AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಕು ನಾಯಿ ಬೊಗಳಿದ್ದಕ್ಕೆ ಮಾಲೀಕನಿಗೆ ಚಾಕು ಇರಿದ ದುಷ್ಕರ್ಮಿಗಳು; ಆರೋಪಿಗಳಿಗಾಗಿ ಶೋಧ

ಸಾಕು ನಾಯಿ ಬೊಗಳಿದ್ದಕ್ಕೆ ದುಷ್ಕರ್ಮಿಗಳು ಮಾಲೀಕನಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ(Devanahalli) ತಾಲೂಕಿನ ದೊಡ್ಡಚೀಮನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮಧುಕುಮಾರ್ (34) ಚಾಕು ಇರಿತಕ್ಕೊಳಗಾದ ವ್ಯಕ್ತಿ.

ಸಾಕು ನಾಯಿ ಬೊಗಳಿದ್ದಕ್ಕೆ ಮಾಲೀಕನಿಗೆ ಚಾಕು ಇರಿದ ದುಷ್ಕರ್ಮಿಗಳು; ಆರೋಪಿಗಳಿಗಾಗಿ ಶೋಧ
ಸಾಂದರ್ಭಿಕ ಚಿತ್ರ
ನವೀನ್ ಕುಮಾರ್ ಟಿ
| Edited By: |

Updated on:Dec 12, 2023 | 4:59 PM

Share

ಬೆಂಗಳೂರು ಗ್ರಾಮಾಂತರ, ಡಿ.12: ಸಾಕು ನಾಯಿ ಬೊಗಳಿದ್ದಕ್ಕೆ ದುಷ್ಕರ್ಮಿಗಳು ಮಾಲೀಕನಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ(Devanahalli) ತಾಲೂಕಿನ ದೊಡ್ಡಚೀಮನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮಧುಕುಮಾರ್ (34) ಚಾಕು ಇರಿತಕ್ಕೊಳಗಾದ ವ್ಯಕ್ತಿ. ಇನ್ನು ಚಾಕು ಇರಿತದ ರಭಸಕ್ಕೆ ಚಾಕುವಿನ ತುದಿಯ ಚೂರು, ದೇಹದೊಳಗೆ ಉಳಿದಿದೆ. ಆಸ್ಪತ್ರೆಯಲ್ಲಿ ವೈದ್ಯರು ಸ್ಕ್ಯಾನಿಂಗ್ ಮಾಡಿದಾಗ ಚಾಕುವಿನ ಚೂರು ಇರುವುದು ಬೆಳಕಿಗೆ ಬಂದಿದೆ.

ಘಟನೆ ವಿವರ

ನಿನ್ನೆ ರಾತ್ರಿ ಅದೇ ಗ್ರಾಮದ ಕಿಡಿಗೇಡಿಗಳು, ಮಧುಕುಮಾರ್​ ಜೊತೆಗೆ ನಮ್ಮನ್ನು ನೋಡಿ ನಿಮ್ಮ ನಾಯಿ ಬೊಗಳುತ್ತಿದೆ ಬುದ್ದಿ ಹೇಳುವುದಕ್ಕೆ ಆಗಲ್ವಾ ಎಂದು ಕ್ಯಾತೆ ತೆಗೆದು ಗಲಾಟೆ ಮಾಡಿದ್ದಾರೆ. ಜೊತೆಗೆ ನಾಯಿ ಮಾಲೀಕ ಮತ್ತು ಆಕೆಯ ಪತ್ನಿ ಮಮತಾ ಎಂಬುವವರಿಗೂ ದುಷ್ಕರ್ಮಿಗಳು ಥಳಿಸಿದ್ದಾರೆ. ಕೂಡಲೇ ಗಾಯಾಳು ಮಧುಕುಮಾರ್​ಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕುರಿತು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಅದೇ ಗ್ರಾಮದ ಸುನೀಲ್, ಅನೀಲ್ ದೇವರಾಜ್ ಹಾಗೂ ಅಜಯ್ ಎಂಬುವವರಿಂದ ಕೃತ್ಯ ನಡೆದಿರುವ ಆರೋಪ ಕೇಳಿಬಂದಿದೆ. ಇನ್ನು ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

ಇದನ್ನೂ ಓದಿ:ಬೀದಿ ನಾಯಿಗಳಿಗೆ ಆಹಾರ ಹಾಕಿದ ನೌಕಾಪಡೆಯ ಮಾಜಿ ಎಂಜಿನಿಯರ್​ ಮೇಲೆ ಕಟ್ಟಿಗೆಯಿಂದ ಬಡಿದು ಹಲ್ಲೆ

ಇನ್ನು ಚಿಕ್ಕಮಗಳೂರು ಜಿಲ್ಲೆಯ N.R. ಪುರ ತಾಲೂಕಿನ ಹಾಳ್ ಕರಗುಂದ ಗ್ರಾಮದಲ್ಲಿ ಸಾಕು ನಾಯಿ ಬೊಗಳಿದಕ್ಕೆ ಆ್ಯಸಿಡ್ ಹಾಕಿದ ಘಟನೆ ನಡೆದಿದೆ.  ಅಕ್ಕಪಕ್ಕದ ಮನೆಯವರ ನಡುವೆ ಹಳೆಯ ದ್ವೇಷ, ಮನಸ್ತಾಪ ಮಿತಿಮೀರಿ ಆಸಿಡ್ ದಾಳಿ ನಡೆಸುವರೆಗೂ ಬಂದು ತಲುಪಿದ್ದು ಜಸ್ಟ್‌ ಒಂದು ಸಾಕುನಾಯಿ ವಿಷಯಕ್ಕೆ ಈ ಕೃತ್ಯ ನಡೆದಿದೆ. ಜೇಮ್ಸ್ ಮತ್ತು ಸುಂದರಾಜ್ ಎಂಬ ಎರಡು ಕುಟುಂಬಗಳು ಅಕ್ಕಪಕ್ಕದಲ್ಲಿ ವಾಸವಿದ್ದು, ಹಳೆಯ ದ್ವೇಷ ಇದೀಗ ಆ್ಯಸಿಡ್​ ದಾಳಿ ನಡೆಸುವ ಮಟ್ಟಕ್ಕೆ ತಂದು ನಿಲ್ಲಿಸಿತ್ತು. ಇದೀಗ ಮತ್ತೊಂದು ಇಂತಹ ಘಟನೆ ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Tue, 12 December 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!