AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ದೇವನಹಳ್ಳಿ: ಅವ್ಯವಸ್ಥೆಗಳ ಆಗರವಾದ ಸರ್ಕಾರಿ ಹಾಸ್ಟೇಲ್​ಗಳು; ಹಳೆ ಬೆಡ್, ಚಾಪೆ ಮೇಲೆಯೇ ಮಕ್ಕಳ ನಿದ್ದೆ

ಅದು ಬಡ ಮಕ್ಕಳಿಗೆ ಅನುಕೂಲವಾಗಲಿ ಎಂದು ಸರ್ಕಾರವೇ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ವಸತಿ ನಿಲಯಗಳು. ಪ್ರತಿವರ್ಷ ಇಲಾಖೆಗೆ ಎಂದು ಕೋಟಿ ಕೋಟಿ ಹಣ ಮೀಸಲಿಡುತ್ತಿದ್ದರು. ಆದ್ರೆ, ವರ್ಷಗಳಿಂದ ಸೌಲತ್ತುಗಳೇ ಆ ಹಾಸ್ಟೇಲ್​ಗಳಿಂದ ದೂರವಾಗಿದ್ದು, ಹಾಸ್ಟೇಲ್ ಅವ್ಯವಸ್ಥೆಯ ವಿರುದ್ದ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

 ದೇವನಹಳ್ಳಿ: ಅವ್ಯವಸ್ಥೆಗಳ ಆಗರವಾದ ಸರ್ಕಾರಿ ಹಾಸ್ಟೇಲ್​ಗಳು; ಹಳೆ ಬೆಡ್, ಚಾಪೆ ಮೇಲೆಯೇ ಮಕ್ಕಳ ನಿದ್ದೆ
ಸರ್ಕಾರಿ ಹಾಸ್ಟೇಲ್​ಗಳ ಅವ್ಯವಸ್ಥೆ
ನವೀನ್ ಕುಮಾರ್ ಟಿ
| Edited By: |

Updated on: Nov 18, 2023 | 7:24 PM

Share

ಬೆಂಗಳೂರು ಗ್ರಾಮಾಂತರ, ನ.18: ಹೊರಗಿನಿಂದ ಕಟ್ಟಡ ಸುಸಜ್ಜಿತವಾಗಿದ್ದು, ಅಚ್ಚು ಕಟ್ಟಾಗಿ ನಿರ್ವಹಣೆ ಮಾಡಿದ್ದಾರೆ. ಇಷ್ಟೆಲ್ಲ ಚೆನ್ನಾಗಿರಬೇಕಾದರೆ, ಒಳಗಡೆಯೂ ಉತ್ತಮವಾಗೆ ಇರುತ್ತದೆ ಎಂದು ಎಲ್ಲರೂ ಅಂದುಕೊಳ್ಳುವುದು ಸಹಜ. ಆದ್ರೆ, ಮಕ್ಕಳು ಆಟ-ಪಾಠ ಮಾಡಿ ಮಲಗಬೇಕಾದರೆ, ಬೇಕಾದ ಸುಸಜ್ಜಿತ ಬೇಡ್(Bed)​ಗಳ ವ್ಯವಸ್ಥೆಯೇ ಇಲ್ಲವಾಗಿದೆ. ತಿಗಣೆ ಹಾಗೂ ದುರ್ವಾಸನೆ ಬೀರುವ ಇದೇ ಬೆಡ್​ಗಳಲ್ಲಿ ಅವಸ್ಥೆ ಪಡುತ್ತಿದ್ದಾರೆ. ದೇವನಹಳ್ಳಿ(Devanahalli) ತಾಲೂಕಿನ ವಿಜಯಪುರ ಸೇರಿದಂತೆ ಬಹುತೇಕ ಹಾಸ್ಟೇಲ್​ಗಳಲ್ಲಿ ಇದೇ ಪರಿಸ್ಥಿತಿ ಇದೆಯಾಗಿದೆ.

ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಬಿಸಿಎಂ ಹಾಸ್ಟೇಲ್​ಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದು, ಪ್ರತಿ ವರ್ಷ ಅಥವಾ ಎರಡು ವರ್ಷಕ್ಕೊಮ್ಮೆ ವಿದ್ಯಾರ್ಥಿಗಳಿಗೆ ಹೊಸ ಬೆಡ್​ಗಳನ್ನು ನೀಡುತ್ತಿತ್ತು. ಆದ್ರೆ, ಕೊರೊನಾ ಕಾರಣದಿಂದಾಗಿ ಕಳೆದ ಐದು ವರ್ಷದಿಂದ ಬೆಡ್​ಗಳನ್ನು ನೀಡಿದ್ದು, ಬಿಟ್ಟರೆ ಈವರೆಗೂ ಹೊಸ ಹಾಸಿಗೆಗೆಳನ್ನು ನೀಡಿಲ್ಲ. ಹೀಗಾಗಿ ಕಳೆದ ನಾಲ್ಕು ವರ್ಷಗಳಿಂದ ಹಾಸ್ಟೇಲ್​ಗಳಿಗೆ ಬೆಡ್​ಗಳು ಬಾರದ ಹಿನ್ನೆಲೆಯಲ್ಲಿ ಬೆಡ್​ಗಳಿಲ್ಲದೆ ಚಾಪೆಗಳನ್ನು ಹಾಸಿಕೊಂಡು ವಿದ್ಯಾರ್ಥಿಗಳು ಮಲಗುವ ದುಸ್ಥಿತಿ ಎದುರಾಗಿದೆ.

ಇದನ್ನೂ ಓದಿ:ಶಿವಮೊಗ್ಗ: ಬಿಸಿಎಂ ಹಾಸ್ಟೇಲ್​ಗಳ ರೇಷನ್​ ದುರ್ಬಳಕೆ, ಟ್ಯೂಷನ್​ನಲ್ಲಿ ಗೋಲ್​ಮಾಲ್; ಹೇಳೋರು ಇಲ್ಲ, ಕೇಳೋರು ಇಲ್ಲ

ಅಲ್ಲದೆ ಇರುವ ಹಳೆ ಹಾಸಿಗೆಗೆಳಿಂದ ದುರ್ವಾಸನೆ ಹಾಗೂ ತಿಗಣೆಗಳು ಬರುತ್ತಿದ್ದು, ಸರಿಯಾಗಿ ನಿದ್ದೆ ಮಾಡುವುದಕ್ಕೂ ಹಾಸ್ಟೇಲ್ ವಿದ್ಯಾರ್ಥಿಗಳಿಂದ ಆಗುತ್ತಿಲ್ಲ ಎಂದು ಪೋಷಕರು ಹಾಗೂ ಸಾರ್ವಜನಿಕರು ಅಸಮಧಾನ ಹೊರ ಹಾಕಿದ್ದಾರೆ. ಕಳೆದ ಕೋವಿಡ್ ಸಂಧರ್ಭದಲ್ಲಿ ಹಾಸ್ಟೆಲ್​ಗಳನ್ನು ಕ್ವಾರಂಟೈನ್ ಸೆಂಟರ್​ಗಳಾಗಿ ಮಾಡಿ ಮಕ್ಕಳ ಬೆಡ್​ಗಳನ್ನೆ ಬಳಸಿದ್ದು, ನಂತರ ಅದೇ ಬೆಡ್ಗ​ಳನ್ನು ಮಕ್ಕಳಿಗೆ ನೀಡಿದ್ದಾರಂತೆ. ಜೊತೆಗೆ ಹಲವು ಭಾರಿ ಬೆಡ್, ಲೈಬ್ರೇರಿ ಪಿರೋಪಕರಣ ಹಾಗೂ ಕ್ರೀಡಾ ಸಾಮಾಗ್ರಿಗಳನ್ನ ನೀಡಿ ಎಂದು ಕಳೆದ ಎರಡು ವರ್ಷಗಳಿಂದ ಮನವಿ ಮಾಡಿದರೂ ಯಾವುದೇ ಸೌಕರ್ಯ ಸಿಗುತ್ತಿಲ್ಲ ಎಂದು ವಿದ್ಯಾರ್ಥಿಗಳ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಈ ಕುರಿತು ಬೆಂಗಳೂರು ಗ್ರಾಮಾಂತರ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಪ್ರೇಮ ಅವರನ್ನ ಕೇಳಿದ್ರೆ ‘ನಾವು ಈಗಾಗಲೇ ಇಲಾಖೆ ವತಿಯಿಂದ ಪತ್ರ ಬರೆದಿದ್ದು, ಟೆಂಡರ್ ಮಾಡುತ್ತಿದ್ದಾರೆ. ಕೊರೊನಾ ಸಮಯದಲ್ಲಿ ಬೆಡ್​ಗಳನ್ನು ಬೇರೆಡೆ ಶಿಪ್ಟ್ ಮಾಡಿದ್ದ ಕಾರಣ ಜಿಲ್ಲೆಯಲ್ಲಿ ಮಾತ್ರವಲ್ಲದೆ, ಎಲ್ಲೆಡೆ ಸಮಸ್ಯೆಯಾಗಿದ್ದು, ಸಮಸ್ಯೆ ಬಗೆ ಹರಿಸುವ ಕೆಲಸ ಮಾಡುವುದಾಗಿ ಹೇಳುತ್ತಿದ್ದಾರೆ. ಒಟ್ಟಾರೆ ಪ್ರತಿವರ್ಷ ಸಮಾಜ ಕಲ್ಯಾಣ ಇಲಾಖೆ ಹಾಗೂ ವಸತಿ ಶಾಲೆಗಳಿಗೆ ಎಂದು ಕೋಟಿ ಕೋಟಿ ಹಣ ಬಜೆಟ್​ನಲ್ಲಿ ಮೀಸಲಿಡುತ್ತಿದ್ದರೂ ಸಮರ್ಪಕ ಮೂಲ ಸೌಕರ್ಯ ಬಡ ವಿದ್ಯಾರ್ಥಿಗಳಿಗೆ ಸಿಗದಿರುವುದು ನಿಜಕ್ಕೂ ವಿಪರ್ಯಾಸ. ಇನ್ನಾದರೂ ಸಮಾಜ ಕಲ್ಯಾಣ ಇಲಾಖೆ ಸಚಿವರು ಎಚ್ಚೆತ್ತು ಹಾಸ್ಟೇಲ್​ಗಳಿಗೆ ಮೂಲ ಸೌಕರ್ಯ ಕಲ್ಪಿಸುವ ಕೆಲಸ ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು