನ ಹಾಕಲಾಗಿದೆ.

ಥಂಬ್ ಕೊಟ್ಟು ಬಂದವರ ಬ್ಯಾಂಕ್​ ಖಾತೆಗಳಿಂದ ಎರಡು ದಿನಗಳ ಬಳಿಕ ಹಣ ಮಾಯವಾಗಿದೆ. ಒಬ್ಬೊಬ್ಬರ ಬ್ಯಾಂಕ್ ಖಾತೆಯಿಂದ 10 ಸಾವಿರ ರೂಪಾಯಿ ಹಣ ಎಗರಿಸಲಾಗಿದೆ. ಈ ಬಗ್ಗೆ ಸಂತ್ರಸ್ತರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೇವನಹಳ್ಳಿ ಮತ್ತು ವಿಶ್ವನಾಥಪುರ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ.

ಥಂಬ್ ಕೊಟ್ಟು ಬಂದಿದ್ದನ್ನು ದುರ್ಬಳಕೆ ಮಾಡಿಕೊಂಡು ಹಣ ಎಗರಿಸಿದ ಶಂಕೆ ವ್ಯಕ್ತವಾಗಿದೆ. ದೇವನಹಳ್ಳಿ, ದೊಡ್ಡಬಳ್ಳಾಪುರ ಮತ್ತು ಹೊಸಕೋಟೆಯಲ್ಲಿ ಬ್ಯಾಂಕ್ ಖಾತೆಗಳಿಗೆ ಕನ್ನಹಾಕಲಾಗಿದೆ. ಹಣ ಕಳೆದುಕೊಂಡು ಕಂಗಾಲಾದ ಜನರು, ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಆಧಾರ್​​ ಫಿಂಗರ್​​ ಪ್ರಿಂಟ್​ಗೇ ಕನ್ನ, ಖಾತೆಯಿಂದ ಹಣ ವಿತ್​ಡ್ರಾ: ಮಂಗಳೂರಿನಲ್ಲಿ ಸೈಬರ್ ಚೋರರು ಹಣ ಎಗರಿಸುತ್ತಿದ್ದುದು ಹೀಗೆ

ಮಂಗಳೂರಿನಲ್ಲಿ ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ ನೋಂದಣಿ ಮಾಡಿ ಬಂದವರ ಫಿಂಗರ್ ಪ್ರಿಂಟ್ ಡೌನ್ ಲೋಡ್ ಮಾಡಿ ಸ್ಕ್ಯಾನ್ ಮಾಡುತ್ತಿದ್ದ ಸೈಬರ್ ವಂಚಕರು, ಅದನ್ನು ಬಳಸಿಕೊಂಡು ಬ್ಯಾಂಕ್ ಖಾತೆಗಳಿಗ್ಗೆ ಕನ್ನ ಹಾಕುತ್ತಿದ್ದ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಬ್ಯಾಂಕ್ ಖಾತೆಯಿಂದ ಹಣ ಲಪಟಾಯಿಸುತ್ತಿದ್ದ ಬಿಹಾರ ಮೂಲದ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು. ಆರೋಪಿಗಳು ತೆಲಂಗಾಣ, ಕರ್ನಾಟಕದ ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಈ ರೀತಿಯ ಕೃತ್ಯ ಎಸಗಿದ್ದು ತನಿಖೆಯಿಂದ ತಿಳಿದುಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ