AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ದೇವನಹಳ್ಳಿ: ಅವ್ಯವಸ್ಥೆಗಳ ಆಗರವಾದ ಸರ್ಕಾರಿ ಹಾಸ್ಟೇಲ್​ಗಳು; ಹಳೆ ಬೆಡ್, ಚಾಪೆ ಮೇಲೆಯೇ ಮಕ್ಕಳ ನಿದ್ದೆ

ಅದು ಬಡ ಮಕ್ಕಳಿಗೆ ಅನುಕೂಲವಾಗಲಿ ಎಂದು ಸರ್ಕಾರವೇ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ವಸತಿ ನಿಲಯಗಳು. ಪ್ರತಿವರ್ಷ ಇಲಾಖೆಗೆ ಎಂದು ಕೋಟಿ ಕೋಟಿ ಹಣ ಮೀಸಲಿಡುತ್ತಿದ್ದರು. ಆದ್ರೆ, ವರ್ಷಗಳಿಂದ ಸೌಲತ್ತುಗಳೇ ಆ ಹಾಸ್ಟೇಲ್​ಗಳಿಂದ ದೂರವಾಗಿದ್ದು, ಹಾಸ್ಟೇಲ್ ಅವ್ಯವಸ್ಥೆಯ ವಿರುದ್ದ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

 ದೇವನಹಳ್ಳಿ: ಅವ್ಯವಸ್ಥೆಗಳ ಆಗರವಾದ ಸರ್ಕಾರಿ ಹಾಸ್ಟೇಲ್​ಗಳು; ಹಳೆ ಬೆಡ್, ಚಾಪೆ ಮೇಲೆಯೇ ಮಕ್ಕಳ ನಿದ್ದೆ
ಸರ್ಕಾರಿ ಹಾಸ್ಟೇಲ್​ಗಳ ಅವ್ಯವಸ್ಥೆ
ನವೀನ್ ಕುಮಾರ್ ಟಿ
| Edited By: |

Updated on: Nov 18, 2023 | 7:24 PM

Share

ಬೆಂಗಳೂರು ಗ್ರಾಮಾಂತರ, ನ.18: ಹೊರಗಿನಿಂದ ಕಟ್ಟಡ ಸುಸಜ್ಜಿತವಾಗಿದ್ದು, ಅಚ್ಚು ಕಟ್ಟಾಗಿ ನಿರ್ವಹಣೆ ಮಾಡಿದ್ದಾರೆ. ಇಷ್ಟೆಲ್ಲ ಚೆನ್ನಾಗಿರಬೇಕಾದರೆ, ಒಳಗಡೆಯೂ ಉತ್ತಮವಾಗೆ ಇರುತ್ತದೆ ಎಂದು ಎಲ್ಲರೂ ಅಂದುಕೊಳ್ಳುವುದು ಸಹಜ. ಆದ್ರೆ, ಮಕ್ಕಳು ಆಟ-ಪಾಠ ಮಾಡಿ ಮಲಗಬೇಕಾದರೆ, ಬೇಕಾದ ಸುಸಜ್ಜಿತ ಬೇಡ್(Bed)​ಗಳ ವ್ಯವಸ್ಥೆಯೇ ಇಲ್ಲವಾಗಿದೆ. ತಿಗಣೆ ಹಾಗೂ ದುರ್ವಾಸನೆ ಬೀರುವ ಇದೇ ಬೆಡ್​ಗಳಲ್ಲಿ ಅವಸ್ಥೆ ಪಡುತ್ತಿದ್ದಾರೆ. ದೇವನಹಳ್ಳಿ(Devanahalli) ತಾಲೂಕಿನ ವಿಜಯಪುರ ಸೇರಿದಂತೆ ಬಹುತೇಕ ಹಾಸ್ಟೇಲ್​ಗಳಲ್ಲಿ ಇದೇ ಪರಿಸ್ಥಿತಿ ಇದೆಯಾಗಿದೆ.

ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಬಿಸಿಎಂ ಹಾಸ್ಟೇಲ್​ಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದು, ಪ್ರತಿ ವರ್ಷ ಅಥವಾ ಎರಡು ವರ್ಷಕ್ಕೊಮ್ಮೆ ವಿದ್ಯಾರ್ಥಿಗಳಿಗೆ ಹೊಸ ಬೆಡ್​ಗಳನ್ನು ನೀಡುತ್ತಿತ್ತು. ಆದ್ರೆ, ಕೊರೊನಾ ಕಾರಣದಿಂದಾಗಿ ಕಳೆದ ಐದು ವರ್ಷದಿಂದ ಬೆಡ್​ಗಳನ್ನು ನೀಡಿದ್ದು, ಬಿಟ್ಟರೆ ಈವರೆಗೂ ಹೊಸ ಹಾಸಿಗೆಗೆಳನ್ನು ನೀಡಿಲ್ಲ. ಹೀಗಾಗಿ ಕಳೆದ ನಾಲ್ಕು ವರ್ಷಗಳಿಂದ ಹಾಸ್ಟೇಲ್​ಗಳಿಗೆ ಬೆಡ್​ಗಳು ಬಾರದ ಹಿನ್ನೆಲೆಯಲ್ಲಿ ಬೆಡ್​ಗಳಿಲ್ಲದೆ ಚಾಪೆಗಳನ್ನು ಹಾಸಿಕೊಂಡು ವಿದ್ಯಾರ್ಥಿಗಳು ಮಲಗುವ ದುಸ್ಥಿತಿ ಎದುರಾಗಿದೆ.

ಇದನ್ನೂ ಓದಿ:ಶಿವಮೊಗ್ಗ: ಬಿಸಿಎಂ ಹಾಸ್ಟೇಲ್​ಗಳ ರೇಷನ್​ ದುರ್ಬಳಕೆ, ಟ್ಯೂಷನ್​ನಲ್ಲಿ ಗೋಲ್​ಮಾಲ್; ಹೇಳೋರು ಇಲ್ಲ, ಕೇಳೋರು ಇಲ್ಲ

ಅಲ್ಲದೆ ಇರುವ ಹಳೆ ಹಾಸಿಗೆಗೆಳಿಂದ ದುರ್ವಾಸನೆ ಹಾಗೂ ತಿಗಣೆಗಳು ಬರುತ್ತಿದ್ದು, ಸರಿಯಾಗಿ ನಿದ್ದೆ ಮಾಡುವುದಕ್ಕೂ ಹಾಸ್ಟೇಲ್ ವಿದ್ಯಾರ್ಥಿಗಳಿಂದ ಆಗುತ್ತಿಲ್ಲ ಎಂದು ಪೋಷಕರು ಹಾಗೂ ಸಾರ್ವಜನಿಕರು ಅಸಮಧಾನ ಹೊರ ಹಾಕಿದ್ದಾರೆ. ಕಳೆದ ಕೋವಿಡ್ ಸಂಧರ್ಭದಲ್ಲಿ ಹಾಸ್ಟೆಲ್​ಗಳನ್ನು ಕ್ವಾರಂಟೈನ್ ಸೆಂಟರ್​ಗಳಾಗಿ ಮಾಡಿ ಮಕ್ಕಳ ಬೆಡ್​ಗಳನ್ನೆ ಬಳಸಿದ್ದು, ನಂತರ ಅದೇ ಬೆಡ್ಗ​ಳನ್ನು ಮಕ್ಕಳಿಗೆ ನೀಡಿದ್ದಾರಂತೆ. ಜೊತೆಗೆ ಹಲವು ಭಾರಿ ಬೆಡ್, ಲೈಬ್ರೇರಿ ಪಿರೋಪಕರಣ ಹಾಗೂ ಕ್ರೀಡಾ ಸಾಮಾಗ್ರಿಗಳನ್ನ ನೀಡಿ ಎಂದು ಕಳೆದ ಎರಡು ವರ್ಷಗಳಿಂದ ಮನವಿ ಮಾಡಿದರೂ ಯಾವುದೇ ಸೌಕರ್ಯ ಸಿಗುತ್ತಿಲ್ಲ ಎಂದು ವಿದ್ಯಾರ್ಥಿಗಳ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಈ ಕುರಿತು ಬೆಂಗಳೂರು ಗ್ರಾಮಾಂತರ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಪ್ರೇಮ ಅವರನ್ನ ಕೇಳಿದ್ರೆ ‘ನಾವು ಈಗಾಗಲೇ ಇಲಾಖೆ ವತಿಯಿಂದ ಪತ್ರ ಬರೆದಿದ್ದು, ಟೆಂಡರ್ ಮಾಡುತ್ತಿದ್ದಾರೆ. ಕೊರೊನಾ ಸಮಯದಲ್ಲಿ ಬೆಡ್​ಗಳನ್ನು ಬೇರೆಡೆ ಶಿಪ್ಟ್ ಮಾಡಿದ್ದ ಕಾರಣ ಜಿಲ್ಲೆಯಲ್ಲಿ ಮಾತ್ರವಲ್ಲದೆ, ಎಲ್ಲೆಡೆ ಸಮಸ್ಯೆಯಾಗಿದ್ದು, ಸಮಸ್ಯೆ ಬಗೆ ಹರಿಸುವ ಕೆಲಸ ಮಾಡುವುದಾಗಿ ಹೇಳುತ್ತಿದ್ದಾರೆ. ಒಟ್ಟಾರೆ ಪ್ರತಿವರ್ಷ ಸಮಾಜ ಕಲ್ಯಾಣ ಇಲಾಖೆ ಹಾಗೂ ವಸತಿ ಶಾಲೆಗಳಿಗೆ ಎಂದು ಕೋಟಿ ಕೋಟಿ ಹಣ ಬಜೆಟ್​ನಲ್ಲಿ ಮೀಸಲಿಡುತ್ತಿದ್ದರೂ ಸಮರ್ಪಕ ಮೂಲ ಸೌಕರ್ಯ ಬಡ ವಿದ್ಯಾರ್ಥಿಗಳಿಗೆ ಸಿಗದಿರುವುದು ನಿಜಕ್ಕೂ ವಿಪರ್ಯಾಸ. ಇನ್ನಾದರೂ ಸಮಾಜ ಕಲ್ಯಾಣ ಇಲಾಖೆ ಸಚಿವರು ಎಚ್ಚೆತ್ತು ಹಾಸ್ಟೇಲ್​ಗಳಿಗೆ ಮೂಲ ಸೌಕರ್ಯ ಕಲ್ಪಿಸುವ ಕೆಲಸ ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ