AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಕುಡಿದ ನಶೆಯಲ್ಲಿ ಸಿಗರೇಟ್ ಹಚ್ಚಿ ನಿದ್ರೆಗೆ ಜಾರಿದ: ಧಗಧಗಿಸಿದ ಮನೆ, ಯುವಕ ಸಜೀವ ದಹನ

ತಾಯಿ ಮತ್ತು ಮಗ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಕುಟುಂಬ. ತಾಯಿ ಮತ್ತು ಮಗ ವಾಸವಿದ್ದ ಮನೆ ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ಸುಟ್ಟು ಕರಕಲು, ಸಜೀವ ದಹನ. ಮಗ ಆಗಾಗ ಕುಡಿದು ಮನೆಗೆ ಬರುತ್ತಿದ್ದನು. ಶುಕ್ರವಾರ ಸಂಜೆ ಸಹ ಕುಡಿದು ಮನೆಗೆ ಬಂದ ಮಗ ಅಮಲಿನಲ್ಲಿ ಸಿಗರೇಟ್​ ಹಚ್ಚಿ, ನಿದ್ದೆಗೆ ಜಾರಿದ್ದಾನೆ. ಮುಂದೇನಾಯ್ತು? ಇಲ್ಲಿದೆ ವಿವರ

ದೇವನಹಳ್ಳಿ: ಕುಡಿದ ನಶೆಯಲ್ಲಿ ಸಿಗರೇಟ್ ಹಚ್ಚಿ ನಿದ್ರೆಗೆ ಜಾರಿದ: ಧಗಧಗಿಸಿದ ಮನೆ, ಯುವಕ ಸಜೀವ ದಹನ
ಮೃತ ಉದಯ್, ಸುಟ್ಟು ಕರಕಲಾದ ಮನೆ
ನವೀನ್ ಕುಮಾರ್ ಟಿ
| Edited By: ವಿವೇಕ ಬಿರಾದಾರ|

Updated on:Jul 19, 2025 | 6:19 PM

Share

ದೇವನಹಳ್ಳಿ, ಜುಲೈ 19: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಕನ್ನಮಂಗಲ ಕಾಲೋನಿಯಲ್ಲಿನ ಮನೆಯೊಂದು ಶುಕ್ರವಾರ (ಜು.18) ಸಂಜೆ ಧಗಧಗಿಸಿ ಉರಿದು, ಸುಟ್ಟು ಕರಕಲಾಗಿದೆ. ಮನೆಯಲ್ಲಿ ಮಲಗಿದ್ದ ಯುವಕ ಸಜೀವ ದಹನವಾಗಿದ್ದಾನೆ. ಉದಯ್ ಮೃತ ದುರ್ದೈವಿ. ಕನ್ನಮಂಗಲ ಕಾಲೋನಿಯಲ್ಲಿ ನರಸಮ್ಮ ಮತ್ತು ಮೃತ ಉದಯ್ ತಾಯಿ-ಮಗ ವಾಸ ಮಾಡುತ್ತಿದ್ದರು. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಶುಕ್ರವಾರ (ಜು.18) ಸಂಜೆ ಉದಯ್​ ಕೆಲಸ ಮುಗಿಸಿಕೊಂಡು, ಕುಡಿದು ಮನೆಗೆ ಬಂದಿದ್ದಾನೆ. ಮನೆಯಲ್ಲಿ ತಾಯಿ ನರಸಮ್ಮ ಇರಲಿಲ್ಲ. ಎಣ್ಣೆ ನಶೆಯಲ್ಲಿ ಕೋಣೆಯೊಳಗೆ ಮಲಗಿದವನಿಗೆ ಧೂಮಪಾನ ಮಾಡಬೇಕು ಅಂತ ಬಯಕೆ ಆಗಿದೆ. ಸಿಗರೇಟ್ ಹಚ್ಚಿ ಸೇದಿದ್ದಾನೆ. ಕೊನೆಗೆ ಕಿಡಿಯನ್ನು ಆರಿಸದೆ ನಶೆಯಲ್ಲಿ ಹಾಗೆ ನಿದ್ದೆಗೆ ಜಾರಿದ್ದಾನೆ. ಸಿಗರೇಟ್​ ಕಿಡಿ ಕೋಣೆಯಲ್ಲಿನ ಬಟ್ಟೆಗಳಿಗೆ ತಗುಲಿದ್ದು, ಬೆಂಕಿ ಹೊತ್ತಿಕೊಂಡಿದೆ. ಕ್ಷಣ ಮಾತ್ರದಲ್ಲಿ ಮನೆಯ ತುಂಬ ಬೆಂಕಿ ಆವರಿಸಿದೆ. ಬೆಂಕಿ ಹೊತ್ತಿಕೊಂಡರೂ ನಶೆಯಲ್ಲಿದ್ದ ಉದಯ್​ಗೆ ಎಚ್ಚರವಾಗಿಲ್ಲ. ಕುಡಿದು ನಶೆಯಲ್ಲಿ ಮಲಗಿದ್ದ ಉದಯ್​ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಚಿರನಿದ್ರೆಗೆ ಜಾರಿದ್ದಾನೆ.

ಇದನ್ನೂ ಓದಿ: ಎಣ್ಣೆ ಪಾರ್ಟಿಯಲ್ಲಿ ಗಲಾಟೆ: 15 ನಿಮಿಷ ಕಲ್ಲಿನಿಂದ ತಲೆ ಜಜ್ಜಿ ಸ್ನೇಹಿತನ ಹತ್ಯೆ

ಇದನ್ನೂ ಓದಿ
Image
ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆಗೆ ಬೆದರಿಕೆ ಹಾಕಿ ಸಾಮೂಹಿಕ ಅತ್ಯಾಚಾರ
Image
ನೆಲಮಂಗಲ: ನೀರಿನ ಹಂಡೆಯಲ್ಲಿ ಮುಳುಗಿಸಿ ಮಗು ಕೊಂದ ತಾಯಿ
Image
ಯುವಕನಿಗೆ ಹಲ್ಲೆ ಕೇಸ್​: ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದಾಕೆ ಬಂಧನ
Image
ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಹಲ್ಲೆ

ದಟ್ಟ ಹೊಗೆ ಹಾಗೂ ಬೆಂಕಿಯ ಕಿಡಿ ಕಂಡ ಅಕ್ಕ ಪಕ್ಕದವರು ಮನೆ ಬಳಿ ಬಂದು ನೋಡಿದಾಗ ಮನೆ ಹೊತ್ತಿ ಉರಿಯುತ್ತಿತ್ತು. ಕೂಡಲೇ ಸ್ಥಳಿಯರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ಆದರೆ, ಅಷ್ಟೊತ್ತಿಗಾಗಲೆ ನಶೆಯಲ್ಲಿ ನಿದ್ದೆಗೆ ಜಾರಿದ್ದ ಉದಯ್ ಸುಟ್ಟು ಕರಕಲಾಗಿದ್ದನು. ಮಗನ ಸಾವು ಕಂಡು ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಮಗನ ಸಾವು ಮತ್ತು ಮನೆಯ ದುಸ್ಥಿತಿ ಕಂಡು ವೃದ್ದ ತಾಯಿಗೆ ಬರಸಿಡಿಲು ಬಡಿದಂತಾಗಿದೆ. ಪ್ರಕರಣ ಸಂಬಂಧ ದೊಡ್ಡಬೆಳವಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:17 pm, Sat, 19 July 25

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು