AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಆಸ್ತಿ ಕಬಳಿಸುವ ಉದ್ದೇಶದಿಂದ ಜಂಗಮ ಮಠದ ಪೀಠಾಧಿಪತಿ ಬದಲಿಸಲು ಹುನ್ನಾರ; ಗ್ರಾಮಸ್ಥರ ಆಕ್ರೋಶ

ಜಂಗಮ ಮಠವನ್ನು ಸ್ವತಂತ್ರವಾಗಿ ಹಾಗೆ ಉಳಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಜಂಗಮ ಮಠದ ದಯಾನಂದಶ್ರೀಗೆ ಆಹ್ವಾನ‌ ನೀಡದ್ದಕ್ಕೆ ಕಿಡಿಕಾರಿದ್ದಾರೆ.

ದೇವನಹಳ್ಳಿ: ಆಸ್ತಿ ಕಬಳಿಸುವ ಉದ್ದೇಶದಿಂದ ಜಂಗಮ ಮಠದ ಪೀಠಾಧಿಪತಿ ಬದಲಿಸಲು ಹುನ್ನಾರ; ಗ್ರಾಮಸ್ಥರ ಆಕ್ರೋಶ
ಗ್ರಾಮಸ್ಥರ ಆಕ್ರೋಶ
TV9 Web
| Edited By: |

Updated on:Nov 02, 2021 | 5:32 PM

Share

ದೇವನಹಳ್ಳಿ: ಜಂಗಮ ಮಠದ ಪೀಠಾಧಿಪತಿ ಬದಲಿಸಲು ಹುನ್ನಾರ ನಡೆಸಲಾಗಿದೆ. ಮಠದ‌ ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಸುವ ಉದ್ದೇಶ ಇಟ್ಟುಕೊಂಡು ಹುನ್ನಾರ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಹಾಗೂ ಸ್ವಾಮೀಜಿಗಳ ವಿರುದ್ಧ ಹುಣಸಮಾರ‌ನಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಣಸಮಾರ‌ನಹಳ್ಳಿಯ ಜಂಗಮ ಮಠದ‌ ಬಳಿ‌ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರ‌ನಹಳ್ಳಿಯ ಮಠದ ಬಗ್ಗೆ ಈ ಆರೋಪಗಳು ಕೇಳಿಬಂದಿದೆ. ಜಂಗಮ ಮಠವನ್ನು ಸ್ವತಂತ್ರವಾಗಿ ಹಾಗೆ ಉಳಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಜಂಗಮ ಮಠದ ದಯಾನಂದಶ್ರೀಗೆ ಆಹ್ವಾನ‌ ನೀಡದ್ದಕ್ಕೆ ಕಿಡಿಕಾರಿದ್ದಾರೆ.

ಜಂಗಮ ಮಠದ ಬಳಿ ಇಂದು ಹಾನಗಲ್ ಕುಮಾರಸ್ವಾಮಿಗಳ 154ನೇ ಜಯಂತ್ಯೋತ್ಸವ ಮತ್ತು ಧಾರ್ಮಿಕ ಸಭೆಯನ್ನು ಸ್ವಾಮಿಜಿಗಳು ನಡೆಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀಶೈಲ ಜಗದ್ಗರು, ಚೆನ್ನಸಿದ್ದರಾಮ, ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿ, ಶಾಮನೂರು ಶಿವಶಂಕರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸೇರಿದಂತೆ ಹಲವರು ಭಾಗಿ ಆಗಿದ್ದಾರೆ.

ಆದರೆ ಸಭೆಗೆ ಬಹಿಷ್ಕಾರ ಹಾಕಿ ಗ್ರಾಮಸ್ಥರಿಂದ ಮಠಾಧೀಶರು ಮುಖಂಡರ ವಿರುದ್ದ ಆಕ್ರೋಶ ಕೇಳಿಬಂದಿದೆ. ಜಂಗಮ ಮಠವನ್ನು ಸ್ವತಂತ್ರವಾಗಿ ಹಾಗೆ ಉಳಿಸುವಂತೆ ಪಟ್ಟು ಹಿಡಿಯಲಾಗಿದೆ. ಜಂಗಮ ಮಠದ ದಯಾನಂದ ಸ್ವಾಮೀಜಿಗೆ ಆಹ್ವಾನ‌ ನೀಡದೆ ಕಾರ್ಯಕ್ರಮ ಆಯೋಜಿಸಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಸ್ಥಳದಲ್ಲಿ ಡಿಸಿಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ಪ್ರಯಕ್ತ ಸಿದ್ದಗಂಗಾ ಮಠದ ಹತ್ತು ಸಾವಿರ ಮಕ್ಕಳಿಂದ ಕನ್ನಡ ಹಾಡುಗಳ ಗಾಯನ‌

ಇದನ್ನೂ ಓದಿ: ದಾವಣಗೆರೆ: ಯಶಸ್ವಿ ಚಿಕಿತ್ಸೆ ನಂತರ ಮಠಕ್ಕೆ ಮರಳಿದ ಕೇದಾರ ಭೀಮಾಶಂಕರಲಿಂಗ ಜಗದ್ಗುರುಗಳು

Published On - 5:28 pm, Tue, 2 November 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್