AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಮಕ್ಕಳನ್ನ ಬಕೆಟ್​ನಲ್ಲಿ ಮುಳುಗಿಸಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ, ತಾಯಿ ಬಚಾವ್​​

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ತನ್ನ ಮಕ್ಕಳನ್ನು ಬಕೆಟ್​ನಲ್ಲಿ ಮುಳುಗಿಸಿ ಕೊಂದು ಬಳಿಕ ತಂದೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದರುವಂತಹ ಘಟನೆ ನಡೆದಿದೆ. ಘಟನೆಯಲ್ಲಿ ಪತ್ನಿ ಬಚಾವ್​ ಆಗಿದ್ದಾರೆ. ಹೊಸಕೋಟೆ ಪೊಲೀಸರ ಪತ್ನಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಷ್ಟಕ್ಕೆ ನಡೆದದ್ದೇನು ಇಲ್ಲಿದೆ ಮಾಹಿತಿ.   

ದೇವನಹಳ್ಳಿ: ಮಕ್ಕಳನ್ನ ಬಕೆಟ್​ನಲ್ಲಿ ಮುಳುಗಿಸಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ, ತಾಯಿ ಬಚಾವ್​​
ಪ್ರಾತಿನಿಧಿಕ ಚಿತ್ರImage Credit source: Hindustan Times
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 14, 2025 | 10:55 AM

Share

ದೇವನಹಳ್ಳಿ, ಸೆಪ್ಟೆಂಬರ್​​ 14: ಇಬ್ಬರು ಮಕ್ಕಳನ್ನು (children) ಬಕೆಟ್​ನಲ್ಲಿ ಮುಳುಗಿಸಿ ಕೊಂದು ಬಳಿಕ ತಂದೆ (father) ಕೂಡ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊರಗಡೆ ಹೋಗಿದ್ದ ಪತ್ನಿ ಮನೆಗೆ ಬಂದು ನೋಡಿದಾಗ ಆಘಾತಗೊಂಡಿದ್ದಾರೆ. ಬಳಿಕ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಮುಂದಾಗುತ್ತಿದ್ದಂತೆ ಸ್ಥಳಿಯರು ರಕ್ಷಣೆ ಮಾಡಿದ್ದಾರೆ.

ನಡೆದದ್ದೇನು? 

ಶಿವು ಮತ್ತು ಮಂಜುಳಾ ಪ್ರೀತಿಸಿ ಮದುವೆಯಾಗಿದ್ದರು. ಕೆಲಸಕ್ಕೆ ಹೋಗುತ್ತಿದ್ದ ವೇಳೆ ಪ್ರೀತಿ ಮಾಡಿದ್ದು, ಅನ್ಯ ಜಾತಿಯಾಗಿದ್ದ ಕಾರಣ ಪೋಷಕರ ವಿರೋಧದ ನಡುವೆ ಮದುವೆ ಮಾಡಿಕೊಂಡಿದ್ದರು. ಮದುವೆ ನಂತರ ಚೆನ್ನಾಗಿದ್ದ ಕುಟುಂಬಕ್ಕೆ ಅಪಘಾತದ ಬರೆ ಬಿದ್ದಿತ್ತು.

ಇದನ್ನೂ ಓದಿ: ಮೈಸೂರು: ಪರಿಹಾರದ ಹಣಕ್ಕಾಗಿ ಪತಿಯನ್ನ ಕೊಲೆ ಮಾಡಿ ಹುಲಿ ಕೊಂದಿದೆ ಎಂದ ಪತ್ನಿ!

ಇದನ್ನೂ ಓದಿ
Image
ಡ್ರಗ್ ಮಾಫಿಯಾಗೆ ಖಾಕಿ ಲಿಂಕ್: ಇನ್ಸ್‌ಪೆಕ್ಟರ್‌ ಸೇರಿ 11 ಸಿಬ್ಬಂದಿ ಅಮಾನತು
Image
ಮೈಸೂರು: ಪರಿಹಾರದ ಹಣಕ್ಕಾಗಿ ಪತಿಯನ್ನ ಕೊಲೆ ಮಾಡಿ ಹುಲಿ ಕೊಂದಿದೆ ಎಂದ ಪತ್ನಿ
Image
ಬೆಂಗಳೂರು: ವಾಕಿಂಗ್ ಮಾಡ್ತಿದ್ದ ನಿವೃತ್ತ ಎಸಿಪಿ ಮೇಲೆ ಹಲ್ಲೆ, ರಾಬರಿ
Image
ಪ್ರೇಮಿ ಕೈಯಲ್ಲೇ ಪತಿಯ ಕೊಲೆಗೆ ಯತ್ನಿಸಿದ ಪತ್ನಿ, ರಹಸ್ಯ ಬಯಲಾಗಿದ್ದೇ ರೋಚಕ

ರಸ್ತೆ ಅಪಘಾತದಲ್ಲಿ ಶಿವು ಕಾಲು ಮುರಿದುಕೊಂಡು ಆಸ್ವತ್ರೆ ಪಾಲಾಗಿದ್ದ. ಎರಡು ಮನೆಯವರ ಸಹಕಾರವಿಲ್ಲದ ಕುಟುಂಬ ಕಾರಣ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಮನೆ ನಿರ್ವಹಣೆಗೆ ಮಹಿಳೆ ಕೆಲಸಕ್ಕೆ ಹೋಗ್ತಿದ್ರೆ, ಗಂಡ ಮನೆಯಲ್ಲೆ ಇರ್ತಿದ್ದ. ಇತ್ತೀಚೆಗೆ ಪತ್ನಿ ಶೀಲದ ಮೇಲೂ ಶಿವು ಅನುಮಾನ ಪಡುತ್ತಿದ್ದ. ಜೊತೆಗೆ ಸಾಲ ಹೆಚ್ಚಾಗಿ ಹಣವಿಲ್ಲದ ಕಾರಣ ಎರಡು ಮೂರು ತಿಂಗಳಿಂದೆಯೇ ದಂಪತಿ ಸಾಯುವ ನಿರ್ಧಾರ ಮಾಡಿದ್ದರು. ತಾವು ಸತ್ತರೆ ಮಕ್ಕಳು ತಬ್ಬಲಿಗಳಾಗ್ತಾರೆ ಅಂತ ಅವರನ್ನು ಸಾಯಿಸೋಣ ಅಂತ ನಿರ್ಧರಿಸಿದ್ದರು.

ಶನಿವಾರ ತಿಂಡಿ ತರಲು ಮಂಜುಳಾ ನನ್ನು ರಾತ್ರಿ ಅಂಗಡಿಗೆ ಕಳಿಸಿದ್ದ ಶಿವು, ಈ ವೇಳೆ ಮಕ್ಕಳಿಬ್ಬರಿಗೂ ವೇಲ್​ನಿಂದ ಕುತ್ತಿಗೆ ಬಿಗಿದಿದ್ದ. ಆದರೆ ವೇಲ್​​ನಿಂದ ಸಂಪೂರ್ಣ ಜೀವ ಹೋಗದ ಕಾರಣ ಮತ್ತೆ ಇಬ್ಬರನ್ನು ಬಕೆಟ್​ನಲ್ಲಿ ಮುಳುಗಿಸಿ ಕೊಲೆ ಮಾಡಿದ್ದ. ಮಕ್ಕಳಿಬ್ಬರ ಸಾವು ಖಚಿತ ಮಾಡಿಕೊಂಡು ಬಳಿಕ ಶಿವು ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ವಾಕಿಂಗ್ ಮಾಡ್ತಿದ್ದ ನಿವೃತ್ತ ಎಸಿಪಿ ಮೇಲೆ ಹಲ್ಲೆ, ರಾಬರಿ; ಚಿನ್ನಾಭರಣ ದೋಚಿದ್ದ ಮೂವರು ಲಾಕ್

ಇತ್ತ ಅಂಗಡಿಗೆ ಹೋಗಿದ್ದ ಮಂಜಳಾ ಮನೆಗೆ ಬಂದು ನೋಡುವಷ್ಟರಲ್ಲಿ ಗಂಡ ಮತ್ತು ಮಕ್ಕಳು ಸಾವಿನ ಮನೆ ಸೇರಿದ್ದರು. ಗಂಡ ಮಕ್ಕಳ ಸಾವು ಕಂಡು ಗೋಗರೆದ ಮಂಜಳಾ, ಬಳಿಕ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಮುಂದಾಗಿದ್ದಳು. ಅಷ್ಟರಲ್ಲಿ ಸ್ಥಳಿಯರು ರಕ್ಷಣೆ ಮಾಡಿ ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಮಂಜಳಾ ಹೊಸಕೋಟೆ ಪೊಲೀಸರ ವಶದಲ್ಲಿದ್ದಾಳೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ