AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಸಿನ ಮನೆ ಕನಸು ಕಂಡವರಿಗೆ ಶಾಕ್: ಉಳ್ಳವರಿಗಾಗಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ

ದೇವನಹಳ್ಳಿ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮದಲ್ಲಿ ಬಡವರಿಗೆ ನಿವೇಶನ ಹಂಚಿಕೆ ಹೆಸರಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಭಾರಿ ಗೋಲ್ಮಾಲ್ ಆರೋಪ ಕೇಳಿಬಂದಿದೆ. ಸಮತಟ್ಟಾದ ಭೂಮಿಯನ್ನು ಪ್ರಭಾವಿಗಳಿಗೆ ಮೀಸಲಿಟ್ಟು, 20-30 ಅಡಿ ಆಳದ ಕ್ವಾರಿ ಜಾಗವನ್ನು ಬಡವರಿಗೆ ಮಂಜೂರು ಮಾಡಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಕನಸಿನ ಮನೆ ಕನಸು ಕಂಡವರಿಗೆ ಶಾಕ್: ಉಳ್ಳವರಿಗಾಗಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ
ಕ್ವಾರಿ ಜಾಗ
ನವೀನ್ ಕುಮಾರ್ ಟಿ
| Edited By: |

Updated on: Dec 19, 2025 | 7:24 PM

Share

ದೇವನಹಳ್ಳಿ, ಡಿಸೆಂಬರ್​ 19: ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎನ್ನುವ ಗಾದೆ ಮಾತು ಒಂದಿದೆ. ಈ ಗಾದೆ ಮಾತು ಇದೀಗ ನಗರದ ಹೊರವಲಯದ ಗ್ರಾಮಸ್ಥರಿಗೆ ಅನ್ವಯವಾಗುತ್ತಿದೆ. ದಶಕಗಳ ಕನಸು ನನಸಾಯಿತು ಅಂತ ಖುಷಿ ಪಡುವಷ್ಟರಲ್ಲೇ ಕಂದಾಯ ಇಲಾಖೆ ಅಧಿಕಾರಿಗಳು (Revenue Department officials) ಮಾಡಿರುವ ಅದೊಂದು ಎಡವಟ್ಟಿನಿಂದ ಇದೀಗ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕಲ್ಲು ಕ್ವಾರಿಯಲ್ಲಿ ಜಮೀನು ಮಂಜೂರು

ಅಂದಹಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮಸ್ಥರು ಕಳೆದ ಹಲವು ವರ್ಷಗಳಿಂದ ಸರ್ಕಾರದಿಂದ ನಿವೇಶನ ಪಡೆಯಲು ಕಾದು ಕುಳಿತಿದ್ದರು. ಜೊತೆಗೆ ಜನರ ಮನವಿಗೆ ಸ್ಪಂದಿಸಿದ ಸ್ಥಳಿಯ ಶಾಸಕ ಹಾಗೂ ಸಚಿವ ಕೆಹೆಚ್ ಮುನಿಯಪ್ಪ ಪಂಚಾಯತಿಗಳಲ್ಲಿ ಭುಮಿ ಗುರುತಿಸಿ ನಿವೇಶನ ರಹಿತರಿಗೆ ನಿವೇಶನ ನೀಡಲು ಸೂಚಿಸಿದ್ದರು. ಅದರಂತೆ ನಿವೇಶನಗಳಿಗೆ ಸೂಕ್ತವಾದ ಜಾಗ ನೀಡಬೇಕಾದ ಕಂದಾಯ ಅಧಿಕಾರಿಗಳು ಇದೀಗ ಪಕ್ಕದಲ್ಲೇ ಸಮತಟ್ಟಾದ ಭೂಮಿ ಇದ್ದರು ಕಲ್ಲು ಕ್ವಾರಿಯ ಜಮೀನನ್ನ ಮಂಜೂರು ಮಾಡಿದ್ದಾರಂತೆ.

ಇದನ್ನೂ ಓದಿ: ಅಕ್ರಮ BPL ಕಾರ್ಡ್​​ದಾರರಿಗೆ ಭರ್ಜರಿ ಶಾಕ್​​ ಕೊಟ್ಟ ಸರ್ಕಾರ: 3 ತಿಂಗಳಲ್ಲಿ ರದ್ದಾದ ಪಡಿತರ ಚೀಟಿಗಳೆಷ್ಟು?

ಹೀಗಾಗೆ ಕಲ್ಲು ಕ್ವಾರಿಯ ಜಮೀನಿನಲ್ಲಿ ಯಾವ ರೀತಿ ಮನೆ ಕಟ್ಟಲು ಸದ್ಯವಾಗುತ್ತೆ ಅಂತ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ರೊಚಿಗೆದ್ದಿದ್ದು, ಕಲ್ಲು ಕ್ವಾರಿ ಜಮೀನು ಮಂಜೂರು ಮಾಡಿರುವುದಕ್ಕೆ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೆ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರಿಗೆ ಅನುಕೂಲ ಮಾಡಲು ಈ ರೀತಿ ಉತ್ತಮ ಜಾಗ ಬಿಟ್ಟು ಕಲ್ಲುಗಳಿರುವ ಜಾಗ ನೀಡಿದ್ದಾರೆ ಅಂತ ಪಿಡಿಒ ಸೇರಿದಂತೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರಾದ ಗೋವಿಂದರಾಜು ಎನ್ನುವವರು ಆಕ್ರೋಶ ಹೊರಹಾಕಿದ್ದಾರೆ.

ಆಶ್ರಯ ಯೋಜನೆಯಡಿಯಲ್ಲಿ ಬಡ ಜನರಿಗೆ ನಿವೇಶನ ನೀಡಲು ಕಲ್ಲು ಕ್ವಾರಿ ಜಾಗ ಗುರುತಿಸಿರುವುದು ಯಾವ ಮಾನದಂಡದ ಮೇಲೆ ಅಂತ ಇಓ ಮತ್ತು ತಹಶೀಲ್ದಾರ್​​​ಗೆ ಗ್ರಾಮಸ್ಥರು ದೂರು ನೀಡಿದ್ದು, ಕಲ್ಲು ಬಂಡೆ ಜಮೀನು ಹಿಂಪಡೆದು ಸಮತಟ್ಟಾದ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿದ್ದಾರೆ.

ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ ಹೇಳಿದ್ದಿಷ್ಟು 

ಇನ್ನು ಈ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ ಮಾತನಾಡಿದ್ದು, ಕಂದಾಯ ಇಲಾಖೆ ನಮ್ಮ ಆಶ್ರಯ ಯೋಜನೆಗೆ ಜಮೀನು ಮಂಜೂರು ಮಾಡಿದ್ದು, ನಾವು ಆ ಜಮೀನು ಕೊಡುವಂತೆ ಕೇಳಿಲ್ಲ. ಇದೀಗ ಅದು ನಿವೇಶನಗಳಿಗೆ ಯೋಗ್ಯವಾಗದ ಕಾರಣ ಆ ಜಮೀನನ್ನ ವಾಪಸ್ ಪಡೆಯುವಂತೆ ಡಿಸಿ ಅವರಿಗೆ ಪತ್ರ ಬರೆದಿದ್ದು, ಬದಲಿಯಾಗಿ ಯೋಗ್ಯವಾದ ಜಮೀನು ನಿವೇಶನಗಳಿಗೆ ನೀಡುವಂತೆ ಕೇಳಿದ್ದೇವೆ ಎಂದರು.

ಇದನ್ನೂ ಓದಿ: ಮುಡಾ ಕೇಸ್​​ ವಿಚಾರಣೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ: ವಾದ-ಪ್ರತಿವಾದ ಹೇಗಿತ್ತು?

ಒಟ್ಟಿನಲ್ಲಿ ಏರ್ಪೋಟ್ ಬಳಿ ಭೂಮಿ ಬೆಲೆ ಗಗನಕ್ಕೇರುತ್ತಿದ್ದು ಒಂದಿಚ್ಚು ಭೂಮಿ ಬಂಗಾರದ ಬೆಲೆಬಾಳುತ್ತಿದೆ. ಈ ನಡುವೆ ಸರ್ಕಾರದಿಂದ ನಿವೇಶನ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಅಧಿಕಾರಿಗಳ ಎಡವಟ್ಟಿನಿಂದ ಆತಂಕ ಶುರುವಾಗಿದೆ. ಸದ್ಯ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಆಶ್ರಯ ಯೋಜನೆಗೆ ಸೂಕ್ತ ಭೂಮಿ ನೀಡುವ ಕೆಲಸ ಮಾಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?