AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಸಿನ ಮನೆ ಕನಸು ಕಂಡವರಿಗೆ ಶಾಕ್: ಉಳ್ಳವರಿಗಾಗಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ

ದೇವನಹಳ್ಳಿ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮದಲ್ಲಿ ಬಡವರಿಗೆ ನಿವೇಶನ ಹಂಚಿಕೆ ಹೆಸರಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಭಾರಿ ಗೋಲ್ಮಾಲ್ ಆರೋಪ ಕೇಳಿಬಂದಿದೆ. ಸಮತಟ್ಟಾದ ಭೂಮಿಯನ್ನು ಪ್ರಭಾವಿಗಳಿಗೆ ಮೀಸಲಿಟ್ಟು, 20-30 ಅಡಿ ಆಳದ ಕ್ವಾರಿ ಜಾಗವನ್ನು ಬಡವರಿಗೆ ಮಂಜೂರು ಮಾಡಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಕನಸಿನ ಮನೆ ಕನಸು ಕಂಡವರಿಗೆ ಶಾಕ್: ಉಳ್ಳವರಿಗಾಗಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ
ಕ್ವಾರಿ ಜಾಗ
ನವೀನ್ ಕುಮಾರ್ ಟಿ
| Edited By: |

Updated on: Dec 19, 2025 | 7:24 PM

Share

ದೇವನಹಳ್ಳಿ, ಡಿಸೆಂಬರ್​ 19: ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎನ್ನುವ ಗಾದೆ ಮಾತು ಒಂದಿದೆ. ಈ ಗಾದೆ ಮಾತು ಇದೀಗ ನಗರದ ಹೊರವಲಯದ ಗ್ರಾಮಸ್ಥರಿಗೆ ಅನ್ವಯವಾಗುತ್ತಿದೆ. ದಶಕಗಳ ಕನಸು ನನಸಾಯಿತು ಅಂತ ಖುಷಿ ಪಡುವಷ್ಟರಲ್ಲೇ ಕಂದಾಯ ಇಲಾಖೆ ಅಧಿಕಾರಿಗಳು (Revenue Department officials) ಮಾಡಿರುವ ಅದೊಂದು ಎಡವಟ್ಟಿನಿಂದ ಇದೀಗ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕಲ್ಲು ಕ್ವಾರಿಯಲ್ಲಿ ಜಮೀನು ಮಂಜೂರು

ಅಂದಹಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮಸ್ಥರು ಕಳೆದ ಹಲವು ವರ್ಷಗಳಿಂದ ಸರ್ಕಾರದಿಂದ ನಿವೇಶನ ಪಡೆಯಲು ಕಾದು ಕುಳಿತಿದ್ದರು. ಜೊತೆಗೆ ಜನರ ಮನವಿಗೆ ಸ್ಪಂದಿಸಿದ ಸ್ಥಳಿಯ ಶಾಸಕ ಹಾಗೂ ಸಚಿವ ಕೆಹೆಚ್ ಮುನಿಯಪ್ಪ ಪಂಚಾಯತಿಗಳಲ್ಲಿ ಭುಮಿ ಗುರುತಿಸಿ ನಿವೇಶನ ರಹಿತರಿಗೆ ನಿವೇಶನ ನೀಡಲು ಸೂಚಿಸಿದ್ದರು. ಅದರಂತೆ ನಿವೇಶನಗಳಿಗೆ ಸೂಕ್ತವಾದ ಜಾಗ ನೀಡಬೇಕಾದ ಕಂದಾಯ ಅಧಿಕಾರಿಗಳು ಇದೀಗ ಪಕ್ಕದಲ್ಲೇ ಸಮತಟ್ಟಾದ ಭೂಮಿ ಇದ್ದರು ಕಲ್ಲು ಕ್ವಾರಿಯ ಜಮೀನನ್ನ ಮಂಜೂರು ಮಾಡಿದ್ದಾರಂತೆ.

ಇದನ್ನೂ ಓದಿ: ಅಕ್ರಮ BPL ಕಾರ್ಡ್​​ದಾರರಿಗೆ ಭರ್ಜರಿ ಶಾಕ್​​ ಕೊಟ್ಟ ಸರ್ಕಾರ: 3 ತಿಂಗಳಲ್ಲಿ ರದ್ದಾದ ಪಡಿತರ ಚೀಟಿಗಳೆಷ್ಟು?

ಹೀಗಾಗೆ ಕಲ್ಲು ಕ್ವಾರಿಯ ಜಮೀನಿನಲ್ಲಿ ಯಾವ ರೀತಿ ಮನೆ ಕಟ್ಟಲು ಸದ್ಯವಾಗುತ್ತೆ ಅಂತ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ರೊಚಿಗೆದ್ದಿದ್ದು, ಕಲ್ಲು ಕ್ವಾರಿ ಜಮೀನು ಮಂಜೂರು ಮಾಡಿರುವುದಕ್ಕೆ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೆ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರಿಗೆ ಅನುಕೂಲ ಮಾಡಲು ಈ ರೀತಿ ಉತ್ತಮ ಜಾಗ ಬಿಟ್ಟು ಕಲ್ಲುಗಳಿರುವ ಜಾಗ ನೀಡಿದ್ದಾರೆ ಅಂತ ಪಿಡಿಒ ಸೇರಿದಂತೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರಾದ ಗೋವಿಂದರಾಜು ಎನ್ನುವವರು ಆಕ್ರೋಶ ಹೊರಹಾಕಿದ್ದಾರೆ.

ಆಶ್ರಯ ಯೋಜನೆಯಡಿಯಲ್ಲಿ ಬಡ ಜನರಿಗೆ ನಿವೇಶನ ನೀಡಲು ಕಲ್ಲು ಕ್ವಾರಿ ಜಾಗ ಗುರುತಿಸಿರುವುದು ಯಾವ ಮಾನದಂಡದ ಮೇಲೆ ಅಂತ ಇಓ ಮತ್ತು ತಹಶೀಲ್ದಾರ್​​​ಗೆ ಗ್ರಾಮಸ್ಥರು ದೂರು ನೀಡಿದ್ದು, ಕಲ್ಲು ಬಂಡೆ ಜಮೀನು ಹಿಂಪಡೆದು ಸಮತಟ್ಟಾದ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿದ್ದಾರೆ.

ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ ಹೇಳಿದ್ದಿಷ್ಟು 

ಇನ್ನು ಈ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ ಮಾತನಾಡಿದ್ದು, ಕಂದಾಯ ಇಲಾಖೆ ನಮ್ಮ ಆಶ್ರಯ ಯೋಜನೆಗೆ ಜಮೀನು ಮಂಜೂರು ಮಾಡಿದ್ದು, ನಾವು ಆ ಜಮೀನು ಕೊಡುವಂತೆ ಕೇಳಿಲ್ಲ. ಇದೀಗ ಅದು ನಿವೇಶನಗಳಿಗೆ ಯೋಗ್ಯವಾಗದ ಕಾರಣ ಆ ಜಮೀನನ್ನ ವಾಪಸ್ ಪಡೆಯುವಂತೆ ಡಿಸಿ ಅವರಿಗೆ ಪತ್ರ ಬರೆದಿದ್ದು, ಬದಲಿಯಾಗಿ ಯೋಗ್ಯವಾದ ಜಮೀನು ನಿವೇಶನಗಳಿಗೆ ನೀಡುವಂತೆ ಕೇಳಿದ್ದೇವೆ ಎಂದರು.

ಇದನ್ನೂ ಓದಿ: ಮುಡಾ ಕೇಸ್​​ ವಿಚಾರಣೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ: ವಾದ-ಪ್ರತಿವಾದ ಹೇಗಿತ್ತು?

ಒಟ್ಟಿನಲ್ಲಿ ಏರ್ಪೋಟ್ ಬಳಿ ಭೂಮಿ ಬೆಲೆ ಗಗನಕ್ಕೇರುತ್ತಿದ್ದು ಒಂದಿಚ್ಚು ಭೂಮಿ ಬಂಗಾರದ ಬೆಲೆಬಾಳುತ್ತಿದೆ. ಈ ನಡುವೆ ಸರ್ಕಾರದಿಂದ ನಿವೇಶನ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಅಧಿಕಾರಿಗಳ ಎಡವಟ್ಟಿನಿಂದ ಆತಂಕ ಶುರುವಾಗಿದೆ. ಸದ್ಯ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಆಶ್ರಯ ಯೋಜನೆಗೆ ಸೂಕ್ತ ಭೂಮಿ ನೀಡುವ ಕೆಲಸ ಮಾಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ